ಹಂದಿ ಅಣ್ಣಿ ಕೊಲೆ ಪ್ರತಿಕಾರ – ಮುಖ್ಯಮಂತ್ರಿ ತವರಲ್ಲಿ ಆರೋಪಿಗಳು ಸರಂಡರ್

ಸುದ್ದಿ360 ಮಾ.16: ಜಿಲ್ಲೆಯ ನ್ಯಾಮತಿ ತಾಲೂಕು ಗೋವಿನಾಕೋವಿ  ಗ್ರಾಮದ ಹೊನ್ನಾಳಿ ಶಿವಮೊಗ್ಗ ರಸ್ತೆಯಲ್ಲಿ ನಿನ್ನೆ ಬುಧವಾರ ನಡೆದ  ರೌಡಿಶೀಟರ್‍ನ ಬರ್ಬರ ಹತ್ಯೆ ಶಿವಮೊಗ್ಗದಲ್ಲಿ ಈ ಹಿಂದೆ ಹತ್ಯೆಗೊಳಗಾಗಿದ್ದ ಹಂದಿ ಅಣ್ಣಿ ಪ್ರಕರಣದ ಪ್ರತಿಕಾರ ಎಂದು ಹೇಳಲಾಗುತ್ತಿದ್ದು, ಕೊಲೆ ಆರೋಪಿಗಳು ಹಾವೇರಿ ಜಿಲ್ಲೆ ಶಿಗ್ಗಾಂವ್ ಪೊಲೀಸರಿಗೆ ಶರಣಾಗಿದ್ದಾರೆ.

ಹರಿಹರ ತಾಲೂಕು ಬಾನೊಳ್ಳಿ ಗ್ರಾಮದ ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ತಮ್ಮ ಗ್ರಾಮಕ್ಕೆ ತೆರಳುವ ವೇಳೆ ಈ ಬರ್ಬರ ಹತ್ಯೆ ನಡೆದಿದ್ದು, ಸುನೀಲ ಯಾನೆ ತಮಿಳು ಸುನೀಲ, ಅಭಿಲಾಷ್, ವೆಂಕಟೇಶ್ ಮತ್ತು ಪವನ್ ಎಂಬ ನಾಲ್ವರು ಸ್ಕಾರ್ಪಿಯೋ ವಾಹನದಲ್ಲಿ ಶಿವಮೊಗ್ಗದ ನ್ಯಾಯಾಲಯಕ್ಕೆ ಬಂದಿದ್ದ ಹಂದಿ ಅಣ್ಣಿ ಕೊಲೆ ಆರೋಪಿಗಳಾಗಿದ್ದ ಮಧು ಮತ್ತು ಆಂಜನೇಯರನ್ನ ಹಿಂಬಾಲಿಸಿಕೊಂಡು ಗೋವಿನ ಕೋವಿಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಅಂಜನಿ ಸ್ಥಳದಲ್ಲೇ ಸಾವು ಕಂಡರೆ, ಮಧು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಈ ಹಿಂದೆ ಹಂದಿ ಅಣ್ಣಿಯನ್ನ ಹತ್ಯೆ ಮಾಡಿದ್ದ ಕಾಡಾ ಕಾರ್ತಿಕ್ ಗ್ಯಾಂಗ್ ಹಂದಿ ಅಣ್ಣಿಯನ್ನ ಕೊಲೆ ಮಾಡಿ ನಾಲ್ಕು ದಿನಗಳ ನಂತರ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರ ಬಳಿ ಸರೆಂಡರ್ ಆಗಿದ್ದರು. ಆಂಜನೇಯನನ್ನ ಕೊಲೆ ಮಾಡಿದ್ದ ಗ್ಯಾಂಗ್ ಒಂದೇ ದಿನದಲ್ಲಿ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಸರೆಂಡರ್ ಆಗಿದ್ದಾರೆ.

ಶರಣಾಗಿರುವ  ಸುನೀಲ ಯಾನೆ ತಮಿಳು ಸುನೀಲ, ಅಭಿಲಾಷ್, ವೆಂಕಟೇಶ್ ಮತ್ತು ಪವನ್ ಎಂಬ ನಾಲ್ವರು ಶಿವಮೊಗ್ಗದವರು ಎಂದು ಹೇಳಲಾಗುತ್ತಿದೆ.

admin

admin

Leave a Reply

Your email address will not be published. Required fields are marked *

error: Content is protected !!