ಚನ್ನಗಿರಿಯಲ್ಲಿ ಬಸ್‍ ಏಜೆಂಟ್‍ನ ಬರ್ಬರ ಕೊಲೆ

ಸುದ್ದಿ360 ದಾವಣಗೆರೆ ಜೂ.21: ಪ್ರತ್ಯಕ್ಷದರ್ಶಿಗಳು ದಿಗ್ಭ್ರಮೆಯಾಗುವಂತಹ ಲೈವ್‍ ಮಾರ್ಡರ್‍  ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಖಾಸಗಿ ಬಸ್ ಏಜೆಂಟ್ ನನ್ನು ಚಾಕುವಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಚನ್ನಗಿರಿ ಪಟ್ಟಣದ ಕೈಮರ ಎಂಬಲ್ಲಿನ ತರಳಬಾಳು ವೃತ್ತದಲ್ಲಿ ನಡೆದಿರುವ  ಈ ಘಟನೆಯಲ್ಲಿ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಜಾಕೀರ್ ಹತ್ಯೆಗೀಡಾದ ಏಜೆಂಟ್ ಎಂದು ಗುರುತಿಸಲಾಗಿದೆ.

ಶಿವಮೊಗ್ಗ- ದಾವಣಗೆರೆ-ಭದ್ರಾವತಿ- ಚನ್ನಗಿರಿ ಪಟ್ಟಣಕ್ಕೆ ಹೋಗುವ ವೃತ್ತ ಇದಾಗಿದ್ದು, ಎಂದಿನಂತೆ ನಲ್ಲೂರಿನಿಂದ ಚನ್ನಗಿರಿಗೆ ಜಾಕೀರ್ ಬಂದಿದ್ದಾರೆ. ಇಲ್ಲಿಗೆ ಜಾಕೀರ್ ಆಗಮಿಸುತ್ತಿದ್ದಂತೆ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಏಕಾಏಕಿಯಾಗಿ ಚಾಕುವಿನಿಂದ ಜಾಕೀರ್‍ ಮೇಲೆ ಎರಗಿ ಚುಚ್ಚಿದ್ದಾನೆ. ರಕ್ತಸಿಕ್ತವಾಗಿ ಬಿದ್ದಿದ್ದರೂ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ. 

ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ನಡೆದ ಈ ಘಟನೆ ನೋಡಿದ ಸ್ಥಳೀಯರು ದಿಗ್ಭ್ರಾಂತರಾಗಿದ್ದಾರೆ. ಜಾಕೀರ್ ನ ಮೇಲೆರಗಿದ ವ್ಯಕ್ತಿಯನ್ನು ತಡೆಯಲು ಮುಂದಾದರಾದರೂ ಮನಬಂದಂತೆ ಚುಚ್ಚುತ್ತಿದ್ದ ಆತನ ಹತ್ತಿರ ಹೋಗಲು ಹೆದರಿದ್ದಾರೆ. ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಜನನಿಬಿಡ ಪ್ರದೇಶದಲ್ಲಿ ಇಂಥ ಕೃತ್ಯ ನಡೆದಿರುವುದು ಜನರನ್ನು ಭಯಭೀತರನ್ನಾಗಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಅನೈತಿಕ ಸಂಬಂಧ ಅಥವಾ ಆಸ್ತಿ ವಿವಾದ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ‌. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ತನಿಖೆ ಮುಂದುವರಿಸಿದ್ದಾರೆ. ಜಾಕೀರ್ ಗೆ ಪರಿಚಯವಿದ್ದವನೇ ಈ ಕೃತ್ಯ ಎಸಗಿರಬಹುದು ಎಂಬ ಅನುಮಾನ ಪೊಲೀಸರದ್ದಾಗಿದೆ. ಪ್ರತ್ಯಕ್ಷವಾಗಿ ನೋಡಿದ ಜನರು ಈ ಘಟನೆಗೆ ದಿಗ್ಭ್ರಮೆಯಾಗಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!