ಜು.8 ಕ್ಕೆ ಶ್ರೀಶೈಲ ಮಠದಲ್ಲಿ ಪೂರ್ವಭಾವಿ ಸಭೆ

ಸುದ್ದಿ360,ದಾವಣಗೆರೆ,ಜು.05: ಶ್ರೀ ಶೈಲ ಪೀಠ ಜಗದ್ಗುರು ಡಾ.‌ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 29ರಿಂದ ಜನವರಿ 15ರವರೆಗೆ ನಡೆಯಲಿರುವ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಹಾಗೂ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮಗಳ ಪೂರ್ವಭಾವಿ ಸಭೆ ಜು.8ರಂದು ಸಂಜೆ 4 ಗಂಟೆಗೆ ವಿನೋಬನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಜರುಗಲಿದೆ.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಈ ಕುರಿತು ಮಾಹಿತಿ ನೀಡಿದರು. ಶ್ರೀಶೈಲ ಜಗದ್ಗುರುಗಳ ಸಾನಿಧ್ಯದಲ್ಲಿ ಹಾಗೂ ಜಿಲ್ಲೆಯ ಶಿವಾಚಾರ್ಯರ ಸಮ್ಮುಖದಲ್ಲಿ ಮತ್ತು ಜನಪ್ರತಿನಿಧಿಗಳ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದ್ದು, ಜಿಲ್ಲೆಯ ಸರ್ವ ಸಮಾಜದ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದು, ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ ಮತ್ತು ಸಹಕಾರ ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಶ್ರೀಗಳು ಕೋರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಿ.ಎಂ. ಹಾಲಸ್ವಾಮಿ, ಕೆ.ಎಂ.ಪರಮೇಶ್ವರಯ್ಯ, ಬನ್ನಯ್ಯಸ್ವಾಮಿ, ದೇವರಮನಿ ಯೋಗೀಶ್ ಇದ್ದರು.

admin

admin

Leave a Reply

Your email address will not be published. Required fields are marked *

error: Content is protected !!