ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್ ದೃಢ –ದೆಹಲಿ ಪ್ರವಾಸ ರದ್ದು

ಸುದ್ದಿ360 ಬೆಂಗಳೂರು, ಆ.06: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಕೋವಿಡ್-19 ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಹಾಗೂ ಅವರ ದೆಹಲಿಯ ಪ್ರವಾಸ ರದ್ದಾಗಿರುರುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸದ್ಯ ಆರ್ ಟಿ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಿಕಟ ಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ಸಚಿವರಾದ ಡಾ. ಅಶ್ವತ್ ನಾರಾಯಣ್ , ಹಾಲಪ್ಪ ಆಚಾರ್, ಪ್ರಭು ಚೌಹಾಣ್, ಬಿಸಿ ನಾಗೇಶ್ ದೂರವಾಣಿ ಮೂಲಕ ಆರೋಗ್ಯ ವಿಚಾರಣೆ ಮಾಡಿದ್ದಾರೆ.

Leave a Comment

error: Content is protected !!