ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ,

ಬಿಜೆಪಿ 11 ಕೋಟಿ ಕಾರ್ಯಕರ್ತರನ್ನು ಹೊಂದಿರುವ ಬೃಹತ್​ ಪಕ್ಷ. ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಪಕ್ಷವೇನು ಮುಳುಗಿ ಹೋಗಲ್ಲ. ಯುವ ಮೋರ್ಚಾ ಕಾರ್ಯಕರ್ತರೆಲ್ಲನ್ನು ಮಾತನಾಡಿಸಿ ಸಮಾಧಾನ‌ಪಡಿಸುತ್ತೇವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ 32 ಹತ್ಯೆಗಳಾಗಿದ್ದವು. ಯಾರೋ ಹೇಳಿದ್ದಾರೆಂದು ಎನ್ಕೌಂಟರ್ ಮಾಡಿದ್ರೆ ನೀವೇ ಗುಂಡಿಕ್ಕಿ ಕೊಂದಿದ್ದೀರಿ ಎಂದು ಸುದ್ದಿ ಮಾಡ್ತಾರೆ. ಕಾನೂನುಬದ್ಧವಾಗಿ ನಮ್ಮ ಮುಖ್ಯಮಂತ್ರಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!