ಜಿಲ್ಲಾ ಸರ್ವೇಕ್ಷಣಾಕಾರಿ ರಾಘವನ್‌ಗೆ ಎಚ್‌ಡಿಡಿ ಪ್ರಶಸ್ತಿ

ಸುದ್ದಿ360 ದಾವಣಗೆರೆ, ಜೂ.23: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಡಿನ ಗಣ್ಯರಿಗೆ ನೀಡುವ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿಗೆ ಜಿಲ್ಲಾ ಸರ್ವೇಕ್ಷಣಾಕಾರಿ ಡಿ.ಜಿ. ರಾಘವನ್ ಭಾಜನರಾಗಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಎಚ್.ಡಿ. ದೇವೇಗೌಡ ಪ್ರತಿಷ್ಠಾನದ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ  ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಘವನ್ ಅವರೊಂದಿಗೆ 2020ನೇ ಸಾಲಿನ ಪ್ರಶಸ್ತಿಗೆ ಆಂಧ್ರಪ್ರದೇಶ ಮೂಲದ ಮಂದಕೃಷ್ಣ ಮಾದಿಗ, 2021ನೇ ಸಾಲಿನ … Read more

ಸಿಲಿಂಡರ್ ಸ್ಪೋಟ – ಅಜ್ಜಮೊಮ್ಮಗಳಿಗೆ ಗಂಭೀರ ಗಾಯ

ಸುದ್ದಿ360 ಚಿಕ್ಕಮಗಳೂರು, ಜೂ.23: ಜಿಲ್ಲೆಯ ಬೀರೂರು ಸಮೀಪದ ಅಜ್ಜಂಪುರ ರಸ್ತೆಯಲ್ಲಿರುವ ಯರೇಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಿಸಿದ್ದು ಮನೆಯಲ್ಲಿದ್ದ ಮರುಳ ಸಿದ್ದಪ್ಪ ಮತ್ತು ಅವರ ಮೊಮ್ಮಗಳು ಚೈತನ್ಯ ಎಂಬುವರಿಗೆ ಗಾಯಗಳಾಗಿವೆ. ಅಲ್ಲದೆ ಸ್ಪೋಟದ ತೀವ್ರತೆಗೆ ಮನೆಯ ಛಾವಣಿಯ ಹಂಚುಗಳು ಹಾರಿ ಹೋಗಿ ಮನೆಯೂ ಹಾನಿಗೊಳಗಾಗಿದೆ. ಮನೆಯಲ್ಲಿ ಮಗಳು ಮತ್ತು ಅಳಿಯನೊಂದಿಗೆ ವಾಸವಿದ್ದ ಮರುಳ ಸಿದ್ದಪ್ಪ ಮಧ್ಯಾಹ್ನ ಅಡುಗೆ ಮಾಡಲು ಹೋದಾಗ ಅನಿಲ ಸೋರಿಕೆಯಾಗಿ ಸಿಲಿಂಡರ್ಗೆ ಬೆಂಕಿ ಹೊತ್ತಿಕೊಂಡಿದೆ. ಮನೆಯಿಂದ ಹೊರಗೆ ಓಡಿ ಬರುವಷ್ಟರಲ್ಲಿಯೇ ಸಿಲಿಂಡರ್ ಸ್ಫೋಟಿಸಿದ ಪರಿಣಾಮ … Read more

ಇ-ಬೈಕ್ – ಶೋರೂಮ್  ಉದ್ಘಾಟನೆ (ಜೂ.24) – ವಾಹನ ಬುಕಿಂಗ್‍ ಆರಂಭ

ಸೇಲ್ಸ್‌, ಸರ್ವಿಸ್, ಸ್ಪೇರ್ಸ್‌ ಮತ್ತು ಸೇಫ್ಟಿ (4 ಎಸ್‍) ಮಳಿಗೆ ಸುದ್ದಿ360 ದಾವಣಗೆರೆ, ಜೂ.23: ಆ್ಯಂಪೈರ್ ಎಲೆಕ್ಟ್ರಿಕ್‍ ದ್ವಿಚಕ್ರ ವಾಹನಗಳ ಅನುಶರಣ್ ಆ್ಯಂಪೈರ್ ಶೋರೂಮ್ ಜೂ.24ರಂದು ನಗರದ ಪಿಬಿ ರಸ್ತೆಯ ಪೂಜಾ ಹೋಟೆಲ್ ಸಮೀಪ ಉದ್ಘಾಟನೆಗೊಳ್ಳಲಿದೆ ಎಂದು ಬ್ರಾಂಚ್ ಮುಖ್ಯಸ್ಥ ಅಣ್ಣಾರಾವ್ ಕುಲಕರ್ಣಿ ಮಾಹಿತಿ ನೀಡಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.24ರಂದು ಸಂಜೆ ೫ ಗಂಟೆಗೆ ಆ್ಯಂಪೈರ್ ಸಂಸ್ಥೆಯ ಸೇಲ್ಸ್ ಹೆಡ್ ಎಸ್. ಪ್ರಣೇಶ್ ನೂತನ ಶೋರೂಮ್ ಉದ್ಘಾಟಿಸುವರು. ರಾಜ್ಯದ ಸೇಲ್ಸ್ ಹೆಡ್ ಎ.ಎನ್. ಪ್ರೀತಮ್ … Read more

ದಾವಣಗೆರೆಯಲ್ಲಿ ಜೂ.24ರಿಂದ 3 ದಿನಗಳ ನೀಲಕಂಠ ಆಭರಣ ಮೇಳ

ಸುದ್ದಿ360 ದಾವಣಗೆರೆ, ಜೂ.23: ನಗರದ ಶಾಮನೂರು ರಸ್ತೆಯ ಹೋಟೆಲ್ ಸದರ್ನ್ ಸ್ಟಾರ್‌ನಲ್ಲಿ ಜೂ.24ರಿಂದ ಮೂರು ದಿನಗಳ ಕಾಲ ನೀಲಕಂಠ ಜ್ಯುವೆಲ್ಲರ್ಸ್‌ ಸುವರ್ಣ ಸಮೃದ್ಧಿ  ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಲಕಂಠ ಜ್ಯುವೆಲ್ಲರ್ಸ್‌ ಮ್ಯಾನೇಜರ್ ರಮೇಶ್ ಬಾಬು ಈ ಕುರಿತು ಮಾಹಿತಿ ನೀಡಿದರು. ಜೂ.24ರಂದು ಬೆಳಗ್ಗೆ 11 ಗಂಟೆಗೆ ಉದ್ಯಮಿ ಎಸ್.ಎಸ್. ಗಣೇಶ್ ಹಾಗೂ ರೇಖಾ ಗಣೇಶ್ ಮೇಳಕ್ಕೆ ಚಾಲನೆ ನೀಡುವರು. ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ನೀಲಕಂಠ ಜ್ಯುವೆಲ್ಲರ್ಸ್‌ ಸಿಇಒ … Read more

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ‘ವಿಶೇಷ’ತೆ ಮುಂದುವರಿಸಿದ ಬಿಜೆಪಿ

ಬಿಜೆಪಿ-ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರಥಮ ಪ್ರಜೆ ಆಗುವುದು ಖಚಿತ? ಸುದ್ದಿ360 ವಿಶೇಷ ವರದಿ:  ಒಡಿಶಾ ಮೂಲದ ರಾಜಕಾರಣಿ, ಸಮಾಜ ಸೇವಕಿ ಹಾಗೂ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಎನ್‌ಡಿಎಗೆ ಇರುವ ಸಂಖ್ಯಾ ಬಲ ಮತ್ತು ಬಿಜು ಜನತಾದಳ, ವೈಎಸ್‌ಆರ್ ಕಾಂಗ್ರೆಸ್ ಸೇರಿ ಹಲವು ಪ್ರಾದೇಶಿಕ ಪಕ್ಷಗಳ ಬೆಂಬಲ  ಇರುವ ಕಾರಣ ಮುರ್ಮು ರಾಷ್ಟ್ರಪತಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅವಕಾಶ ದೊರೆತಾಗಲೆಲ್ಲಾ … Read more

ಐಕಿಯಾದಿಂದ ಸ್ಥಳೀಯರಿಗೆ ಶೇ 75 ರಷ್ಟು  ಉದ್ಯೋಗಾವಕಾಶ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಐಕಿಯಾ ಪೀಠೋಪಕರಣ ಮಳಿಗೆಗೆ ಮುಖ್ಯಮಂತ್ರಿ ಚಾಲನೆ ಸುದ್ದಿ360 ಬೆಂಗಳೂರು, ಜೂನ್ 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ಐಕಿಯಾ … Read more

ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ರಾಜ್ಯ ಅಧ್ಯಕ್ಷರಾಗಿ ಕಾಂ. ಬಿ. ಅಮ್ಜದ್ ಆಯ್ಕೆ

ಸುದ್ದಿ360 ದಾವಣಗೆರೆ ಜೂ.21: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಅಧ್ಯಕ್ಷರಾಗಿ ಕಾಮ್ರೇಡ್ ಬಿ.ಅಮ್ಜದ್ ಆಯ್ಕೆಯಾಗಿದ್ದಾರೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಂ.ಆವರಗೆರೆ ಚಂದ್ರು ತಿಳಿಸಿದ್ದಾರೆ. ಕಳೆದ ಭಾನುವಾರ ಬೆಂಗಳೂರು ಶೇಷಾದ್ರಿಪುರಂ ನಲ್ಲಿರುವ ಎಐಟಿಯುಸಿ ರಾಜ್ಯ ಸಮಿತಿ ಕಚೇರಿಯಲ್ಲಿ ನಡೆದ ಎಐಟಿಯುಸಿ ಸಂಯೋಜಿತ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನ ರಾಜ್ಯ ಸಮಿತಿ ಸಭೆಯಲ್ಲಿ ಕಾಮ್ರೇಡ್ ಬಿ.ಅಮ್ಜದ್ ರವರನ್ನು ರಾಜ್ಯಾಧ್ಯಕ್ಷರನ್ನಾಗಿ ಎಐಟಿಯುಸಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಂ.ಡಿ.ಎ.ವಿಜಯಭಾಸ್ಕರ್ ಸೂಚಿಸಿದರು ಸಭೆ ಒಮ್ಮತದಿಂದ ಇವರ … Read more

ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಪ್ರತಿಭಟನೆ

ಸುದ್ದಿ360 ದಾವಣಗೆರೆ ಜೂ.22: ಬ್ಯಾಂಕ್ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಜೂ.೨೨ ಬೆಳಿಗ್ಗೆ ೧೧ ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮತ್ತು ಭಿತ್ತಿಪತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇಂದು ಜಯದೇವ ವೃತ್ತದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಬ್ಯಾಂಕ್ ನಿವೃತ್ತರ ಒಕ್ಕೂಟದ ನಾಯಕ ಕೆ.ವಿಶ್ವನಾಥ ನಾಯ್ಕ, ಅಖಿಲ ಭಾರತ ಕಾರ್ಪೊರೇಷನ್ ಬ್ಯಾಂಕ್ ನಿವೃತ್ತರ ಸಂಘದ ಅಧ್ಯಕ್ಷ ಕೆ.ರಾಮಪ್ರಿಯಾ, ಯು.ಅಬ್ದುಲ್ ಜಲೀಲ್, ಸಂಧ್ಯಾರಾವ್, ರಾಘವೇಂದ್ರ ನಾಯರಿ, ಎಸ್.ಟಿ.ಶಾಂತಗಂಗಾಧರ್, ಜಿ.ಬಿ.ಶಿವಕುಮಾರ್ … Read more

ಎಸ್.ಎಸ್.ಎಲ್.ಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಸುದ್ದಿ360 ದಾವಣಗೆರೆ ಜೂ.21: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.7,000 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.15,000 ಪ್ರೋತ್ಸಾಹಧನವನ್ನು ಡಿ.ಬಿ.ಟಿ ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ಆ ಪ್ರಕಾರ ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಆದ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರೋತ್ಸಾಹ ಧನ ಜಮೆಯಾಗಿರುತ್ತದೆ. ಬ್ಯಾಂಕ್ ಖಾತೆಗೆ ಆಧಾರ್ … Read more

ನಿತ್ಯ ಮಾಡಿದರೆ ಯೋಗ, ಲಭಿಸುವುದು ಆರೋಗ್ಯ ಭಾಗ್ಯ

ಸುದ್ದಿ360 ದಾವಣಗೆರೆ ಜೂ.21:  ಯೋಗವು ಕೇವಲ ಯೋಗ ದಿನಾಚರಣೆಗೆ ಸೀಮಿತವಾಗದೇ ದಿನವೂ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ‘ನಿತ್ಯ ಮಾಡಿದರೆ ಯೋಗ ಲಭಿಸುವುದು ಆರೋಗ್ಯ ಭಾಗ್ಯ ‘ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಂತಾರಾಷ್ಟ್ರೀಯ ಯೋಗ ಪಟು, ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿಗಳ ಪೊಲೀಸ್ ಪದಕ ವಿಜೇತರಾದ ರಾಮಚಂದ್ರ ಬಿ ಜಾದವ್ ರವರು ತಿಳಿಸಿದರು. ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ವಸತಿ ಶಾಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಯೋಗಾಸನಗಳು, ಪ್ರಾಣಾಯಾಮ ಮತ್ತು ಷಟ್ ಕ್ರಿಯೆಗಳ … Read more

error: Content is protected !!