ಸುರತ್ಕಲ್: ಯುವಕನ ಬರ್ಬರ ಹತ್ಯೆ – ಬಿಗಿ ಬಂದೋಬಸ್ತ್

ಸುದ್ದಿ360 ಮಂಗಳೂರು ಜು.28 : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮುಡಾ ಮಾರ್ಕೆಟ್ ಬಳಿ ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ಮಾರಕಾಸ್ತ್ರಗಳಿಂದ ಯುವಕೊಬ್ಬನ ಮೇಲೆರಗಿ ಕೊಲೆ ಮಾಡಿ ಪರಾರಿಯಾಗಿದೆ.

ದಾಳಿಯಿಂದ  ಗಂಭೀರ ಗಾಯಗೊಂಡ ಯುವಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ (23) ಹತ್ಯೆಗೀಡದ ಯುವಕ ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ 7.30ರ ಸುಮಾರಿಗೆ ಫಾಝಿಲ್ ಚಪ್ಪಲಿ ಖರೀದಿಸಲೆಂದು ಮುಡಾ ಮಾರ್ಕೆಟ್ ಬಳಿಯ ಚಪ್ಪಲಿ ಅಂಗಡಿಗೆ ಬಂದಿದ್ದಾನೆ. ಈ ವೇಳೆ ಇಬ್ಬರು ಯುವಕರು ಅಂಗಡಿಯೊಳಗೆ ಬಂದು ಫಾಝಿಲ್ಗೆ ಚೂರಿಯಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಗಾಬರಿಗೊಂಡ ಯುವಕ ಓಡಿ ಹೋಗಿ ಬಟ್ಟೆ ಅಂಗಡಿಯೊಳಗೆ ಹೋಗಿದ್ದಾನೆ. ಅಲ್ಲಿಗೂ ಬೆನ್ನಟ್ಟಿ ಬಂದ ಅಪರಿಚಿತರು ಚೂರಿಯಿಂದ ಇರಿದಿದ್ದಾರೆ. ಈ ವೇಳೆ ಅಂಗಡಿಯವರು ಅಪರಿಚಿತರಿಗೆ ಕಲ್ಲು ಹೊಡೆದು ಬೆನ್ನಟ್ಟುವ ಪ್ರಯತ್ನ ಮಾಡಿದ್ಧಾರೆ.

ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್ ಎಂಆರ್ ಪಿ ಎಲ್ ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.

ಕಳೆದ ಮಂಗಳವಾರ ರಾತ್ರಿ ಹತ್ಯೆಗೀಡಾಗಿದ್ದ ಪ್ರವೀಣ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದ ವೇಳೆಯೇ ಈ ಹತ್ಯೆ ನಡೆದಿದ್ದು, ಸುರತ್ಕಲ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

admin

admin

Leave a Reply

Your email address will not be published. Required fields are marked *

error: Content is protected !!