ಎರಡು ಕುಟುಂಬಗಳ ನಡುವೆ ಜಮೀನು ವಿವಾದ: ಇಡೀ ಗ್ರಾಮ ಉದ್ವಿಗ್ನ

ಸುದ್ದಿ360 ಬೆಳಗಾವಿ, ಜೂ.19: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಜನರು ಕಂಡಲ್ಲೆಲ್ಲ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಳೇ ಜಮೀನು ವಿವಾದಕ್ಶೆ ಸಂಬಂಧಿಸಿದಂತೆ  ಶನಿವಾರ ರಾತ್ರಿ ಎರಡು ಕುಟುಂಬಗಳ ನಡುವೆ ಜಗಳ ಆರಂಭಗೊಂಡಿದೆ. ಈ ವೇಳೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇದರಿಂದ ಆಕ್ರೋಶಗೊಂಡ ಹತ್ಯೆಗೀಡಾದ ವ್ಯಕ್ತಿಯ ಕುಟುಂಬದವರು ಕೊಲೆ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳಲು ಹುಡುಕಾಟ ಆರಂಭಿಸಿದ್ದಾರೆ. ಇಡೀ ಗ್ರಾಮ ಉದ್ವಿಗ್ನಗೊಂಡಿದ್ದು ಗುಡಿಸಲು, ಹುಲ್ಲಿನ ಬಣವೆ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇಡೀ ಗ್ರಾಮ ಹೊತ್ತಿ ಉರಿಯುತ್ತಿರುವಂತೆ ಕಂಡು ಬರುತ್ತಿದ್ದು, ಹಿಂಸಾಚಾರ ಬುಗಿಲೆದಿದ್ದಿದೆ.

ಸ್ಥಳಕ್ಕೆ ಡಿಸಿಪಿಗಳಾದ ರವೀಂದ್ರ ಗಡಾದಿ, ಪಿ.ವಿ.ಸ್ನೇಹ ಸೇರಿದಂತೆ ಕಾಕತಿ ಠಾಣೆ ಪೊಲೀಸರು, ಕೆಎಸ್ಆರ್‍ಪಿ ಸಿಬ್ಬಂದಿ  ಧಾವಿಸಿ ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು, ಪರಿಸ್ಥಿತಿ ಹತೋಟಿಗೆ ತರಲು ಕ್ರಮ ಕೈಗೊಂಡಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!