ಪಬ್ ನಲ್ಲಿ‌ ವಿದ್ಯಾರ್ಥಿಗಳ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತಡೆ –ತಹಬದಿಗೆ ತಂದ ಪೊಲೀಸರು

ಸುದ್ದಿ360 ಮಂಗಳೂರು, ಜು.25: ನಗರದ ಬಲ್ಮಠದ ಪಬ್ ವೊಂದರಲ್ಲಿ‌‌ ಕಾಲೇಜು ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಕಾರಣದಿಂದ ಬಜರಂಗದಳ ಕಾರ್ಯಕರ್ತರು ಧಾಳಿ ನಡೆಸಿ ತಡೆಯೊಡ್ಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಎಲ್ಲರನ್ನೂ ಚದುರಿಸಿದ್ದಾರೆ. ನಗರದ ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಬೀಳ್ಕೊಡುಗೆ ಕಾರ್ಯಕ್ರಮದ ಅಂಗವಾಗಿ ಪಾರ್ಟಿ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಆರೋಪ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಪಬ್ ಗೆ ಪ್ರವೇಶಿಸಿ  ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಕೆಲಕಾಲ ಪಬ್ ನಲ್ಲಿ ಗೊಂದಲ ನಿರ್ಮಾಣವಾಗಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಸಂಘಟನೆ ಕಾರ್ಯಕರ್ತರನ್ನು ಚದುರಿಸಿದ್ದಾರೆ. ಬಳಿಕ ಎಲ್ಲ ವಿದ್ಯಾರ್ಥಿ‌ಗಳನ್ನು ಕಳುಹಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಅಸಭ್ಯ ವರ್ತನೆ ವಿಡಿಯೋ ವೈರಲ್ ಆಗಿತ್ತು. ಸೋಮವಾರ ರಾತ್ರಿ ಅದೇ ಕಾಲೇಜಿನ 30ಕ್ಕೂ ಅಧಿಕ ವಿದ್ಯಾರ್ಥಿಗಳು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!