ಬಿಜೆಪಿ ವಿರುದ್ಧ ಅಭಿಯಾನ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಸುದ್ದಿ360 ಹುಬ್ಬಳ್ಳಿ, ಆ.26: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸಮಿತಿ ರಚನೆ ಮಾಡಿ ನಿರ್ಣಯ ತೆಗೆದುಕೊಳ್ಳಲು ತಿಳಿಸಿದೆ. ಅಗಸ್ಟ್ 29 ರಂದು ನಿರ್ಣಯ ತಿಳಿಸಲು ಸೂಚಿಸಿದೆ. ಆದರೆ ಅನುಮತಿ ನೀಡಲು ಸಮಿತಿಯ ರಚನೆ ಅವಶ್ಯಕತೆ ಇರಲಿಲ್ಲ. ಆದರೆ ವಿನಾಕಾರಣ ಕಾಲಹರಣ ಮಾಡಲು ಈ ರೀತಿಯ ನಾಟಕವನ್ನು ಪಾಲಿಕೆ ಮಾಡುತ್ತಿದೆ ಎಂದು  ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್  ಆರೋಪಿಸಿದರು.

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಬಿಜೆಪಿ ಅವಕಾಶ ಮಾಡಿ ಕೊಡದ ಹೋದರೇ ಮುಂದಿನ ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ಗಣೇಶ ಮೂರ್ತಿಗೆ ಅವಮಾನ ಮಾಡಿದದವರಿಗೆ ಮತ ಹಾಕಬೇಡಿ ಎಂಬುದಾಗಿ ತಿಳಿಸುವ ಕಾರ್ಯ ಮಾಡಲಿದ್ದೇವೆ.

-ಪ್ರಮೋದ್ ಮುತಾಲಿಕ್, ಶ್ರೀರಾಮ ಸೇನೆ ಮುಖ್ಯಸ್ಥ.

ಸದನ ಸಮಿತಿಗೆ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಪಾಲಿಕೆ ಹಾಗೂ ಸ್ಥಳೀಯ ಶಾಸಕರು ವಿರೋಧ ಹಾಗೂ ತೊಂದರೆ ಕೊಟ್ಟರೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ನೀಡುವಂತೆ ಗಣೇಶ ಮೂರ್ತಿ ಹಿಡಿದು ಮನೆ ಮನೆಗೆ ತೆರಳಿ ತಿಳುವಳಿಕೆಯ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಪಾಲಿಕೆಯ ಮೇಯರ್ ಅನುಮತಿ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಕಾರಾತ್ಮಕ ರಿಪೋರ್ಟ್ ಇರಬಾರದು ಎಂದು ಕಂಡಿಷನ್ ಹಾಕಲಾಗಿದೆ. ನಾವು ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡಲು ವಿರೋಧ ಮಾಡಿಲ್ಲ. ಹಾಗೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಈವರೆಗೆ ಯಾರೂ ವಿರೋಧ ಮಾಡಿಲ್ಲ. ಹಾಗೇನಾದರೂ ಸೋಮವಾರ ಅನುಮತಿ ನೀಡಲು ಹಿಂದೇಟು ಹಾಕಿದರೆ ಒತ್ತಾಯ ಪೂರ್ವಕವಾಗಿ ಈದ್ಗಾ ಮೈದಾನ ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ. ಸರ್ಕಾರ 144 ಕಲಂ, ಗುಂಡೇಟು, ಲಾಠಿ ಚಾರ್ಜ್ ಮಾಡಿಸಿದರೆ ನಮ್ಮ ಪಟ್ಟು ಬಿಡುವುದಿಲ್ಲ ಎಂದರು.

Leave a Comment

error: Content is protected !!