ಶಿವಮೊಗ್ಗದ ಹಂದಿ ಅಣ್ಣಿ ಕೊಲೆ ಆರೋಪಿಯ ಬರ್ಬರ ಹತ್ಯೆ

ಸುದ್ದಿ360 ದಾವಣಗೆರೆ ಮಾ.15: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ.

ಹತ್ಯೆಗೊಳಗಾದ ವ್ಯಕ್ತಿ ರೌಡಿ ಶೀಟರ್ ಆಂಜನೇಯ ಅಲಿಯಾಸ್ ಅಂಜನಿ ಎಂದು ಗುರುತಿಸಲಾಗಿದ್ದು, ಇನ್ನೋರ್ವ  ಮಧು(28) ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗದ ಹಂದಿ ಅಣ್ಣಿ ಕೊಲೆಯ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಂಟು ಮಂದಿಯ ಪೈಕಿ, ಇಬ್ಬರಿಗೆ ಜಾಮೀನು ಸಿಕ್ಕಿತ್ತು. ಮಧು ಮತ್ತು ಆಂಜನೇಯಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನಿನ ಮೇಲೆ ಇತ್ತೀಚೆಗಷ್ಟೇ ವಿಜಯಪುರ ಜೈಲಿನಿಂದ ಬಿಡುಗಡೆಯಾಗಿದ್ದರು.

ಹರಿಹರ ತಾಲೂಕು ಬಾನೊಳ್ಳಿ ಗ್ರಾಮದ ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ತಮ್ಮ ಗ್ರಾಮಕ್ಕೆ ತೆರಳುವ ವೇಳೆ ಈ ಕೃತ್ಯ ನಡೆದಿದೆ.

ಅಂಜನಿ ಮತ್ತು ಮಧು ಇಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಂಜನಿ ಮೃತಗೊಂಡಿದ್ದು, ಗಾಯಗೊಂಡ‌ ಮಧು ಎಂಬಾತನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Leave a Comment

error: Content is protected !!