ಅಧಿಕಾರಿ ಎಂದು ನೌಕಾನೆಲೆ ಪ್ರವೇಶಿಸಲು ಯತ್ನಿಸಿದಾತ ಅಂದರ್

ಸುದ್ದಿ360 ಕಾರವಾರ,ಜು.06 : ಸಬ್ ಲೆಫ್ಟಿಂನೆಂಟ್ ಆಫೀಸರ್ ಎಂದು ನಕಲಿ ದಾಖಲೆ ಸೃಷ್ಠಿಸಿ ಇಲ್ಲಿನ ಐ.ಎನ್.ಎಸ್ ಕದಂಬ ನೌಕಾನೆಲೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ನೌಕನೆಲೆಯ ಅಧಿಕಾರಿಗಳು ಬಂಧಿಸಿದ್ದಾರೆ.

ತಾಲೂಕಿನ ಅರಗಾದಲ್ಲಿರುವ ನೌಕಾನೆಲೆಯ ಮುಖ್ಯ ದ್ವಾರಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿದ್ದ  ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಕಿರಣ್ ಎಸ್.ಆರ್ ಎಂಬಾತ  ತಾನು ಸಬ್ ಲೆಫ್ಟಿಂನೆಂಟ್ ಆಫೀಸರ್ ಎಂದು ಹೇಳಿ ನೌಕಾನೆಲೆ ಪ್ರವೇಶಿಸಲು ಯತ್ನಿಸಿದ್ದಾನೆ. ಡಿ.ಎಂ.ಪಿ.ಆರ್ ಅಡಿ ತಾನು ನೇಮಕಾತಿಯಾಗಿದ್ದೇನೆ ಎಂದು ಗುರುತಿನ ಚೀಟಿ ನೀಡಿದ್ದಾನೆ. ಆದರೆ ಆತ ನೀಡಿದ ದಾಖಲೆಗಳು ಹಾಗೂ ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ  ನಕಲಿ ಎಂದು ತಿಳಿದಿದೆ. ತಕ್ಷಣ ನೌಕಾನೆಲೆಯ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಳಿಕ ಕಾರವಾರ ಗ್ರಾಮೀಣ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!