ನಾಪತ್ತೆಯಾದ ಯುವಕ ಶವವಾಗಿ ಪತ್ತೆ

ಸುದ್ದಿ360 ರಾಮನಗರ, ಸೆ.15: ಹಾಸನ ಜಿಲ್ಲೆಯ ಹಿರಿಸಾವೆ ಹೋಬಳಿಯ ಪುರ್ ಗ್ರಾಮದ ಯುವಕ ಸೆ.14ರ ಬೆಳಿಗ್ಗೆಯಿಂದ ಕಾಣೆಯಾಗಿದ್ದು, ಇದೀಗ ಮಾಗಡಿಯ ಜಡೆದೇವರ ಮಠದ ಪಕ್ಕದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತ ಯುವಕ ದರ್ಶನ್ (19) ಮಾಗಡಿಯ ಜಡೆದೇವರ ಮಠದ ವಿದ್ಯಾರ್ಥಿಯಾಗಿದ್ದು, ಯುವಕನ ಪತ್ತೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿತ್ತು. ಇಂದು ಮುಂಜಾನೆ ಮಠದ ಪಕ್ಕದಲ್ಲೇ ಇರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದರ್ಶನ್, ಜಡೇದೇವರ ಮಠದಲ್ಲಿ ಸಂಸ್ಕೃತ ಕಲಿಕೆಯ ವಿದ್ಯಾರ್ಥಿಯಾಗಿದ್ದನು ಎಂದು ಹೇಳಲಾಗಿದೆ.

ಮೃತ ದೇಹವನ್ನು ಮಾಗಡಿಯ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಹೊರತೆಗೆದಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಮಾಗಡಿಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಸಾವಿಗೆ ಕಾರಣ ಏನೆಂದು ತನಿಖೆಯಿಂದ ತಿಳಿಯಬೇಕಿದೆ.

admin

admin

Leave a Reply

Your email address will not be published. Required fields are marked *

error: Content is protected !!