ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ

ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು  ಪಕ್ಷವನ್ನು ಕಟ್ಟಿದ ಹಿರಿಯ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ. ಜಗದೀಶ್ ಶೆಟ್ಟರ್ ಉತ್ತಮ ನಾಯಕ ಅವರು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆಯಾಗಿಲ್ಲ. ಹಾಗೇನಾದರೂ ಒಂದು ವೇಳೆ ಅವರು ಸೇರಬಯಸಿದರೆ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‍ ಜಾರಕಿಹೊಳಿ, ಶಾಸಕ  ಆರ್.ವಿ. ದೇಶಪಾಂಡೆ ಉಪಸ್ಥಿತರಿದ್ದರು.

Leave a Comment

error: Content is protected !!