ನ.13ರಂದು ದಾವಣಗೆರೆ ಜಿಲ್ಲಾ ಸಿಪಿಐ ಸರ್ವ ಸದಸ್ಯರ ಸಭೆ

ಸುದ್ದಿ360 ದಾವಣಗೆರೆ ನ.12: ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಸರ್ವ ಸದಸ್ಯರ ಸಭೆಯು ನವೆಂಬರ್ 13ರ ಭಾನುವಾರ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.

ದಾವಣಗೆರೆ ಈರುಳ್ಳಿ ಮಾರ್ಕೆಟ್ ರಸ್ತೆಯಲ್ಲಿರುವ ಶೇಖರಪ್ಪ ನಗರದ ಕಾಂ. ಹೆಚ್ ಅಡಿವೆಪ್ಪ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಿಪಿಐ ಸರ್ವ ಸದಸ್ಯರ ಸಭೆಯನ್ನು ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂ. ಸಾತಿ ಸುಂದರೇಶ್ ಉದ್ಘಾಟಿಸಲಿದ್ದಾರೆ.

ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಉಸ್ತುವಾರಿಗಳಾದ ಕಾಂ. ಡಿ ಎ ವಿಜಯಭಾಸ್ಕರ್ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.ಸಭೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಸಹಕಾರ್ಯದರ್ಶಿ ಕಾಂ. ಹೆಚ್ ಜಿ ಉಮೇಶ್,ಕಾಂ. ಆವರಗೆರೆ ವಾಸು,ತಾಲೂಕು ಕಾರ್ಯದರ್ಶಿಗಳಾದ ಜಗಳೂರು ಮಹಮದ್ ಬಾಷಾ, ಹರಿಹರ ಟಿ ಹೆಚ್ ನಾಗರಾಜ್, ಚನ್ನಗಿರಿ ಮಹಮದ್ ರಫೀಕ್ ಸೇರಿದಂತೆ ಪಕ್ಷದ ಸದಸ್ಯರು ಭಾಗವಹಿಸಲಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!