ಆಕ್ಟಿವಾ ಗಾಡಿಯ ಸೀಟಿನ ಡಿಕ್ಕಿಯಲ್ಲಿದ್ದ 8 ಲಕ್ಷ ಕಳವು – ಪೊಲೀಸ್ ಠಾಣೆಯ ಎದುರೇ ಕದ್ದ ಖದೀಮರು

ಸುದ್ದಿ360 ಮಳವಳ್ಳಿ (ಮಂಡ್ಯ) ಆ.27: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್(ಕೊಳ್ಳೇಗಾಲ) ರಸ್ತೆಯ ಉಪನೋಂದಣಾಧಿಕಾರಿ ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಸೀಟಿನ ಡಿಕ್ಕಿಯಲ್ಲಿ ಇಟ್ಟಿದ್ದ 8 ಲಕ್ಷ ರೂ.ಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ನರಸಿಂಹಸ್ವಾಮಿ ಹಣ ಕಳೆದುಕೊಂಡವರಾಗಿದ್ದಾರೆ. ಗುರುವಾರ ಜಮೀನೊಂದರ ನೋಂದಣಿ ಸಂಬಂಧ 8 ರೂ.ಲಕ್ಷವನ್ನು ತಮ್ಮ ಹೋಂಡಾ ಆಕ್ಟಿವಾ ಬೈಕ್ ನ ಸೀಟಿನ ಡಿಕ್ಕಿಯಲ್ಲಿ ಇಟ್ಟಿಕೊಂಡು ಬಂದಿದ್ದರು.

ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿ ಮುಂದೆ ಬೈಕ್ ನಿಲ್ಲಿಸಿ ಕಚೇರಿ ಒಳಗೆ ಹೋಗಿ ವಾಪಾಸ್ ಬಂದು ಹಣ ತೆಗೆದುಕೊಳ್ಳಲು ಮುಂದಾದ ವೇಳೆ ಹಣ ಇಲ್ಲದಿರುವುದನ್ನು ಕಂಡು ಕಂಗಾಲಾಗಿದ್ದಾರೆ. ದುಷ್ಕರ್ಮಿಗಳು ನಕಲಿ ಕೀ ಬಳಸಿ ಕಳವು ಮಾಡಿದ್ದಾರೆ ಎನ್ನಲಾಗಿದ್ದು, ಪೊಲೀಸ್ ಠಾಣೆಯ ಮುಂಭಾಗವೇ ಘಟನೆ ನಡೆದಿರುವುದು ಹಾಗೂ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಸಿಸಿಟಿವಿ ಇಲ್ಲದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಈ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

admin

admin

Leave a Reply

Your email address will not be published. Required fields are marked *

error: Content is protected !!