ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ  ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಷ್ಟ್ರಪತಿ ಚುನಾವಣೆಯಂದು ಪ್ರಜಾಪ್ರಭುತ್ವ ಗೆದ್ದಿದೆ. ಭಾರತದ ಅತ್ಯಂತ ಉನ್ನತವಾದ ಸ್ಥಾನ ರಾಷ್ಟ್ರಪತಿ ಸ್ಥಾನ. ಆ ಸ್ಥಾನಕ್ಕೆ ಹಿಂದುಳಿದ ಪ್ರದೇಶದಿಂದ ಬಂದ ಒಬ್ಬ ಮಹಿಳೆ ಅತ್ಯುನ್ನತ ಹುದ್ದೆಗೇರುವುದು ಪ್ರಜಾಪ್ರಭುತ್ವದ ಶಕ್ತಿ. … Read more

ಜಿಟಿಟಿ ಫೌಂಡೇಶನ್ ವತಿಯಿಂದ ಜಿಎಂಐಟಿ ಪ್ಲೇಸ್ಮೆಂಟ್ ಅಧಿಕಾರಿಗೆ ಅಭಿನಂದನೆ ಮತ್ತು ಗೌರವ ಸೂಚಕ ಸನ್ಮಾನ

ಸುದ್ದಿ360, ದಾವಣಗೆರೆ, ಜು.21: ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ಅಭಿನಂದನೆ ಮತ್ತು ಗೌರವಸೂಚಕ ಸನ್ಮಾನವನ್ನು ಏರ್ಪಡಿಸಲಾಗಿತ್ತು. ಜಿ ಟಿ ಟಿ ಫೌಂಡೇಶನ್ ಸಂಸ್ಥೆಯು ಒಂದು  ಎನ್ ಜಿ ಓ ಲಾಭರಹಿತ ಸಂಸ್ಥೆಯಾಗಿದ್ದು, ಸಮಾಜದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ಕೊಡಿಸುವ ಜವಾಬ್ದಾರಿಯನ್ನೂ … Read more

ರಿಯಲ್ ಎಸ್ಟೇಟ್ ಏಜೆಂಟ್ ಅಪಹರಿಸಿ, 20 ಲಕ್ಷ ರೂ. ಪಡೆದು ಪರಾರಿ

ಸುದ್ದಿ360, ವಿಜಯನಗರ, ಜು.21: ಜಮೀನು ಖರೀದಿಸುವ ಆಮಿಷ ತೋರಿದ ದುಷ್ಕರ್ಮಿಗಳು ವಿಜಯನಗರ ಜಿಲ್ಲೆಯ ಕೊಟ್ಟೂರಿನ  ರಿಯಲ್ ಎಸ್ಟೇಟ್ ಏಜೆಂಟ್ ಟಿ. ಹಾಲೇಶ್ ಎಂಬುವರನ್ನ ಅಪಹರಿಸಿ, 20 ಲಕ್ಷ ಹಣ ಪಡೆದು ಪರಾರಿಯಾಗಿದ್ದಾರೆ. ಅಪಹರಣಕಾರರು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಹಾಲೇಶ್ ಅವರು ಕೆಲಸ ಮಾಡುವ ಸ್ಥಳದಿಂದ ಸೈಟ್ ನೋಡುವ ಸಲುವಾಗಿ ಇಬ್ಬರು ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ನಂತರ ಅಪಹರಣಕಾರರಿಗೆ  ಇನ್ನಿಬ್ಬರು ಕಾರಿನಲ್ಲಿ ಜೊತೆಯಾಗಿದ್ದಾರೆ. ಹಾಲೇಶ್ ರನ್ನು ಹರಿಹರಕ್ಕೆ ಕರೆದುಕೊಂಡು ಹೋಗಿದ್ದು, ನಂತರ ಹಾಲೇಶ್ ಅವರಿಗೆ ಜೀವ ಬೆದರಿಕೆ ಹಾಕಿ, … Read more

ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ

ಸುದ್ದಿ360, ವಿಜಯನಗರ (ಹೊಸಪೇಟೆ): ಇಲ್ಲೊಬ್ಬ ಪಾಗಲ್ ಪ್ರೇಮಿ ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಗುರುವಾರ ನಡೆದಿದೆ. ನಿರ್ಮಲಾ( 23 ) ಭೀಕರವಾಗಿ ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ. ಬಿಎಸ್ಸಿ ನರ್ಸಿಂಗ್ ವಿಧ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು.  ಬೋಜರಾಜ ಎನ್ನುವ ಪಾಗಲ್ ಪ್ರೇಮಿ ಇಂತಹ ದುಷ್ಕೃತ್ಯ ನಡೆಸಿದ್ದಾನೆ.  ಈ ಮೊದಲು ನಿರ್ಮಲಾಳನ್ನು ತನಗೆ ಮದುವೆ ಮಾಡಿಕೊಂಡುವಂತೆ ಯುವತಿಯ ಮನೆಯವರನ್ನು ಕೇಳಿದ್ದು, … Read more

ಜಿಎಂಐಟಿ ಯಲ್ಲಿ ‘ಮಲ್ಲಿಕಾ-22’: ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವ

ಸುದ್ದಿ360, ದಾವಣಗೆರೆ, ಜು.21: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇದೇ ಜು. 22 ಮತ್ತು 23 ರಂದು ಕಾಲೇಜಿನ ವಾರ್ಷಿಕ ಸಮಾರಂಭ ‘ಮಲ್ಲಿಕಾ-22’ ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವವನ್ನು ಬಹಳ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜು. 22ರಂದು ಬೆಳಿಗ್ಗೆ 9:00 ರಿಂದ  ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿದ್ದು, ಸಾಯಂಕಾಲ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಶ್ರೀಶೈಲ ಎಜುಕೇಶನಲ್ ಟ್ರಸ್ಟ್ … Read more

25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ

ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ … Read more

ಆರತಕ್ಷತೆ ವೇಳೆ ವರನ ಸಾವು

ಸುದ್ದಿ360, ವಿಜಯನಗರ (ಹೊಸಪೇಟೆ) ಜು.21: ಹಸೆಮಣೆ ಏರಬೇಕಾದ ಮದುಮಗ ಮದುವೆ ಆರತಕ್ಷತೆ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ಬುಧವಾರ ಸಂಜೆ  ನಡೆದಿದೆ. ಗ್ರಾಮದ ಹೊನ್ನೂರ ಸ್ವಾಮಿ (26) ಮೃತಪಟ್ಟ ವರನಾಗಿದ್ದಾನೆ. ಮದುವೆ ಆರತಕ್ಷತೆ ವೇಳೆ ಹೊನ್ನೂರಸ್ವಾಮಿ ಅವರಿಗೆ ಎದೆ ನೋವು ಕಾಣಿಸಿ ಕೊಂಡಿದೆ. ಇದರಿಂದ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ದಾರಿ … Read more

‘ಸಿಎಂ ಆಗುವುದು ಡಿಕೆಶಿಯವರ ಬಹಳ ದಿನದ ಕನಸು – ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ’

ಸುದ್ದಿ360,ಮೈಸೂರು, ಜುಲೈ 20: ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು  ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಲಿ’ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ … Read more

ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more

ಜಿಎಂಐಟಿ ಯಲ್ಲಿ ಯಶಸ್ವೀ ‘ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ’

ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಕಾರ್ಯಕ್ರಮ ಸುದ್ದಿ360,ದಾವಣಗೆರೆ, ಜುಲೈ 20: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು.16ರಂದು ನಡೆದ ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ ಬಹಳ ಅದ್ದೂರಿಯಿಂದ ಆಚರಿಸಲ್ಪಟ್ಟಿತು. ಈ ಕಾರ್ಯಕ್ರಮವನ್ನು  ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 783 ಆಫರ್ಸ್ ಸ್ವೀಕರಿಸಿದ್ದು, ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಜಿಎಂಐಟಿ ಸಂಸ್ಥೆಯು ಜಿಟಿಟಿ ಎಫ್ ಸಂಸ್ಥೆಯೊಡನೆ … Read more

error: Content is protected !!