ಜಿಎಂಐಟಿಯ ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

ಸುದ್ದಿ360 ದಾವಣಗೆರೆ ಜ.3: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯು ಇತ್ತೀಚೆಗೆ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂತಿಮ ವರ್ಷದ ಎಲ್ಲಾ ಅರ್ಹ ವಿದ್ಯಾರ್ಥಿ ಪಾಲ್ಗೊಂಡು ಕೊನೆಗೆ 20 ವಿದ್ಯಾರ್ಥಿಗಳು ಆಯ್ಕೆಯಾದರು. ಆಯ್ಕೆಯಾದ 20 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಟಿಸಿಎಚ್ ಡಿಜಿಟಲ್ ಮತ್ತು ಉಳಿದ 17 ವಿದ್ಯಾರ್ಥಿಗಳು ಟಿಸಿಎಸ್ ನಿಂಜ ಆಫರ್ ನೀಡಿವೆ … Read more

ಜ.5,6 ಚಿತ್ರದುರ್ಗದ ಶ್ರೀ ಮಡಿವಾಳ ಮಾಚಿದೇವ ಮಠದಲ್ಲಿ ‌ಕಾಯಕ ಜನೋತ್ಸವ

ಸುದ್ದಿ360 ದಾವಣಗೆರೆ ಜ.3: ಚಿತ್ರದುರ್ಗದ ಜಗದ್ಗುರು ಶ್ರೀಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆಯ 14ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳವರ ಜಂಗಮ ದೀಕ್ಷೆಯ 24ನೇ ಹಾಗೂ 39ನೇ ಜನ್ಮದಿನದ ವಾರ್ಷಿಕೋತ್ಸವ ಮತ್ತು ಜಗದ್ಗುರು ಡಾ.ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ 5ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಇದೇ ಜನವರಿ 5 ಮತ್ತು 6ರಂದು 2 ದಿನಗಳ ಕಾಲ ಕಾಯಕ ಜನೋತ್ಸವ 2023ನ್ನು ಆಯೋಜಿಸಲಾಗಿದೆ ಎಂದು  ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್ … Read more

ಜ.4ಕ್ಕೆ ಪುಸ್ತಕ ಪಂಚಮಿ

ದಾವಣಗೆರೆ ನಗರದ ಆಯ್ದ 68 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಸುದ್ದಿ360 ದಾವಣಗೆರೆ ಜ.3: ಡಾ ಹೆಚ್ ಎಫ್ ಕಟ್ಟೀಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಧಾರವಾಡ, ದಾವಣಗೆರೆ ಘಟಕದಿಂದ‌ ಪುಸ್ತಕ ವಾಚನ ಸಹಾಯ ಯೋಜನೆಯಡಿಯಲ್ಲಿ ‘ಪುಸ್ತಕ ಪಂಚಮಿ’ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಜ.4ರಂದು ನಗರದ ಪಿಜೆ ಬಡಾವಣೆಯ ಈಶ್ವರಮ್ಮ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಪ್ರಕಾಶ್ ಬೂಸ್ನೂರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, … Read more

ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದಿಂದ ಬಿ.ಎಸ್. ಜಗದೀಶ್ ಜನ್ಮದಿನಾಚರಣೆ

ಸುದ್ದಿ360 ದಾವಣಗೆರೆ ಜ.3: ಶ್ರೀ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಅವರ ಹುಟ್ಟುಹಬ್ಬವನ್ನು ಜ.5ರಂದು ಸಂಜೆ 6 ಗಂಟೆಗೆ ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ-ಆಫ್ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವುದಾಗಿ ಮಾಜಿ ಮಹಾಪೌರರಾದ ಪಿ.ಎಸ್. ಜಯಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕ ಕೆ.ಬಿ. ಶಂಕರನಾರಾಯಣ ಅವರು ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ, ಸಂಸದರಾದ ಡಾ. ಜಿ.ಎಂ. ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ  ಎಸ್.ಎಂ. … Read more

ಜ.5ಕ್ಕೆ ದಾವಣಗೆರೆಗೆ ಶಿವರಾಜ್ ಕುಮಾರ್ ಹಾಗೂ ವೇದ ಚಿತ್ರತಂಡ

ವೇದ ಚಿತ್ರದ ‘ಶಿವ ಸಂಭ್ರಮಾಚರಣೆ’ ಸುದ್ದಿ360 ದಾವಣಗೆರೆ ಜ.3: ಶಿವರಾಜ್ ಕುಮಾರ್ ಅವರ 125ನೇ ಚಿತ್ರ ವೇದ ಜನಮೆಚ್ಚುಗೆ ಪಡೆಯುತ್ತಿದ್ದು, ಚಿತ್ರತಂಡ  ಸಂಭ್ರಮ ಪಡುತ್ತಿರುವ  ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳಿಂದ ‘ಶಿವ ಸಂಭ್ರಮಾಚರಣೆ’ ನಡೆಯುತ್ತಿದ್ದು, ಅಂತೆಯೇ ದಾವಣಗೆರೆಯಲ್ಲಿ ಕೂಡ ಜ.5ರಂದು ಡಾ. ರಾಜ್‍ಕುಮಾರ್, ಡಾ. ಶಿವರಾಜ್ ಕುಮಾರ್, ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ ಸಂಭ್ರಮಾಚರಣೆ ನಡೆಸುತ್ತಿರುವುದಾಗಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಸಂಭ್ರಮಾಚರಣೆಯಲ್ಲಿ ಡಾ. … Read more

ನುಡಿದಂತೆ ನಡೆದವರು, ನಡೆದಂತೆ ನುಡಿದವರು ಶ್ರೀ ಸಿದ್ದೇಶ್ವರ ಸ್ವಾಮೀಜಿ: ಗಡಿಗುಡಾಳ್ ಮಂಜುನಾಥ್

ದಾವಣಗೆರೆ ಜ.3: ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ನಡೆದಾಡುವ ದೇವರು. ಜೀವನ ಶೈಲಿ, ಉಪನ್ಯಾಸ, ಸ್ಫೂರ್ತಿದಾಯಕ ಮಾತುಗಳಿಂದ ವಿಶ್ವಾದ್ಯಂತ ಕೋಟ್ಯಾಂತರ ಅನುಯಾಯಿಗಳನ್ನು ಹೊಂದಿದ್ದ ಎರಡನೇ ವಿವೇಕಾನಂದ ಅಂತಾನೇ ಪ್ರಸಿದ್ಧಿ ಪಡೆದವರು. ಅವರ ಅಗಲಿಕೆ ಕರುನಾಡಿಗೆ ನೋವು ತಂದಿದೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಹೇಳಿದರು. ನಗರದ ಎಂಸಿಸಿ ಬಿ ಬ್ಲಾಕ್ ನ ಈಜುಕೊಳದ ಬಳಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ತಿಕೋಟಾ … Read more

‘ಎಲುಬಿಲ್ಲದ ನಾಲಗೆ ಹರಿಯಬಿಡಬೇಡಿ’

ರಾಜನಹಳ್ಳಿ ಶಿವಕುಮಾರ್ ಅವರಿಗೆ ವೀರಶೈವ ಮಹಾಸಭಾ ಗೌರವಯುತ ಸಲಹೆ – ಎಚ್ಚರಿಕೆ ಸುದ್ದಿ360 ದಾವಣಗೆರೆ ಜ.3: ರಾಜಕೀಯ ವ್ಯಕ್ತತ್ವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮೂಳೆ ಇಲ್ಲದ ನಾಲಗೆಯನ್ನು ಹಗುರವಾಗಿ ಹರಿಯಬಿಡಬಾರದು, ಧರ್ಮದ ವಿಚಾರವಾಗಿ ಹಾಗೂ ಹಿರಿಯರ, ರಾಷ್ಟ್ರೀಯ ಅಧ್ಯಕ್ಷರ ವಿಚಾರವಾಗಿ ಮಾತನಾಡುವಾಗ ಪೈಲ್ವಾನ್ ಶಿವಕುಮಾರ್‍ರವರು ಎಚ್ಚರದಿಂದ ಮಾತನಾಡುವಂತೆ ವೀರಶೈವ ಮಹಾಸಭಾ ವತಿಯಿಂದ ಗೌರವಯುತವಾದ ಸಲಹೆ ಮತ್ತು ಎಚ್ಚರಿಕೆಯನ್ನು ನೀಡಬಯಸುವುದಾಗಿ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಜಿ. ಶಿವಕುಮಾರ್ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read more

ಕಲಿಕೆಯೊಂದಿಗೆ ಕುಣಿತದ ಝಲಕ್ ನೀಡಿದ ದವನ್ ಕಾರ್ನಿವಲ್-2022

ಸುದ್ದಿ360 ದಾವಣಗೆರೆ, ಡಿ.31: ಗಂಧದ ಗುಡಿ, ಹಳ್ಳಿಮನೆ, ದೇಶಿ ಖಿಲ್ಲ, ಫುಡ್ ಪಾಯಿಂಟ್, ಈಶ್ವರ್, ಗೋಲ್ಡನ್ ಸ್ಪೂನ್ ರೆಸ್ಟಾರೆಂಟ್, ಫಾಲ್ ಆಫ್ ಫ್ಲೇವರ್ಸ್, ಫುಡೀಶಿಯಸ್ ಹ್ಯಾಲೊ ಸ್ಪೂಕಿ, ಹಕುನ ಮಟಾಟ ಇಂತಹ ಹೆಸರಿನ ಒಟ್ಟು 16 ಸ್ಟಾಲ್ಗಳು ಇಂದು ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯಭವನದಲ್ಲಿ ನಡೆದ ದವನ್ ಕಾರ್ನಿವಲ್-2022 ಜಾತ್ರೆಯ ವಾತಾವರಣವನ್ನೇ ನಿರ್ಮಿಸಿತ್ತು. ದವನ್ ಇನ್ಟ್ಸಿಟ್ಯೂಟ್ ಆಫ್ ಅಡ್ವಾನ್ಸ್‍ಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ವತಿಯಿಂದ 2022ರ ಕೊನೆಯ ದಿನದಂದು ಆಯೋಜಿಸಲಾಗಿದ್ದ ದವನ್ ಕಾರ್ನಿವಲ್-2022ನ್ನು ದವನ್ ಕಾಲೇಜು ಕಾರ್ಯದರ್ಶಿ ವೀರೇಶ್ … Read more

ಭಾರತೀಯ ಮೌಲ್ಯ ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ: ಮಂಜುನಾಥ್ ಏಕಬೋಟೆ

ಸುದ್ದಿ360 ದಾವಣಗೆರೆ, ಡಿ.30: ಭಾರತೀಯ ಮೌಲ್ಯಗಳ ಪರಿಕಲ್ಪನೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈಶ್ವರಮ್ಮ ಶಾಲೆಯೂ ಒಂದು ಆದರ್ಶ. ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ಗುರುತಿಸಿ ಮಕ್ಕಳಿಗೆ ನೀಡುತ್ತಿರುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಏಕಬೋಟೆ ಹೇಳಿದರು. ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಶಾಲೆಗಳು ಸಮಾಜದ … Read more

‘ಧರ್ಮಕ್ಕಾಗಿ ನಾವಲ್ಲ – ನಮಗಾಗಿ ಧರ್ಮ’ ಧರ್ಮಗಳ ನಡುವಿನ ಗೋಡೆ ಕೆಡವುವುದು ಎಲ್ಲರ ಕರ್ತವ್ಯ

ದಾವಣಗೆರಯಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಸಿದ್ಧರಾಮಯ್ಯ ಸುದ್ದಿ360 ದಾವಣಗೆರೆ, ಡಿ.30: ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಸೇರಿದಂತೆ ನಮ್ಮ ರಾಷ್ಟ್ರಕವಿ ಕುವೆಂಪುರವರು ಈ ನೆಲವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬುದನ್ನು ಸಾರಿ ಸಾರಿ ಹೇಳಿದ್ದಾರೆ. ಇಂತಹ ಮಹಾನುಭಾವರ ಪುತ್ಥಳಿಗಳನ್ನು ನಿರ್ಮಿಸಿ ಪೂಜೆ ಮಾಡಿದರೆ ಸಾಲದು, ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವ ಮೂಲಕ  ಎಲ್ಲರೂ ಮನುಷ್ಯರಂತೆ ಬದುಕುವ ವಾತಾವರಣ ಸೃಷ್ಟಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ಇಂದು ನಗರದ ವೀರಮದಕರಿ ನಾಯಕ ವೃತ್ತದಲ್ಲಿ … Read more

error: Content is protected !!