ಪ್ರತಿಭಾಕಾರಂಜಿ ವಿಜೇತ ಮಕ್ಕಳಿಗೆ ಅಭಿನಂದನೆ

ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಜೇತ ಮಕ್ಕಳಿಗೆ ಶಾಲಾವತಿಯಿಂದ ಅಭಿನಂದಿಸಲಾಯಿತು. ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ  ಹಳೇಪೇಟೆ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಏಳನೆಯ ತರಗತಿಯ ಚಂದನ್ ಸಿ.ಆರ್.(ಇಂಗ್ಲಿಷ್ ಕಂಠಪಾಠ ದಲ್ಲಿ ಪ್ರಥಮ ಸ್ಥಾನ) ಏಳನೆಯ ತರಗತಿಯ ವಿದ್ಯಾರ್ಥಿ ಶಿವಾಜಿ … Read more

ಖೋ-ಖೋ, ಕಬ್ಬಡ್ಡಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಅತ್ತಿಗೆರೆ ಕಾಲೇಜು ವಿದ್ಯಾರ್ಥಿಗಳು

sttigere-state-level-kho-kho-kabbaddi

ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಲೀಲಾವತಿ ಎ.ಎಂ. ಖೋ-ಖೋ ಟೀಂಗೆ ಹಾಗೂ ರಮ್ಯಾ ಹೆಚ್‍.ಟಿ. ಕಬ್ಬಡ್ಡಿ ಟೀಂಗೆ ಆಯ್ಕೆ ಯಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕಾಲೇಜು ಆಡಳಿತ ಮಂಡಳಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ  ಈ ಇಬ್ಬರು ವಿದ್ಯಾರ್ಥಿನಿಯರನ್ನು  ಪ್ರಶಂಸಿಸಿದೆ.   ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ … Read more

ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ‌ ದಾವಣಗೆರೆ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ವಾಲ್ಮೀಕಿ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅ.8 ರಂದು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಲ್ಲಾ ಘಟಕದ ಅಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಅವರು, ಪ್ರತಿಭಾ ಪುರಸ್ಕಾರ ಸಮಾರಂಭವು ನಗರದ ನಿಜಲಿಂಗಪ್ಪ‌ … Read more

ಲೋಕಸಭೆ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ‍್ವಾಸದಲ್ಲಿ ವಿನಯ್‍ಕುಮಾರ್ ಜಿಬಿ – ಸಮಸ್ಯೆ ಅರಿಯಲು ಜನ ಸಂಪರ್ಕ ಕಾರ್ಯ

vinaykumar-confident-of-getting-lok-sabha-congress-ticket-davangere

ಅ.2: ವೀಲ್ ಚೇರ್, ವಾಕರ್ ಮತ್ತು ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ಸುದ್ದಿ360 ದಾವಣಗೆರೆ, ಸೆ.29: (Davanagere) ಸಾಮಾಜಿಕ ಕಳಕಳಿಯ ಜೊತೆಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಕನಸು ಹೊತ್ತಿರುವ ನಾನು ಕಾಂಗ್ರೆಸ್‍ ಪಕ್ಷದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಅಂತೆಯೇ ಕಾಂಗ್ರೆಸ್‍ ಹೈಕಮಾಂಡ್‍ ಸೂಚಿಸಿರುವಂತೆ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಾ ಜನರ ಸಮಸ್ಯೆಗಳನ್ನು ತಿಳಿಯುತ್ತಿದ್ದೇನೆ ಎಂದು ಇನ್ಸ್ಟೈಟ್ಸ್ ಐಎಎಸ್ (insights ias) ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ (Vinay Kumar G.B) ತಿಳಿಸಿದರು. … Read more

ಕಾವೇರಿ ಹೋರಾಟಕ್ಕೆ ಬಿಜೆಪಿ ನಿರಂತರ ಬೆಂಬಲ – ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ದಿ ಬಂದಿದೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಹುಬ್ಬಳ್ಳಿ ಸೆ.28: ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ. ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ದಿ ಬಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮಿಳುನಾಡಿಗೆ ಈಗ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ಸ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ … Read more

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ. . . ಹೇಗಿದೆ ರಾಜಬೀದಿ ಉತ್ಸವ. . .

ಸುದ್ದಿ360 ಶಿವಮೊಗ್ಗ, ಸೆ. 28: ನಗರದ ಕೋಟೆ ಭೀಮೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ, ಹಿಂದೂ ಮಹಾಮಂಡಲದವತಿಯಿಂದ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ವಿದ್ಯುಕ್ತ ಚಾಲನೆ ದೊರೆತಿದೆ. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಯ ನಂತರ  ರಾಜಬೀದಿ ಉತ್ಸವ ಪ್ರಾರಂಭಗೊಂಡಿದೆ. ಶೃಂಗಾರಗೊಂಡ ರಸ್ತೆಗಳಲ್ಲಿ ಕಲಾತಂಡಗಳು ಡೊಳ್ಳು, ತಮಟೆ, ವೀರಗಾಸೆ, ಮಹಿಳಾ ಡೊಳ್ಳು ತಂಡ, ನಾದಸ್ವರ, ಗೊಂಬೆ ವೇಷದಾರಿಗಳು ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಸಾಗಿರುವ  ಮೆರವಣಿಗೆಯಲ್ಲಿ ಸಾವಿರಾರು ಭಕ್ತಸಮೂಹ ಹೆಜ್ಜೆ ಹಾಕಿದೆ. ವಿವಿಧ … Read more

ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಸೆ.27: ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ದಾವಣಗೆರೆಯಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆನಗೋಡು ಸಮೀಪ ಹುಳುಪಿನಕಟ್ಟೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕರ ಎರಡು ಹುದ್ದೆಗೆ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.ಅಭ್ಯರ್ಥಿಗಳು ಅರ್ಜಿಯನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು, ಇಲ್ಲಿ ಪಡೆದು ದೃಢೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9742313992, … Read more

ನಾನು ಯಾರ ಹಿಡಿತದಲ್ಲಿಯೂ ಇಲ್ಲ- ನಾನು ಸಕ್ರಿಯ ರಾಜಕಾರಣಿ, ರೆಡಿಮೇಡ್‍ ಫುಡ್‍ ಅಲ್ಲ ಎಂದು ಹೇಳಿದ ರೇಣುಕಾಚಾರ್ಯರ ಮಾತಿನ ಮರ್ಮವೇನು?

ಸುದ್ದಿ360, ಸೆ.27 ದಾವಣಗೆರೆ: ನಾನು ಬಿಜೆಪಿ ಕಟ್ಟಾಳು. ನಿನ್ನೆ ಮೊನ್ನೆ ಬಂದು ನನ್ನ ವಿರುದ್ಧ ಮಾತಾಡುವವರಿಗೆ ನಾನು ಮಹತ್ವಕೊಡುವ ಅಗತ್ಯವಿಲ್ಲ.  ರೈತಪರ ಹೋರಾಟ, ಕನ್ನಡಪರ ಹೋರಾಟ ಸೇರಿದಂತೆ ಅನೇಕ ಪ್ರತಿಭಟನೆ, ಚಳುವಳಿಯಲ್ಲಿ ಪಾಲ್ಗೊಂಡು ನೂರಾರು ಕೇಸುಗಳನ್ನು ಹಾಕಿಸಿಕೊಂಡಿರುವ ನಾನು ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆಯೇ (active politician) ಹೊರತು ರೆಡಿಮೇಡ್ ಫುಡ್ (readymade food) ಅಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ (m.p. Renukacharya) ಮಾರ್ಮಿಕವಾಗಿ ನುಡಿದಿದ್ದಾರೆ. ಅವರು ಇಂದು ದಾವಣಗೆರೆಯ ತೊಗಟವೀರ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ 32ನೇ … Read more

ಕಲಾವಿದರಿಗೆ ಅಗತ್ಯ ನೆರವು ನೀಡಲು ಎಸ್‌ಎಸ್ ಕೇರ್ ಟ್ರಸ್ಟ್ ಸಿದ್ಧ – ಡಾ. ಪ್ರಭಾ ಮಲ್ಲಿಕಾರ್ಜುನ್

chitrakala-pradarshana-davangere

ಸುದ್ದಿ360, ದಾವಣಗೆರೆ, ಸೆ.27: ಒಂದು ಕಲಾಕೃತಿ ಮೂಡಿಬರಲು ಕಲಾವಿದನ ನೈಪುಣ್ಯತೆ ಮತ್ತು ಕಠಿಣ ಪರಿಶ್ರಮದ ಅರಿವು ನಮಗಿದೆ. ಕಲಾವಿದರ ಶ್ರೇಯಸ್ಸಿಗಾಗಿ ಎಸ್‌ಎಸ್ ಕೇರ್ ಟ್ರಸ್ಟ್ ಮೂಲಕ ಅಗತ್ಯವಿರುವ ನೆರವು ನೀಡಲು ಸಿದ್ಧರಿರುವುದಾಗಿ ಟ್ರಸ್ಟ್ ಆಜೀವ ವಿಶ್ವಸ್ಥರಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು. ನಗರದ ಎಂಸಿಸಿ ಎ ಬ್ಲಾಕ್ 6ನೇ ಮುಖ್ಯರಸ್ತೆಯಲ್ಲಿರುವ ತೊಗಟವೀರ ಸಮುದಾಯ ಭವನದಲ್ಲಿ ಇಂದು ಬುಧವಾರ ದಾವಣಗೆರೆ ಚಿತ್ರಕಲಾ ಪರಿಷತ್ ವತಿಯಿಂದ ಹಿಂದೂ ಯುವ ಶಕ್ತಿ ಸಂಘಟನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ `ವರ್ಣ ಗಣೇಶ’ ಚಿತ್ರಕಲಾ ಪ್ರದರ್ಶನದ … Read more

ದಾವಣಗೆರೆ: ವಿನಾಯಕ ಮೂರ್ತಿ ಶೋಭಾಯಾತ್ರೆ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಸಚಿವರಿಂದ ಅದ್ದೂರಿ ಚಾಲನೆ

ಸುದ್ದಿ360, ದಾವಣಗೆರೆ ಸೆ.26: ಇಲ್ಲಿನ ವಿನೋಬನಗರದ 2ನೇ ಮುಖ್ಯ ರಸ್ತೆಯ ಶ್ರೀವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿ  ಪ್ರತಿಷ್ಠಾಪಿಸಿದ್ದ ಶ್ರೀ ವಿನಾಯಕ ಮೂರ್ತಿಯ ವಿಸರ್ಜನೆಗಾಗಿ ಹೊರಟ ಶೋಭಾಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅದ್ದೂರಿ ಚಾಲನೆ ನೀಡಿದರು. ಇಂದು ಮಂಗಳವಾರ ಹಮ್ಮಿಕೊಂಡಿದ್ದ ವಿನಾಯಕ ಮೂರ್ತಿಯ ವಿಸರ್ಜನಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಟ್ರ್ಯಾಕ್ಟರ್‍ ಚಲಾಯಿಸುವ ಮೂಲಕ ನೆರೆದ ಭಕ್ತಸಮೂಹದ ಮನಸೂರೆಗೊಂಡರು. ವಿನೋಬನಗರ 2ನೇ ಮುಖ್ಯರಸ್ತೆಯಲ್ಲಿ ಗಣೇಶ ಮೂರ್ತಿ … Read more

error: Content is protected !!