ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ

ಸುದ್ದಿ360 ತುಮಕೂರು (ಶಿರಾ) ಜ.6:  80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ  ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಶಿರಾ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು,  ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು. ಎನ್ ಡಿ ಎ ಸರ್ಕಾರ ಬಂದಾಗ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.

ಕಾಂಗ್ರೆಸ್ ನದ್ದು ಜಾತಿ ಜಾತಿ ಎಂದು ಒಡೆದು ಆಳುವ ನೀತಿ – ಜೆಪಿ ನಡ್ಡಾ ವಾಗ್ದಾಳಿ

ಯುಪಿಎ ಕಾಲದಲ್ಲಿ ಕರ್ನಾಟಕದಲ್ಲಿ ಎಷ್ಟು ಅಭಿವೃದ್ಧಿ ಮಾಡಿದ್ದಾರೆ?  ಕರ್ನಾಟಕದ ಜನರಿಗೆ ಸಂಕಷ್ಟ ತಂದರು. ಕಾಂಗ್ರೆಸನವರು ಅಣ್ಣ ತಮ್ಮಂದಿರ ನಡುವೆ ಜಗಳ ತಂದಿಕ್ಕಿದರು. ಅವರದ್ದು ಜಾತಿ ಜಾತಿ ಎಂದು ಒಡೆದು ಆಳುವ ನೀತಿ. ಜಾತಿ ಧರ್ಮದ ಹೆಸರಲ್ಲಿ ತುಷ್ಠಿಕರಣ ಮಾಡಿದರು.

ಮೋದಿ ಅವರು ಭಾರತದ ರಾಜಕೀಯ ಸಂಸ್ಕೃತಿ  ಬದಲಿಸಿದರು. ಕೋವಿಡ್ ಸಂಕಷ್ಟ, ನೆರೆ ಹಾವಳಿ ಸಂಕಷ್ಟದಲ್ಲೂ ಆರ್ಥಿಕತೆ ಬೆಳೆದಿದೆ ಎಂದರೆ ಅದಕ್ಕೆ ಕಾರಣ ಮೋದಿ ಆಡಳಿತ. ಕರ್ನಾಟಕದಲ್ಲಿ 30 ಸಾವಿರ ಕೋಟಿ ರೂ. ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿ ಹೋಗಿದ್ದಾರೆ.

ಕರ್ನಾಟಕದಲ್ಲೂ ಎಲ್ಲಾ ವರ್ಗದ ಜನರ ಹಿತ ಚಿಂತನೆ ಮಾಡುವ ಸರ್ಕಾರ ಇದ್ದು, ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂದಿರುವುದಾಗಿ ತಿಳಿಸಿದರು.

ಸಿದ್ದರಾಮಯ್ಯ ನವರು ಒಬ್ಬ ಮುಖ್ಯಮಂತ್ರಿಗೆ ನಾಯಿ ಎಂದು ಕರೆದಿರುವುದು ರಾಜ್ಯದ ಜನತೆ ನೋಡುತ್ತಿದ್ದಾರೆ. ವಿರೋಧಪಕ್ಷದ ನಾಯಕರಾಗಿ ಹೀಗೆ ಹೇಳಿರುವುದು ಇಡೀ ಕರ್ನಾಟಕದ ಜನರಿಗೆ  ಅಪಮಾನ ಮಾಡಿದಂತಾಗಿದೆ. ಜನರು ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದರು.

admin

admin

Leave a Reply

Your email address will not be published. Required fields are marked *

error: Content is protected !!