ಎಸ್ಎಸ್ಎಂ@55 ಹುಟ್ಟುಹಬ್ಬದ  ಅಂಗವಾಗಿ ಅಂತರ್ ಜಿಲ್ಲಾ ಚದುರಂಗ ಸ್ಪರ್ಧೆ

ಸುದ್ದಿ360 ದಾವಣಗೆರೆ, ಸೆ.14: ಎಸ್ ಎಸ್ ಮಲ್ಲಿಕಾರ್ಜುನ್ ಅವರ 55ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆ ನಗರದ ಎವಿಕೆ ಕಾಲೇಜ್ ಹತ್ತಿರವಿರುವ ಗುರುಭವನದಲ್ಲಿ ಸೆ.18ರ ಭಾನುವಾರದಂದು 19 ವರ್ಷದ ಒಳಗಿನ ವಯೋಮಿತಿ ಮಕ್ಕಳಿಗೆ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ – ಎಸ್ ಎಸ್ ಎಂ @55 ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ಪಂದ್ಯಾವಳಿಯ ಉದ್ಘಾಟನೆಯನ್ನು ಬೆಳಿಗ್ಗೆ 10.00 ಗಂಟೆಗೆ ಲೆಕ್ಕಾಧಿಕಾರಿಗಳು ಹಿರಿಯ ಉದ್ಯಮಿಗಳಾದ ಅಥಣಿ ವೀರಣ್ಣನವರು ಉದ್ಘಾಟಿಸಲಿದ್ದು ಸಂಜೆ 5.00 ಗಂಟೆಗೆ  ನಡೆಯುವ ಕಾರ್ಯಕ್ರಮದಲ್ಲಿ ಡಾಕ್ಟರ್ ಶಾಮನೂರು ಶಿವಶಂಕರಪ್ಪನವರು … Read more

ನೆಹರೂ ಒಳಾಂಗಣ ಕ್ರೀಡಾಂಗಣದ ವಿಷಯದಲ್ಲಿ ಕ್ರೀಡಾಧಿಕಾರಿಗಳ ಧೋರಣೆ ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360 ಶಿವಮೊಗ್ಗ, ಸೆ. 14: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು ಖಂಡಿಸಿ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ನೀಡಲು ಅನುವು ಮಾಡಿಕೊಡಬೇಕು ಎಂದು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ 4ಶಟಲ್ ಕೋರ್ಟ್ ಗಳಿಗೆ ಸಿಂಥೆಟಿಕ್ ಹಾಕಲಾಗುತ್ತಿದೆ ಎಂಬ ವಿಷಯವನ್ನೇ ನೆಪವಾಗಿಟ್ಟುಕೊಂಡು ಕ್ರೀಡಾಧಿಕಾರಿಯವರು ಬಹು ಬಳಕೆಗಾಗಿ ಸ್ಥಾಪಿಸಲ್ಪಟ್ಟ ನೆಹರು ಒಳಾಂಗಣ … Read more

ದಾವಣಗೆರೆ ಪೊಲೀಸರಿಂದ ನಾಲ್ಕು ಅಂತರ್ ಜಿಲ್ಲಾ ಕಳ್ಳರ ಬಂಧನ

ಸುದ್ದಿ360 ದಾವಣಗೆರೆ, ಸೆ.14: ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಜಿಲ್ಲಾ ಪೊಲೀಸರು ಆರೋಪಿಗಳಿಂದ 4,87,350 ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ 6ನೇ ಕಲ್ಲು ಮತ್ತು ತುರ್ಚಗಟ್ಟ ಗ್ರಾಮದಲ್ಲಿ ರಾತ್ರಿ ಕನ್ನಕಳವು ಪ್ರಕರಣಗಳು ವರದಿಯಾಗಿದ್ದು, ಈ ಬಗ್ಗೆ ಆ.28 ರಂದು ಹದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದರಿ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆಗಾಗಿ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಎಎಸ್‌ಪಿ ಕನಿಕಾ ಸಿಕ್ರಿವಾಲ್ … Read more

ಇಲ್ಲಿ ಚಿಮ್ಮುವ ನೀರಿಗೆ ಸುಂಕ ಕಟ್ಟೋರು ಯಾರು. . .?

ಸುದ್ದಿ360, ದಾವಣಗೆರೆ: ಹರಿಯೋ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ನಿಜ ಆದರೆ ಇಲ್ಲಿ ಚಿಮ್ಮುವ ನೀರಿಗೆ ಯಾರ ಅಪ್ಪಣೆಯಾದರೂ ಇರಬೇಕಲ್ಲವಾ. . . .? ಅಪ್ಪಣೆ ಇರದಿದ್ದರೂ ಬೇಜಾವಾಬ್ದಾರಿ ಅಂತೂ ಇದ್ದೇ ಇದೆ ಎಂಬುದು ನಾಗರೀಕರು ಮಾತಾಡಿಕೊಳ್ಳುವ ಕಟು ಸತ್ಯ. ಈ ಮೂಲಕ ಇಲ್ಲಿ ವರದಿ ಮಾಡಲು ಹೊರಟಿರುವ ವಿಷಯ ಏನು ಅಂತೀರಾ. . . ನಗರದ ದೇವರಾಜು ಅರಸು ಬಡಾವಣೆ ಎ ಬ್ಲಾಕ್. ಇದು ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆಯ ಪಕ್ಕದ ಸರ್ವಿಸ್ ರಸ್ತೆಯಾಗಿದ್ದು, ಎಸ್ ಪಿ … Read more

ಹಿಂದಿ ಹೇರಿಕೆ ವಿರುದ್ಧ ನಾಳೆ ಡಿಡಿಪಿಐ ಕಚೇರಿ ಮುಂದೆ ಕರವೇ ಧರಣಿ (ಸೆ.14)

ಸುದ್ದಿ360 ದಾವಣಗೆರೆ, ಸೆ.13: ಹಿಂದಿ ಹೇರಿಕೆ ವಿರುದ್ಧ ಸೆ.14ರ ಬುಧವಾರ ಇಲ್ಲಿನ ಡಿಡಿಪಿಐ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಎದುರು ಧರಣಿ ಹಮ್ಮಿಕೊಂಡಿರುವುದಾಗಿ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕ ಹಿಂದಿ ಹೇರಿಕೆ ವಿರುದ್ಧ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದೆ. ಕರವೇ ಯಾವುದೇ ಭಾಷೆಯನ್ನೂ ವಿರೋಧಿಸುವುದಿಲ್ಲ ಆದರೆ ಸರಕಾರ ಜನರ ತೆರಿಗೆ ಹಣ ಬಳಸಿ ಒಂದು ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವುದು, ಕನ್ನಡ ನಾಡಿನಲ್ಲಿ ಕನ್ನಡಿಗರ ಮೇಲೆ ಹಿಂದಿ ಹೇರುವುದು … Read more

‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . .

ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಯುವ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಸಿಟಿ ರವಿಯವರ ಮಾತುಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರ … Read more

ಚಿಂತನಾ ಶಕ್ತಿ ಬೆಳವಣಿಗೆಗೆ ಶ್ರದ್ಧೆ, ಏಕಾಗ್ರತೆ , ಪರಿಶ್ರಮಗಳು  ಅತ್ಯಗತ್ಯ: ಜಿ ಆರ್ ಷಣ್ಮುಖಪ್ಪ

ಲಯನ್ಸ್ ಕ್ಲಬ್ ನಿಂದ ವಿದ್ಯಾರ್ಥಿಗಳಿಗೆ  ಕನ್ನಡ ರತ್ನಕೋಶ ವಿತರಣೆ ಸುದ್ದಿ360 ದಾವಣಗೆರೆ, ಸೆ.13: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಶ್ರದ್ಧೆ, ಏಕಾಗ್ರತೆ, ಸತತ ಪರಿಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆಗ ಅವರ ಚಿಂತನಾ ಶಕ್ತಿ ಬೆಳವಣಿಗೆಯಾಗುತ್ತದೆ ಅದು ಅವರ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ  ಜಿ ಆರ್ ಷಣ್ಮುಖಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತ್ತಿಗೆರೆಯ ಪಟೇಲ್ ನಂದಪ್ಪ ಹೊರಟ್ಟಿಗೌಡ್ರು ಕಲ್ಲಪ್ಪ ಪ್ರೌಢ ಶಾಲೆಯಲ್ಲಿ ದಾವಣಗೆರೆಯ ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ  ಕನ್ನಡ ರತ್ನಕೋಶ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ … Read more

ಮಠಾಧೀಶರು ಮದುವೆಯಾಗುವುದು ಸೂಕ್ತ: ಶ್ರೀ ಪ್ರಣವಾನಂದ ಸ್ವಾಮೀಜಿ

ಸುದ್ದಿ360, ದಾವಣಗೆರೆ ಸೆ.12: ಭಾರತದ ಸನಾತನ ಹಿಂದೂ ಧರ್ಮ ಪರಂಪರೆಯಲ್ಲಿ ಪರಿಪೂರ್ಣ ಸನ್ಯಾಸ ಎಂಬುದು ಎಂದಿಗೂ ಇಲ್ಲವೇ ಇಲ್ಲ. ಸ್ವಾಮೀಜಿಗಳು ವಿವಾಹವಾಗಿ, ಸಂಸಾರದೊಂದಿಗೆ ಮಠ ನಡೆಸಿಕೊಂಡು ಹೋಗುವುದು ಸೂಕ್ತ ಎಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಶ್ರೀಗಳು, ಈ ಹಿಂದೆ ವಿಶ್ವಗುರು ಬಸವಣ್ಣನವರ ಆದಿಯಾಗಿ ಬಹುತೇಕ ಗುರುಗಳು ಸಂಸಾರಿಗಳಾಗಿದ್ದರು. ಶಂಕರಾಚಾರ್ಯರು ಒಬ್ಬ ರಾಜನೊಳಗೆ ಪರಕಾಯ ಪ್ರವೇಶ ಮಾಡಿ … Read more

ವಿದ್ಯುತ್‌ ತಿದ್ದುಪಡಿ ಮಸೂದೆ ಜಾರಿಗೆ ವಿರೋಧಿಸಿ ರೈತರ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಸೆ.12: ರೈತರ, ಗ್ರಾಹಕರ ವಿದ್ಯುತ್‌ ತಿದ್ದುಪಡಿ ಮಸೂದೆ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ದಾವಣಗೆರೆ  ಜಿಲ್ಲಾ ಸಮಿತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು. ನಗರದ ಪಿಬಿ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿ ಇರುವ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಚೇರಿಯಿಂದ ಬೈಕ್ ನಲ್ಲಿ ಪ್ರತಿಭಟನಾ ರ್ಯಾಲಿ … Read more

ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್- ಸೌಜನ್ಯಗೆ ದ್ವಿತೀಯ ಸ್ಥಾನ

ಸುದ್ದಿ360, ದಾವಣಗೆರೆ ಸೆ.12: ಇಂದು ಕಣ್ಣೂರು ಸ್ಪೋರ್ಟ್ಸ್ ಅಕಾಡೆಮಿ ರಾಣೇಬೆನ್ನೂರ ನಲ್ಲಿ ಏರ್ಪಡಿಸಲಾಗಿದ್ಧ ಕರ್ನಾಟಕ ಸ್ಟೇಟ್ ಓಪನ್ ರ್ಯಾಪಿಡ್ ಚೆಸ್ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಸೌಜನ್ಯ ವೈ ಎಮ್ ದ್ವಿತೀಯ ಸ್ಥಾನ  ಪಡೆದಿದ್ದಾರೆ. 12 ವರ್ಷದ ಒಳಗಿನ ವಯೋಮಿತಿಯಲ್ಲಿ ದ್ವಿತೀಯ ಸ್ಥಾನಕ್ಕೆ ಭಾಜನರಾಗಿರುವ  ದಾವಣಗೆರೆಯ ವೈ ಎಮ್. ಸೌಜನ್ಯಗೆ ಕರ್ನಾಟಕ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಅಭಿನಂಸಿದ್ದಾರೆ.

error: Content is protected !!