ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ

ಸುದ್ದಿ360, ವಿಜಯನಗರ (ಹೊಸಪೇಟೆ): ಇಲ್ಲೊಬ್ಬ ಪಾಗಲ್ ಪ್ರೇಮಿ ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಗುರುವಾರ ನಡೆದಿದೆ.

ನಿರ್ಮಲಾ( 23 ) ಭೀಕರವಾಗಿ ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ. ಬಿಎಸ್ಸಿ ನರ್ಸಿಂಗ್ ವಿಧ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು. 

ಬೋಜರಾಜ ಎನ್ನುವ ಪಾಗಲ್ ಪ್ರೇಮಿ ಇಂತಹ ದುಷ್ಕೃತ್ಯ ನಡೆಸಿದ್ದಾನೆ.  ಈ ಮೊದಲು ನಿರ್ಮಲಾಳನ್ನು ತನಗೆ ಮದುವೆ ಮಾಡಿಕೊಂಡುವಂತೆ ಯುವತಿಯ ಮನೆಯವರನ್ನು ಕೇಳಿದ್ದು, ಯುವತಿಯ ಮನೆಯವರು ಒಪ್ಪದ ಪರಿಣಾಮ ಬೇರೆ ಯುವತಿಯೊಂದಿಗೆ ಬೋಜರಾಜನ ಮದುವೆಯಾಗಿತ್ತು.

ಕಳೆದ 2 ತಿಂಗಳ ಹಿಂದೆ ಬೇರೆ ಯುವತಿಯನ್ನ ಮದುವೆಯಾಗಿದ್ದ ಬೋಜರಾಜ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದ ತನ್ನ ಮಾಜಿ ಪ್ರೇಯಸಿಯ ತೆಲೆ ಕಡಿದು ರುಂಡದೊಂದಿಗೆ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!