ನಿರ್ದೇಶಕ – ನಟ ಗುರುಪ್ರಸಾದ್ ಬಂಧನ – ಕೋರ್ಟ್ ಗೆ ಹಾಜರು

ಸುದ್ದಿ360 ಬೆಂಗಳೂರು ಜ.13: ಚೆಕ್ ಬೌನ್ಸ್‍ ಮೊಕದ್ದಮೆಗೆ ಸಂಬಂಧಪಟ್ಟಂತೆ ಸಿನಿಮಾ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನೆಗೋಶಿಯೇಬಲ್ ಇನ್ ಸ್ಟುಮೆಂಟ್ಸ್ ಕಾಯ್ದೆಯಡಿ ಗುರುಪ್ರಸಾದ್ ವಿರುದ್ಧ ಹೂಡಲಾಗಿದ್ದ ಮೊಕದ್ದಮೆ ವಿಚಾರಣೆಗೆ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.

ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!