ಕೊಲೆ ಆರೋಪಿಗಳಿಗೆ ನೆರವು: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ

ಸುದ್ದಿ360 ದಾವಣಗೆರೆ ಮಾ.18 : ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನೆರವಾಗಿರುವ ಆರೋಪದಲ್ಲಿ ಧಾರವಾಡದ ಪತ್ರಕರ್ತರೊಬ್ಬರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ

ಖಾಸಗಿ ಸುದ್ದಿವಾಹಿನಿಯ ವರದಿಗಾರ ಮೆಹಬೂಬ್ ಮುನವಳ್ಳಿಯನ್ನು ನ್ಯಾಮತಿ ಠಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಂದಿ ಅಣ್ಣಿ ಕೊಲೆ ಪ್ರಕರಣದ ಇಬ್ಬರು  ಆರೋಪಿಗಳ ಮೇಲೆ ಬುಧವಾರ ಚೀಲೂರು ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಗುರುವಾರ ಹಾವೇರಿ ತಾಲ್ಲೂಕು ಶಿಗ್ಗಾಂವ್ ನಲ್ಲಿ ಬಂಧಿಸಿದ್ದರು. ಮೆಹಬೂಬ್ ಮುನವಳ್ಳಿಯವರು ಪ್ರಕರಣದ ಇನ್ನಿತರ ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ತಿಳಿದಿದ್ದರೂ ತನಿಖೆಗೆ ಅಹಕಾರ ನೀಡುವ ಮೂಲಕ ಆರೋಪಿಗಳು ತಪ್ಪಿಸಿಕೊಳ್ಳಲು ನೆರವು ನೀಡಿದ್ದಾರೆ ಎಂಬ ಆರೋಪದ ಮೇಲೆ ಬಂದಿಸಲಾಗಿದೆ.

ಚೀಲೂರು ಬಳಿ ನಡೆದ ಆಂಜನೇಯ ಹತ್ಯೆ ಮತ್ತು ಮಧು ಮೇಲಿನ ಹಲ್ಲೆ ಪ್ರಕರಣದಲ್ಲಿ ಸುನಿಲ್, ಅಭಿಲಾಷ್, ವೆಂಕಟೇಶ್, ಪವನ್ ಎಂಬ ನಾಲ್ವರನ್ನು ಬಂದಿಸಲಾಗಿದ್ದು, ಮಿಕ್ಕವರು ತಲೆಮರೆಸಿಕೊಂಡಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!