ಸಿದ್ಧರಾಮಯ್ಯಗೆ ಕುರಿ – ಕಂಬಳಿಯೊಂದಿಗೆ ಭವ್ಯ ಸ್ವಾಗತ ನೀಡಿದ ಕಾರ್ಯಕರ್ತರು

ಸುದ್ದಿ360, ಬೆಳಗಾವಿ  ಜ.11: ಕಾಂಗ್ರೆಸ್ ನ ಬಸ್ ಯಾತ್ರೆ ಅಂಗವಾಗಿ ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಾಜಿಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮ ಬಳಿ ಭಾರಿ ಸ್ವಾಗತ ಕಾದಿತ್ತು. ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧರಾಮಯ್ಯರಿಗಾಗಿ ಕುರಿ ಮತ್ತು ಕಂಬಳಿಯನ್ನು ಉಡುಗೊರೆಯಾಗಿ ನೀಡಿ ಸ್ವಾಗತಿಸಿದರು. ಶಂಭು ಕಲ್ಲೋಳ್ಕರ್, ಧೂಳಗೌಡ ಪಾಟೀಲ್ ನೇತೃತ್ವದಲ್ಲಿ ರಾಯಭಾಗ ಮತಕ್ಷೇತ್ರದಿಂದ  ಬೈಕ್ ರ್ಯಾಲಿ ಮೂಲಕ ಮಜಲಟ್ಟಿ ಗ್ರಾಮ ಬಳಿ … Read more

ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ಪ್ರಾಣ ಬಿಟ್ಟ ತಾಯಿ

ಸುದ್ದಿ360, ಬಾಗಲಕೋಟೆ ಜ.11: ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿದ ತಾಯಿ ಕೊನೆಗೆ ತಾನೂ ವಿಷ ಕುಡಿದು ಪ್ರಾಣ ಬಿಟ್ಟಿರುವ ಧಾರುಣ ಘಟನೆ ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ರೇಖಾ ಬಗಲಿ(28) ತಾಯಿ, ಮಕ್ಕಳಾದ ಸನ್ನಿಧಿ(೮), ಸಮೃದ್ದಿ(5), ಶ್ರೀನಿಧಿ(3) ಹೀಗೆ ಮೃತಪಟ್ಟವರಾಗಿದ್ದಾರೆ. ರೇಖಾ ಇತ್ತೀಚೆಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಳು ಎಂದು ಹೇಳಲಾಗಿದ್ದು, ಮೂರು ಜನ ಹೆಣ್ಣು ಮಕ್ಕಳಿದ್ದ ಕಾರಣ ಮಕ್ಕಳ‌ ವಿದ್ಯಾಭ್ಯಾಸ , ಮದುವೆ ಬಗ್ಗೆ  ಚಿಂತಿಸಿ‌ ಮಾನಸಿಕವಾಗಿ ಬಳಲಿದ್ದಳು ಎಂಬ ಮಾಹಿತಿ ಕೇಳಿಬರುತ್ತಿದೆ. ಜ್ಯೂಸ್ ಬಾಟಲ್‌ನಲ್ಲಿ … Read more

ಶಾಲೆಗೆ ಹೊರಟ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸುದ್ದಿ360, ಶಿವಮೊಗ್ಗ ಜ.11:  ಎಂದಿನಂತೆ ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ10ನೆಯ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದಾಗಿ ಸಾವು ಕಂಡಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಯಂತ್ ಎಂಬ ಬಾಲಕನೇ ಮೃತ ದುರ್ದೈವಿ. ಇಂದು ಮುಂಜಾನೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಟ – ಪಾಠಗಳಲ್ಲಿ … Read more

ಬೇಡಿಕೆ ಈಡೇರಿಕೆಗೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ-ಮನವಿ

ಸುದ್ದಿ360 ದಾವಣಗೆರೆ ಜ.11: ಹಲವಾರು ವರ್ಷಗಳಿಂದ ನಮ್ಮ ಬೇಡಿಕೆಗಳು ಬೇಡಿಕೆಗಳಾಗೆ ಉಳಿದಿವೆ, ನಮ್ಮ ಬೇಡಿಕೆಗಳ ಕುರಿತಾಗಿ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯುಕ್ತರ ನೇತೃತ್ವದಲ್ಲಿ ತಕ್ಷಣ ಜಂಟಿ ಸಭೆ ಕರೆದು ಕ್ರಮ ಕೈಗೊಳ್ಳಬೇಕು ಎಂಬುದಾಗಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಆಗ್ರಹಿಸಿದೆ, ಮೂಲಭೂತ ಸೌಕರ್ಯಗಳೊಂದಿಗೆ ವಸತಿ/ನಿವೇಶನ ರಹಿತರಿಗೆ ವಸತಿ/ನಿವೇಶನ ಕಲ್ಪಿಸಲು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಆವರಣ ತಲುಪಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. … Read more

ದಾವಣಗೆರೆಯಲ್ಲಿ ಸಂಚಾರಿ ನಿಯಮ ಅರಿವು ಮೂಡಿಸುವ ಚಂದದ ಕಲಿಕೆಯ ‘ಟ್ರಾಫಿಕ್ ಅವೇರ್ನೆಸ್ ಪಾರ್ಕ್’ – ನೀವೂ ಒಮ್ಮೆ ಭೇಟಿ ನೀಡಿ…

ಸುದ್ದಿ360 ದಾವಣಗೆರೆ ಜ.11: ರಸ್ತೆ ಮೇಲಿನ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಸ್ತೆಬದಿಯಲ್ಲಿನ ಸಂಚಾರಿ ನಿಯಮಗಳ ಸೂಚನಾ ಫಲಕಗಳ ಬಗ್ಗೆ ವಿದ್ಯಾರ್ಥಿದಿಸೆಯಿಂದಲೇ ಅರಿವು ಮೂಡಿಸಿದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ನಗರದ ನಿಜಲಿಂಗಪ್ಪ ಬಡಾವಣೆಯ  ಶ್ರೀಮತಿ ಗಂಗೂಬಾಯಿ ಹಾನಗಲ್ಲ ಉದ್ಯಾನವನ (ಗಸೆಗಸೆ ಪಾರ್ಕ್)  ದಲ್ಲಿ ನಿರ್ಮಿಸಲಾಗಿದ್ದ ‘‘ಸಂಚಾರ ಜಾಗೃತಿ ಉದ್ಯಾನವನ’ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ 24ಕ್ಕೂ ಹೆಚ್ಚು ಸೂಚನಾ … Read more

ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು ಜ.10: ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ  ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು,  ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸುವುದರ ಜೊತೆಗೆ ಉನ್ನತ ಮಟ್ಟದ ತನಿಖೆ ಮಾಡುವಂತೆಯೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಪ್ರಶ್ನೆ ಇರುವುದು ಇಷ್ಟು ಅಸುರಕ್ಷಿತವಾಗಿ ಹೇಗೆ  ಕೆಲಸ ಮಾಡಿದರು ಎನ್ನುವುದನ್ನು ಪತ್ತೆ ಹಚ್ಚಿ, ಮುಂದೆ ಹೀಗಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತನಿಖೆ ಹಾಗೂ ತಾಂತ್ರಿಕ ಲೋಪದ ಏನು ಎಂಬುದರ ಬಗ್ಗೆ ಕ್ರಮ … Read more

ದಾವಣಗೆರೆ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ನೇಮಕ

ಸುದ್ದಿ360 ದಾವಣಗೆರೆ, ಜ.10:  ಬರಲಿರುವವಿಧಾನಸಭೆ ಚುನಾವಣೆಗೆ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಟಿಕೆಟ್ ಹಂಚಿಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಎಲ್ಲಾ ಪ್ರಕ್ರಿಯೆಗಳಲ್ಲಿ ಇವರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪ್ರಣಿತಿಸುಶೀಲ್ ಕುಮಾರ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದರು. ಕೇಂದ್ರ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿಯಾಗಿದ್ದಾರೆ.

ಜ.13: ಮುಖ್ಯಮಂತ್ರಿಯವರ ಶಿಗ್ಗಾವಿಯ ಮನೆ ಮುಂದೆ ಸತ್ಯಾಗ್ರಹ – ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸುದ್ದಿ360 ಬೆಳಗಾವಿ, ಜ.10: ಬೀಸುವ ದೊಣ್ಣಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿರುವ ಸರಕಾರ  ಮೀಸಲಾತಿ ಹುಸಿ ಭರವಸೆ ಕೊಡುವ ಮೂಲಕ  ಹೋರಾಟದ ದಾರಿ ತಪ್ಪಿಸುತ್ತಿದೆ. ಸರಕಾರಕ್ಕೆ ಬಿಸಿ ಮುಟ್ಟಿಸಲು ಜ.13 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಂದು ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದ ಸರಕಾರ … Read more

ಗೌರವಯುತ ಜೀವನ ನಡೆಸಲು ಬಿಡಿ – ಪಿಂಚಣಿದಾರರ ಆಗ್ರಹ

ಸುದ್ದಿ 360 ದಾವಣಗೆರೆ, ಜ.10:  ನಿವೃತ್ತ ಸರಕಾರಿ ನೌಕರರು ಗೌರವಯುತ ಜೀವನ ನಡೆಸಲು ಅನುಕೂಲವಾಗುವಂತೆ ಪಿಂಚಣಿ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಕೇಂದ್ರ ಸರಕಾರ, ಭವಿಷ್ಯ ನಿಧಿ ಇಲಾಖೆ ತಮಗೆ ಬೇಕಾದಂತೆ ಸುತ್ತೋಲೆ ಹೊರಡಿಸಿ ಪಿಂಚಣಿದಾರರಿಗೆ ತೊಂದರೆ ನೀಡುತ್ತಿವೆ ಎಂದು ಆರೋಪಿಸಿ ಇಂದು ಮಂಗಳವಾರ ಪಿಂಚಣಿದಾರರು ಪ್ರತಿಭಟನೆ ನಡೆಸಿದರು. ನಗರದ ಕೆ.ಬಿ. ಬಡಾವಣೆಯ ಭವಿಷ್ಯ ನಿಧಿ ಕಚೇರಿ ಎದುರು ರಾಷ್ಟ್ರೀಯ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟಿಸಿದ ಪಿಂಚಣಿದಾರರು, ಸಾರಿಗೆ, ದೂರ ಸಂಪರ್ಕ ಸೇರಿ ಸರಕಾರದ … Read more

ನ್ಯಾ.ಸದಾಶಿವ ವರದಿ ಯಥಾವತ್ ಜಾರಿ ಒತ್ತಾಯಿಸಿ ದಸಂಸ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10:  ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಯದೇವ ವೃತ್ತ,  ಗಾಂಧಿ ವೃತ್ತ, ಪಿಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ  ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ದಲಿತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಈ ವೇಳೆ ಮಾತನಾಡಿದ … Read more

error: Content is protected !!