ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಂಡೀಗಢ ಪ್ರವಾಸ

ಜಿಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಚಂದೀಗಢಗೆ ಪ್ರವಾಸ

ಸುದ್ದಿ 360 ಬೆಂಗಳೂರು, ಜೂ. 27:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಸೋಮವಾರ (ಜೂನ್ 27) ಸಂಜೆ ಚಂಡೀಗಢ ಕ್ಕೆ ತೆರಳಿದರು.

ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದು, ಸಭೆಯಲ್ಲಿ ಜಿಎಸ್ ಟಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

ಜಿ ಎಸ್ ಟಿ ತೆರಿಗೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಗ್ರೂಪ್ ಆಫ್ ಮಿನಿಸ್ಟರ್ ಸಭೆ ಈಗಾಗಲೇ ೩ ಬಾರಿ  ನಡೆದಿದೆ. ಈ ಕುರಿತು ಮಧ್ಯಂತರ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದೆ.  ಎರಡು ದಿನಗಳ ಸಭೆಯ ನಂತರ ಜೂನ್ 30 ರಂದು ಸಿಎಂ ಬೊಮ್ಮಾಯಿ ಅವರು ನಗರಕ್ಕೆ ಹಿಂತಿರುಗಲಿದ್ದಾರೆ.

Leave a Comment

error: Content is protected !!