ಹಂದಿ ಅಣ್ಣಿ ಹತ್ಯೆ ಆರೋಪಿಗಳು ಶಿವಮೊಗ್ಗ ಪೊಲೀಸರ ವಶಕ್ಕೆ

ಸುದ್ದಿ360, ಶಿವಮೊಗ್ಗ, ಜು.20: ಶಿವಮೊಗ್ಗದ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪನ ಕೊಲೆ ಮಾಡಿ ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಎದುರು ಶರಣಾಗಿದ್ದ 8 ಆರೋಪಿಗಳನ್ನು ಕಳೆದ ರಾತ್ರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗಿದೆ.

ನಟೋರಿಯಸ್ ರೌಡಿ ಹಂದಿ ಅಣ್ಣಿ ಮರ್ಡರ್ ಕೇಸಿನಲ್ಲಿ ಶರಣಾಗಿರುವ ಆರೋಪಿಗಳು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೊ

ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಿದ್ದ ಪೊಲೀಸರ ತಂಡ ಆರೋಪಿಗಳಾದ ಕಾರ್ತಿಕ್(32), ನಿತಿನ್(29), ಮಧುಸೂಧನ್(32), ಫಾರುಖ್(40), ಆಂಜನೇಯ(26), ಮದನ್(25), ಮಧು (27), ಚಂದನ್(22) ಅವರುಗಳನ್ನು ಹೆಚ್ಚುವರಿ ತನಿಖೆಗಾಗಿ ಕರೆ ತರಲಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ.

ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಕಾನೂನು ರೀತಿಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಶಿವಮೊಗ್ಗ ವಿನೋಬನಗರದ ಪೊಲೀಸ್ ಚೌಕಿ ಎದುರು ಕಳೆದ ಜು.14ರಂದು ನಗರದ ರೌಡಿ ಶೀಟರ್ ಹಂದಿ ಅಣ್ಣಿಯ(ಅಣ್ಣಪ್ಪ) ನ್ನು ಬರ್ಬರವಾಗಿ ಕೊಲೆ ಮಾಡಿದ್ದ ಗುಂಪು ಸ್ಥಳದಿಂದ ಪರಾರಿಯಾಗಿತ್ತು.ತಲೆ ಮರೆಸಿಕೊಂಡ ಆರೋಪಿಗಳು,  ನಾವೇ ಹತ್ಯೆ ಮಾಡಿದವರು ಎಂದು ಜು.19ರಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ಶರಣಾಗಿದ್ದರು.

Leave a Comment

error: Content is protected !!