ಸರಳ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ

ಸುದ್ದಿ360 ಹುಬ್ಬಳ್ಳಿ,ಜು.05:  ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ  ಅವರನ್ನು ನಗರದ ಉಣಕಲ್ ಬಳಿಯ ಪ್ರೆಸಿಡೆಂಟ್ ಹೊಟೇಲ್’ನ ಸ್ವಾಗತಕಾರರ ಕೌಂಟರ್ ಬಳಿ ಇಬ್ಬರು ದುಷ್ಕರ್ಮಿಗಳು ಚಾಕವಿನಿಂದ ಇರಿದು ಕೊಲೆ ಮಾಡಿರುವ ಪ್ರಕರಣ ಮಂಗಳವಾರ ಮಧ್ಯಾಹ್ನ‌ ನಡೆದಿದೆ.

ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿ ಆಗಿದ್ದಾರೆ. ನಲವತ್ತಕ್ಕು ಹೆಚ್ಚು ಬಾರಿ ಕುತ್ತಿಗೆ, ಹೊಟ್ಟೆಗೆ ಇರಿದು ಹತ್ಯೆ ಮಾಡಿರುವ ಹಾಗೂ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಬೆಳಗ್ಗೆ ಪ್ರಸಿಡೆಂಟ್ ಹೋಟೆಲ್ ಸ್ವಾಗತಕಾರರ ಕೌಂಟರ್ ನಲ್ಲಿ ಭಕ್ತರ ಸೋಗಿನಲ್ಲಿ ಕುಳಿತಿದ್ದ ಸ್ವಾಗತಕಾರರ ಹೈಡ್ರಾಮಾ ಸಿಸಿ ಟಿವಿಯಲ್ಲಿ ದಾಖಲಾಗಿದ್ದು. ಅವರ ಈ ಕೃತ್ಯ ನೋಡಿದವರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಕಮಿಷನರ್ ಲಾಭೂರಾಮ್, ಡಿಸಿಪಿ ಸಾಹಿಲ್ ಬಾಗ್ಲಾ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳ ಸಿಬ್ಬಂದಿ ಸ್ಥಳಪರಿಶೀಲನೆ ನಡೆಸುತ್ತಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!