ಆಸ್ಪತ್ರೆಯಲ್ಲಿ ಎಚ್ ಡಿಕೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ

ಸುದ್ದಿ360, ಏ. 23: ಆರೋಗ್ಯದ ಏರುಪೇರಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿರುಸಿನ ಓಡಾಟದಿಂದ ಪ್ರಚಾರ ಮಾಡುತ್ತಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಜ್ವರದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಮತದಾನ ಮಾಡದೆ ವ್ಯವಸ್ಥೆಯ ದೂಷಣೆ ಸರಿಯಲ್ಲ: ಸುರೇಶ್ ಹಿಟ್ನಾಳ್

ದಾವಣಗೆರೆ : ಸ್ವೀಪ್ ಸಮಿತಿಯಿಂದ ಬೋಟಿಂಗ್ ಮೂಲಕ ಮತದಾನ ಜಾಗೃತಿ ಅಭಿಯಾನ ಸುದ್ದಿ360 ದಾವಣಗೆರೆ,ಏ.23: ಮತದಾನದ ಜವಾಬ್ದಾರಿಯಿಂದ ನುಣುಚಿಕೊಂಡು ಆಶೋತ್ತರಗಳನ್ನು ಈಡೇರಿಸದವರನ್ನು ದೂಷಿಸುವುದು ತರವಲ್ಲ, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಶ್ನಿಸುವ ಹಕ್ಕನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಹಿಟ್ನಾಳ್ ಹೇಳಿದರು. ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರದಲ್ಲಿ ಮತದಾನ ಜಾಗೃತಿ ಅಭಿಯಾನ ಭಾಗವಾಗಿ ಭಾನುವಾರ ಆಯೋಜಿಸಿದ್ದ ಸಾಹಸ ಜಲ ಕ್ರೀಡೆಯಲ್ಲಿ ಭಾಗವಹಿಸಿ, … Read more

ದಾವಣಗೆರೆ ಎಸ್‌ಪಿ ರಿಷ್ಯಂತ್ ವರ್ಗಾವಣೆಗೆ ಕಾರಣ ಏನು ಅಂತೀರಾ?

ಸುದ್ದಿ360 ದಾವಣಗೆರೆ ಏ. 23: ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಯಾಗಿ‌ ಸೇವೆ ಸಲ್ಲಿಸುತ್ತಿದ್ದ ಸಿ.ಬಿ ರಿಷ್ಯಂತ್ ಅವರ ವರ್ಗಾವಣೆಯಾಗಿದ್ದು. ಸ್ಥಳ ಸೂಚಿಸಿಲ್ಲ. ಈ ಕುರಿತಾಗಿ ರಿಷ್ಯಂತ್ ಅವರು ಮಾಧ್ಯಮದವರಿಗೆ‌ ಮಾಹಿತಿ‌ ನೀಡಿದ್ದು,  ಅವರು ತಮ್ಮ ವರ್ಗಾವಣೆಗೆ ಕಾರಣವನ್ನು ತಿಳಿಸಿದ್ದಾರೆ.  ತಮ್ಮ ಹತ್ತಿರದ ಸಂಬಂಧಿಯೊಬ್ಬರು ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ಮೆಲೆಯಲ್ಲಿ  ಚುನಾವಣಾ ಮಾರ್ಗಸೂಚಿಗಳ ಪ್ರಕಾರ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಕಟ ಸಂಬಂಧಿ ಚುನಾವಣೆಯಲ್ಲಿ ನಿಂತಿದ್ದರೆ ಅಧಿಕಾರಿ ಚುನಾವಣಾ ಪ್ರಕ್ರಿಯೆಯ ಭಾಗವಾಗಿರಬಾರದು. ಈ ಕಾರಣದಿಂದಾಗಿ ನನ್ನನ್ನು ದಾವಣಗೆರೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು … Read more

ಡಾ.ಕೆ. ಅರುಣ್ ದಾವಣಗೆರೆ ನೂತನ ಎಸ್ ಪಿ

ಸುದ್ದಿ360, ದಾವಣಗೆರೆ ಏ.23: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ.ಕೆ. ಅರುಣ್ ನಿಯೋಜನೆಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಡಾ.ಕೆ. ಅರುಣ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಆದರೆ, ರಿಷ್ಯಂತ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಈ ಹಿಂದೆ ವಿಜಯನಗರ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಡಾ. ಅರುಣ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಆಗುವ … Read more

33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ಜಗದೀಶ್ ಶೆಟ್ಟರ್ ಶೆಟ್ಟರ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಾವುಟ ಬದಲಾದಾಕ್ಷಣ ಅವರಲ್ಲಿರುವ ಭಾವನೆಗಳು ಬದಲಾಗಲು ಸಾಧ್ಯವಿಲ್ಲ. -ಡಾ.ಎ.ಎಚ್. ಶಿವಯೋಗಿಸ್ವಾಮಿ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯ ಪ್ರಜ್ಞಾವಂತ … Read more

ಏ.23: ‘ನಿಮ್ಮ ಸಿನಿಮಾ’ ಚಿತ್ರಮಂದಿರ’ ಉದ್ಘಾಟನೆ – ಗೋರೂರು ಚೋರಿ ಆಲ್ಮಂ ಸಾಂಗ್ ರಿಲೀಸ್

ಸುದ್ದಿ360, ದಾವಣಗೆರೆ ಏ.22: ನಗರದ ಶಾಮನೂರು ರಸ್ತೆಯಲ್ಲಿ `ನಿಮ್ಮ ಸಿನಿಮಾ’ ಚಿತ್ರಮಂದಿರ’ ನಿರ್ಮಾಣವಾಗಿದ್ದು, ಹೋಂ ಥಿಯೇಟರ್ ಮಾದರಿಯಲ್ಲಿ ರಚನೆಯಾಗಿದೆ. ಏ.23ರ ಬೆಳಗ್ಗೆ 9.30ಕ್ಕೆ ನಿಮ್ಮ ಸಿನಿಮಾ ಚಿತ್ರಮಂದಿರ ಉದ್ಘಾಟನೆಯಾಗಲಿದೆ ಎಂದು ಪ್ರವೀಣ್‌ಕುಮಾರ್ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರಮಂದಿರದಲ್ಲಿ 25 ಆಸನಗಳಿಗೆ ವ್ಯವಸ್ಥೆ ಮಾಡಲಾಗಿದೆ. ಒಟಿಟಿಯಲ್ಲಿ ಬಿಡುಗಡೆಯಾಗುವ ಸಿನಿಮಾ, ಮದುವೆ ಆಲ್ಬಂ ವಿಡಿಯೋ,  ಸ್ಥಳೀಯ ಕಲಾವಿದರು ನಿರ್ಮಿಸುವ ಆಲ್ಬಾಮ್ ಸಾಂಗ್, ಸಾಕ್ಷಚಿತ್ರ ಪ್ರದರ್ಶನಕ್ಕೆ ಈ ಮಿನಿ ಥಿಯೇಟರ್ ಬಳಸಿಕೊಳ್ಳುವ ರೀತಿಯಲ್ಲಿ ಚಿತ್ರಮಂದಿರ ನಿರ್ಮಾಣಗೊಂಡಿದೆ ಎಂದು ತಿಳಿಸಿದರು. … Read more

ಮಾಯಕೊಂಡ: ಬಿಜೆಪಿ ಬಂಡಾಯ ಶಮನಕ್ಕೆ ಯತ್ನ- ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ. 22: ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಒಟ್ಟಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್‍ ರನ್ನು ಕಣಕ್ಕಿಳಿಸಿದ್ದಾರೆ. ಅಲ್ಲಿನ ಬಂಡಾಯವನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಾಮ ಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಕಾಲಾವಕಾಶ ಇದ್ದು ಬಂಡಾಯ ಶಮನವಾಗುವ ವಿಶ್ವಾಸವಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಈಗಾಗಲೇ ಬಂಡಾಯ ಎದ್ದಿರುವವರ ಜತೆ ಮಾತುಕತೆ ನಡೆಯುತ್ತಿದೆ. ಎಂದು ತಿಳಿಸಿದ ಅವರು,  ನಾಮಪತ್ರ ವಾಪಸ್ ತೆಗೆಸುತ್ತೇವೆ. ಎಲ್ಲೂ ಬಂಡಾಯವಾಗಲು ಬಿಡುವುದಿಲ್ಲ. ಮಾಡಾಳ್ ಮಲ್ಲಿಕಾರ್ಜುನ್ ಜತೆ ಮಾತುಕತೆ … Read more

ಮಹಿಳೆ ನಾಪತ್ತೆ ಪ್ರಕರಣ – ಫೋನ್ ಪೇ ಮೂಲಕ 50 ಸಾವಿರ ಲಂಚ – ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.22: ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ಪೋನ್ ಪೇ ಮೂಲಕ ಲಂಚದ ಹಣ ಸ್ವೀಕರಿಸಿದ್ದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ಐ ಶಿವನಗೌಡ ಹಾಗೂ ಕಾನ್ಸ್ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು  ನಾಪತ್ತೆ ಪ್ರಕರಣದಲ್ಲಿ ಕಾಣೆಯಾದ ಮಹಿಳೆಯನ್ನು ಜೊತೆಗೆ ಕಳಿಸಿಕೊಡಲು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳೆಕಟ್ಟೆ ಗ್ರಾಮದ ಕೆ.ರಂಗಸ್ವಾಮಿ ಎಂಬುವರಿಗೆ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ರಂಗಸ್ವಾಮಿ ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more

ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ  ಕಂಪನಿಗೆ ಜಿಎಂಐಟಿ ಇಸಿ ವಿಭಾಗದ 48 ವಿದ್ಯಾರ್ಥಿಗಳು ಆಯ್ಕೆ

ಪ್ರಸಕ್ತ ಸಾಲಿನಲ್ಲಿ 507 ಆಫರ್ಸ್ ಸ್ವೀಕರಿಸಿದ ಮದ್ಯ ಕರ್ನಾಟಕದ  ಜಿಎಂಐಟಿ ಕಾಲೇಜ್ ಸುದ್ದಿ360 ದಾವಣಗೆರೆ, ಏ.21: ಪೇಸ್ ಡಿಟಿಟೆಕ್ ಇನ್ಫ್ರಾ ಪ್ರೈ ಲಿ  ಕಂಪನಿ ಕಳೆದ ಗುರುವಾರ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ನಗರದ ಜಿಎಮ್ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ 48 ವಿದ್ಯಾರ್ಥಿಗಳು ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಗಳಾಗಿ ಆಯ್ಕೆಯಾಗಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ  2022-23 ರ ಸಾಲಿನಲ್ಲಿ ಇದುವರೆಗೆ 507 … Read more

ಮಕ್ಕಳ ರಜೆಯ ಮೋಜಿಗೆ ಬೀದಿ ನಾಯಿಗಳ ಅಡ್ಡಿ – ದಾವಣಗೆರೆ ಮಹಾನಾಗರ ಪಾಲಿಕೆ ಮಕ್ಕಳ ರಜೆಗೆ ರಂಗು ನೀಡಬಹುದೆ?

-ಕೂಡ್ಲಿ ಸೋಮಶೇಖರ್ ಬೇಸಿಗೆ ರಜೆ ಬಂತೆಂದರೆ ಮಕ್ಕಳ ಆಟೋಪಾಟಕ್ಕೆ ಎಣೆಯುಂಟೆ? ಶಾಲಾ ದಿನಗಳಲ್ಲೇ ಅವರನ್ನು ನಿಯಂತ್ರಿಸಲು ಹರಸಾಹಸ ಪಡುವ ಪೋಷಕರು ರಜಾದಿನಗಳಲ್ಲಿ ಅವರನ್ನು ಸಂಬಾಳಿಸುವುದು ಹೇಗಪ್ಪಾ ಅನ್ನೋ ಪೇಚಿಗೆ ಸಿಲುಕುವುದು ಸರ್ವೆ ಸಾಮಾನ್ಯ. ಹೇಗೋ ಮನೆಯಾಚೆ ಸ್ನೇಹಿತರೊಡಗೂಡಿ ಆಟವಾಡಿಕೊಂಡು ಬರಲಿ ಎಂದು ಮನೆಯಾಚೆ ಕಳಿಸಿದರೆ ನಾಯಿಗಳ ಹಿಂಡೇ ಮಕ್ಕಳ ಮೇಲೆ  ಎರಗುವ ಪ್ರಕರಣಗಳು ನಗರದ ಕೆಲವೆಡೆ ಆಗೊಮ್ಮೆ ಈಗೊಮ್ಮೆ ವರದಿಯಾಗುತ್ತಲೇ ಇದೆ. ನಗರದ ದೇವರಾಜ ಅರಸು ಬಡಾವಣೆ ಬಿ ಬ್ಲಾಕ್ನಲ್ಲಿಯೂ ಕೂಡ ಇಂತಹ ಪ್ರಕರಣಗಳು ಹೆಚ್ಚಾಗುತ್ತಲಿದ್ದು, ಪೋಷಕರು … Read more

error: Content is protected !!