ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ  ಮುಖ್ಯಮಂತ್ರಿ ಸ್ಥಾನದ   ಕನಸು ಕಾಣುತ್ತಿದ್ದಾರೆ.  ಆ ಕನಸು ನನಸಾಗೋದಿಲ್ಲ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ  ಮತ್ತೆ ಸಿಎಂ ಆಗುವ ಇಚ್ಛೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಅವರೇನೋ ಬಯಸಿದ್ದಾರೆ ಆದರೆ ಜನರ ನಾಡಿ ಮಿಡಿತ  ಏನಿದೆಯೋ ಯಾರಿಗೆ ಗೊತ್ತು..?  ಫಲಿತಾಂಶ ಬಂದ ಮೇಲೆ  ಜನರ ಅಭಿಮತ ತಿಳಿಯಲಿದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲದಿರುವ ಸೀಟಿಗಾಗಿ ಗುದ್ದಾಡುತ್ತಿದ್ದಾರೆ ಎಂದ ಮುಖ್ಯ ಮಂತ್ರಿಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ,ಮುಖ್ಯಮಂತ್ರಿ ಸ್ಥಾನಕ್ಕಾಗಿ  ಹೊರಾಡುತ್ತಿದೆ. ಜನರಿಗೆ, ಕರ್ನಾಟಕಕ್ಕೆ ಒಳ್ಳೆಯದು ಮಾಡಬೇಕು ಎಂಬ ಯೋಚನೆ ಅವರಲ್ಲಿಲ್ಲ ಎಂದರು.

admin

admin

Leave a Reply

Your email address will not be published. Required fields are marked *

error: Content is protected !!