ನಮ್ಮದು ರಾಷ್ಟ್ರೀಯ ಪಕ್ಷ – ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಆ. 01: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದರು.

ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಾರಿಗೂ ಬೇಧಭಾವ ಮಾಡುವ ಮಾತೇ ಇಲ್ಲ. ಅಂತಹ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ  ನೀಡಿದರು.

ಸಿದ್ದರಾಮೇಶ್ವರ ವಜ್ರ ಮಹೋತ್ಸವಕ್ಕೆ ಗುರುಗಳು ಆಹ್ವಾನ ನೀಡಿದ್ದ ಮೇರೆಗೆ ಇಲ್ಲಿಗೆ ಬಂದಿದ್ದೇನೆ. ನಂತರ ಕೊಪ್ಪಳ್ಳಕ್ಕೆ ಹೋಗಿ ಅಲ್ಲಿ, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ  ಸ್ಥಳ ವೀಕ್ಷಣೆ  ಮಾಡಲಿದ್ದೇನೆ. ಬೆಟ್ಟದ ಅಭಿವೃದ್ಧಿಗೆ  ಈಗಾಗಲೇ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ ಎಂದರು.

ಹಿಂದೂ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿದೆ

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಕಡಿಮೆಯಾಗಿದೆ. ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ.  ಖಂಡಿತವಾಗಿಯೂ ನಮ್ಮ ಪೊಲೀಸರು ಯಾರು ಕೊಲೆಗಡುಕರಿದ್ದಾರೆ ಅವರನ್ನು ಪತ್ತೆ ಹಚ್ಚುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಭದ್ರತೆ ಸಮಸ್ಯೆ ಇಲ್ಲ

ಗೃಹ ಸಚಿವರ ಮನೆಗೆ ಭದ್ರತೆ ಸಮಸ್ಯೆಯಿಲ್ಲ. ಪ್ರತಿಭಟನಾಕಾರರು ಬಂದ ಸಂದರ್ಭದಲ್ಲಿ ಭದ್ರತೆಯ ಸಮಯದಲ್ಲಿ ಯಾರು ಇರಬೇಕಿತ್ತೋ  ಅವರು ಇರಲಿಲ್ಲ. ಅವರಿಗೆ ತಾಕೀತು ಮಾಡಿ  ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಬಿ.ಎ. ಬಸವರಾಜ, ಡಾ. ಕೆ.ಸುಧಾಕರ್, ಸಂಸದ ಜಿ.ಎಂ. ಸಿದ್ದೇಶ್ವರ, ಮೇಯರ್ ಜಯಮ್ಮಗೋಪಿನಾಯ್ಕ, ಪೂರ್ವ ವಲಯ ಐಜಿಪಿ ಕೆ. ತ್ಯಾಗರಾಜನ್,  ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಎಸ್ಪಿ ಸಿ.ಬಿ. ರಿಷ್ಯಂತ್, ಎಎಸ್ಪಿ ರಾಮಗೊಂಡ ಬಸರಗಿ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಎ.ಎಚ್. ಶಿವಯೋಗಿಸ್ವಾಮಿ, ವೀರೇಶ್ ಹನಗವಾಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಉಪಸ್ಥಿತರಿದ್ದರು.

admin

admin

Leave a Reply

Your email address will not be published. Required fields are marked *

error: Content is protected !!