ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಉದ್ಘಾಟನೆ

ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆ, ಮತ್ತು 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಸಂಸ್ಕಾರ ಹಾಗೂ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜು.1ರಂದು ಬೆಳಗ್ಗೆ 10 … Read more

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು … Read more

ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ

ಸುದ್ದಿ360 ದಾವಣಗೆರೆ, ಜೂ.30:  ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ) ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ. ಇದಕ್ಕೆ ಪ್ರತೀಕಾರವಾಗಿ ಆತನನ್ನು … Read more

ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ. ಎಸ್.ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.  ಫಿಟ್ ಮೆಂಟ್ ಸಮಿತಿಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ ಸಿಎಂ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು  ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇದು  ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ  ದೊಡ್ಡ ಅಂತರರಾಷ್ಟ್ರೀಯ ಷಡ್ಯಂತ್ರವಿದೆ. ಅದರ ಸಂಪೂರ್ಣ ತನಿಖೆಯಾಗಬೇಕು.  ಅಪರಾಧಿಗಳನ್ನು ಪತ್ತೆ ಹಚ್ಚಿ ಗಲ್ಲಿಗೇರಿಸಬೇಕು.  ರಾಜಸ್ತಾನ ಸರ್ಕಾರ ಸಂಪೂರ್ಣ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕು … Read more

ಮುಳುಗಿತೇ ಮಂಗಳೂರಿನ ಸ್ಮಾರ್ಟ್ !?

ಸುದ್ದಿ360 ಮಂಗಳೂರು, ಜೂ.30:  ಸ್ಮಾರ್ಟ್ ಸಿಟಿಯಾಗಲು ದಾಪುಗಾಲು ಇಟ್ಟಿರುವ ಮಂಗಳೂರು ನಗರ ಈ ಹಿಂದಿನ ವರ್ಷಗಳಂತೆಯೇ ಜಲಾವೃತಗೊಂಡಿದೆ. ಮಳೆಗಾಲ ಪ್ರಾರಂಭವಾದರೆ ಮಂಗಳೂರು ಜಲಾವೃತಗೊಳ್ಳುವುದು ಕಳೆದ ಹಲವು ವರ್ಷಗಳಿಂದ ಸಾಮಾನ್ಯವಾಗಿಬಿಟ್ಟಿದೆ. ಬುದ್ದಿವಂತರ ಜಿಲ್ಲೆ ಮಂಗೂಳೂರಿನ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಚರಂಡಿ ವ್ಯವಸ್ಥೆಯೇ ಇಲ್ಲದ ಹೆದ್ದಾರಿಗಳು, ಅವೈಜ್ಞಾನಿಕ ಕಾಮಗಾರಿಗಳು, ಹೊಂಡದಿಂದ ಕೂಡಿದ ರಸ್ತೆಗಳು, ಮಳೆಗಾಲಕ್ಕೂ ಮುನ್ನ ನೀರು ಸರಾಗವಾಗಿ ಹರಿಯುವಂತೆ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳದ ಪಾಲಿಕೆ ಅಧಿಕಾರಿಗಳು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡುವ ಸಾರ್ವಜನಿಕರು … Read more

ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

ಸುದ್ದಿ360 ಬೆಳಗಾವಿ, ಜೂ.30:  ನಗರದ ಮದ್ಯಭಾಗದಲ್ಲಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಾಲ್ಲೂಕಿನ ಮಜಗಾವಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ನಿವಾಸಿ, 27ರ ವಯೋಮಾನದ ಯಲ್ಲೇಶ ಶಿವಾಜಿ ಕೊಲ್ಕರ್ ಕೊಲ್ಲಲ್ಪಟ್ಟ ವ್ಯಕ್ತಿಯಾಗಿದ್ದು, ಅನೈತಿಕ ಸಂಬಂಧದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಉದ್ಯಮಭಾಗ ಠಾಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಬಿಸಿಯೂಟ ತಯಾರಕರಿಂದ ಪ್ರತಿಭಟನೆ

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.29:  ಬಿಸಿಯೂಟ ತಯಾರಕರಿಗೆ ಇಡುಗಂಟು ಹಣ, ನಿವೃತ್ತಿ ವೇತನ  ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಗರೆದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಪ್ರತಿಭಟನೆ ನಡೆಸಿತು. ಇಲ್ಲಿನ  ತಾಲ್ಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ ಬಿಸಿಯೂಟ ತಯಾರಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ರವರ ಮೂಲಕ ಮುಖ್ಯ ಮಂತ್ರಿಗಳಿಗೆ ಮತ್ತು ಶಿಕ್ಷಣ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯಾದ್ಯಂತ 60 ವರ್ಷ ವಯಸ್ಸಾಗಿ ಬಿಡುಗಡೆಗೊಳಿಸುತ್ತಿರುವ ಬಿಸಿಯೂಟ … Read more

ಟ್ಯಾಂಕರ್ ಗೆ ಬೆಂಕಿ ಇಬ್ಬರು ಸಜೀವ ದಹನ –ನಾಲ್ವರಿಗೆ ಗಾಯ

ಸುದ್ದಿ360 ಧಾರವಾಡ,ಜೂ.29: ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹತ್ತಿ ಉರಿದ ಘಟನೆ ಬೈಪಾಸ್ ನ ಯರಿಕೊಪ್ಪ ಬಳಿ ಬುಧವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಟ್ಯಾಂಕರ್ ಚಾಲಕ ಸೇರಿ ಇಬ್ಬರು ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಎದುರಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ ಉರುಳಿ ಬಿದ್ದಿದೆ. ಆಗ ಟ್ಯಾಂಕರ್‌ನಲ್ಲಿದ್ದ ಡೀಸೆಲ್ ಸೋರಿಕೆಯಾಗಿ ಹೊತ್ತಿದ ಬೆಂಕಿ ಇಡೀ ಟ್ಯಾಂಕರ್ ಗೆ ಆವರಿಸಿದೆ. ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇನ್ನೂ … Read more

ಸಾಮೂಹಿಕ ಸನ್ನಿಯಂತೆ ಕಾಡುತ್ತಿರುವ ಮಾದಕ ವಸ್ತು ಸೇವನೆ

ಯುವಪೀಳಿಗೆ ಜಾಗರೂಕರಾಗಲು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಕರೆ ಸುದ್ದಿ360 ದಾವಣಗೆರೆ. ಜೂ.29: ಸಾಮಾಜಿಕ ಜಾಲತಾಣಗಳು ಇಂದಿನ ಯುವಪೀಳಿಗೆಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿದ್ದು ಯುವಪೀಳಿಗೆಯನ್ನು ಸಮಸ್ಯೆಯತ್ತ ದೂಡುತ್ತಿವೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಬೇಕಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಹೇಳಿದರು. ನಗರದ ಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ … Read more

error: Content is protected !!