ಕಾಂಗ್ರೆಸ್‌ ಮುಖಂಡ ರಾಜ್ ಕುಮಾರ್ ಹೃದಯಾಘಾತದಿಂದ ನಿಧನ

ಸುದ್ದಿ360 ದಾವಣಗೆರೆ, ಅ.23: ಕಾಂಗ್ರೆಸ್ ಮುಖಂಡರು, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಪ್ರದೇಶ ಕುರುಬ ಸಂಘದ ನಿರ್ದೇಶಕರು ಹಾಗೂ ಕನಕ ಬ್ಯಾಂಕಿನ ಮಾಜಿ ಅಧ್ಯಕ್ಷರು. ನಿರ್ದೇಶಕರಾದ ಪಿ ರಾಜ್ ಕುಮಾರ್ (63) ಅವರು ಶನಿವಾರ ತಡರಾತ್ರಿ ವಿಧಿವಶರಾಗಿದ್ದಾರೆ.

ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಪಾರ್ಥಿವ ಶರೀರವನ್ನು ಶಾಮನೂರಿನ ಜರಿಕಟ್ಟೆ ರಸ್ತೆ .ಜೆ.ಹೆಚ್. ಪಟೇಲ್ ಬಡಾವಣೆಯ ಅವರ ಸ್ವಂತ ಮನೆಯಲ್ಲಿ ಮಧ್ಯಾಹ್ನ ಎರಡು ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ದ್ವಾರನಕುಂಟೆ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನ ಆಗಲಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!