ಜಿಲ್ಲಾ ಉಸ್ತುವಾರಿ ಸಚಿವರಿಗೆ ದಾವಣಗೆರೆ ಪಿಕ್ನಿಕ್‍ ಸ್ಪಾಟ್‍ !

ಸುದ್ದಿ 360 ದಾವಣಗೆರೆ, ಜೂ.15: ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ದಾವಣಗೆರೆ ಜಿಲ್ಲೆಗೆ ಪಿಕ್ನಿಕ್‍ಗೆ ಬಂದು ಹೋಗುವವರಂತೆ ಬಂದು ಹೋಗುತ್ತಾರೆ. ದಾವಣಗೆರೆ ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರಿದ್ದಾರೆ ಅವರಿಗೆ ಮಂತ್ರಿಯಾಗಲು ಅರ್ಹತೆ, ಯೋಗ್ಯತೆ ಇಲ್ಲವೇ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಪ್ರಶ್ನಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಿರುವ ಕಾಮಗಾರಿ ಉದ್ಘಾಟನೆ ಮಾಡಲು ಜಿಲ್ಲೆಗೆ ಬರುತ್ತಿದ್ದಾರೆಯೇ ಹೊರತು ಯಾವುದೇ ನೂತನ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಬರುತ್ತಿಲ್ಲ … Read more

ನವಸಂಕಲ್ಪ ಚಿಂತನಾ ಸಭೆಯಿಂದ ಪಕ್ಷದ ಬಲವರ್ಧನೆ: ಎಂ.ಸಿ.ವೇಣುಗೋಪಾಲ್‍

ಸುದ್ದಿ 360 ದಾವಣಗೆರೆ, ಜೂ.15: ಕೆಪಿಸಿಸಿಯಿಂದ ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನವಸಂಕಲ್ಪ ಚಿಂತನಾ ಶಿಬಿರವನ್ನು ಜುಲೈ ಮೊದಲ ವಾರದಲ್ಲಿ ನಡೆಸಲಾಗುವುದು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ನಡೆದ ಚಿಂತನಾ ಸಭೆ ಪಕ್ಷದ ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರ ಸಲಹೆ, ಅಭಿಪ್ರಾಯಗಳೊಂದಿಗೆ ಯಶಸ್ವಿಯಾಗಿ ನಡೆಯಿತು.  ಚಿಂತನಾ ಸಭೆಯಲ್ಲಿ ಎಲ್ಲರಿಗೂ ಮುಕ್ತವಾಗಿ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿತ್ತು. … Read more

ಗಾಜಿನ ಮನೆಗೆ ದಾರಿ ಕಾಣದೆ ಪರದಾಟ

ಸುದ್ದಿ360 ದಾವಣಗೆರೆ: ದೇವನಗರಿ ದಾವಣಗೆರೆಗೆ ಬರುವ ಪ್ರವಾಸಿಗರು ಗ್ಲಾಸ್ ಹೌಸ್ ನೋಡದಿದ್ದರೆ ಪ್ರವಾಸ ಪೂರ್ಣವಾಗುವುದಿಲ್ಲ. ಅಂತೆಯೇ ಇಲ್ಲಿ ಯಾರಿಗಾದರೂ ವಾಯುವಿಹಾರ ಮತ್ತು ಮನಸ್ಸಿಗೆ ಮುದ ನೀಡುವ ಜಾಗ ಹೇಳಿ ಎಂದರೆ ಥಟ್ ಅಂತ ಬರುವ ಮೊದಲ ಉತ್ತರ ಗ್ಲಾಸ್ ಹೌಸ್. ಹೀಗಿದ್ದರೂ ಗಾಜಿನ ಮನೆ ಸಂಪರ್ಕಿಸುವ ರಸ್ತೆ ಕಾಮಗಾರಿಯಿಂದಾಗಿ ಪ್ರವಾಸಿಗರಿಂದ ದೂರ ಸರಿದಿದೆ. ಗಾಜಿನ ಮನೆಗೆಂದು ಆಗಮಿಸುವ ಪ್ರವಾಸಿಗರು ನೋಡು ಗಾಜಿನ ಮನೆ ಕಾಣಿಸುತ್ತಿದೆ. ಇನ್ನೇನು ಬಂದೇಬಿಟ್ಟೆವು ಎಂದು ಖುಷಿಯಾಗುತ್ತಿದ್ದಂತೆ ಅಗೆದು ಹಾಕಿರುವ ರಸ್ತೆ ದುತ್ತೆಂದು ಎದುರಾಗುತ್ತದೆ. … Read more

ಬಿದ್ದ ಮರಕ್ಕೆ ಬೈಕ್ ಡಿಕ್ಕಿ- ಬೈಕ್‌ ಸವಾರ  ಸ್ಥಳದಲ್ಲೆ ಸಾವು

ಸುದ್ದಿ360 ಬೆಳ್ತಂಗಡಿ, ಜೂ.15 : ಬೆಳಗ್ಗಿನ ಜಾವ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ಬೆಳಗಿನ ಜಾವ ಸುಮಾರು 5.30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್ ಸವಾರ ಕನ್ಯಾಡಿ ಬಳಿ ಇರುವ ಹೊಟೇಲ್ ಮಾಲಿಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಮುಗುಳಿಚತ್ರ ನಿವಾಸಿ ನೇಮಿರಾಜ್ … Read more

ಪಶ್ಚಿಮ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಬಸವರಾಜ ಹೊರಟ್ಟಿ ದಾಖಲೆ ಜಯ

ಸುದ್ದಿ360 ಬೆಳಗಾವಿವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲವು ಸಾಧಿಸಿದ್ದಾರೆ. ಈ ಮೂಲಕ ಸತತ 8 ನೇ ಬಾರಿ ಹೊರಟ್ಟಿ ಇದೇ ಕ್ಷೇತ್ರದಲ್ಲಿ ತಮ್ಮ ಗೆಲುವಿನ ಓಟ ಮುಂದುವರಿಸಿದ್ದಾರೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ £ಬುಧವಾರ ಬೆಳಗ್ಗೆ 8 ಗಂಟೆಗೆ ಮತಗಳ ಎಣಿಕೆ ಆರಂಭವಾಗಿ, ಮೊದಲು ಅನರ್ಹ ಮತಗಳನ್ನು ಬೇರ್ಪಡಿಸಲಾಯಿತು. ಒಟ್ಟು 9,266 ಮತಗಳನ್ನು ಪಡೆದ ಹೊರಟ್ಟಿ, ಕಾಂಗ್ರೆಸ್ ಬಸವರಾಜ ಗುರಿಕಾರ ವಿರುದ್ಧ 4669 ದಾಖಲೆ ಮತಗಳ ಅಂತರದಲ್ಲಿ ವಿಜಯ … Read more

ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಇಡಿ ಕಚೇರಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಮಾಡಲಾಗಿದೆ.

11ತಿಂಗಳ ಮಗುವಿನೊಂದಿಗೆ ತಾಯಿ ನೇಣಿಗೆ ಶರಣು

ದಾವಣಗೆರೆ: 11 ತಿಂಗಳ ಹಸುಗೂಸಿನ ಜೊತೆ ತಾಯಿಯು ನೇಣಿಗೆ ಶರಣರಾಗಿರುವ ಹೃದಯವಿದ್ರಾವಕ ಘಟನೆ ಜಗಳೂರು ಪಟ್ಟಣದ ಜೆ. ಸಿ. ಆರ್. ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.22 ವರ್ಷದ ನಿಖಿತ ಹಾಗೂ 11 ತಿಂಗಳ ಗಂಡು ಮಗು ಅನ್ವಿಷ್ ಇಹಲೋಕ ತ್ಯಜಿಸಿದ ದುರ್ದೈವಿಗಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ಇಂಜಿನಿಯರ್ ಮನೋಜ್ ಕುಮಾರನೊಂದಿಗೆ ವಿವಾಹ ಆಗಿದ್ದ ನಿಖಿತಾ ಸೋಮವಾರವಷ್ಟೇ ತವರಿಗೆ ಬಂದಿದ್ದರು. ಮನೋಜ್ … Read more

ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ: ಡಾ. ನಾಗರಾಜ್

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ 2022 ದಾವಣಗೆರೆ ಜೂ.14 : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅವರು ಹೇಳಿದರು. ಮಂಗಳವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು … Read more

2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಲು ಎಂ.ಸಿ.ವೇಣುಗೋಪಾಲ್ ಕರೆ

ದಾವಣಗೆರೆ, ಜೂ.14: ದೇಶ ಎತ್ತ ಸಾಗುತ್ತಿದೆ ಎಂದು ಯೋಚನೆ ಮಾಡಬೇಕಾದ ಸ್ಥಿತಿ ಇಂದು ಬಂದೊದಗಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ರಕ್ಷಣೆ, ಎಲ್ಲರೂ ನೆಮ್ಮದಿಯಿಂದ ಬಾಳುವ, ಯುವ ಜನರಿಗೆ ಉದ್ಯೋಗ ಒದಗಿಸುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಕರೆ ನೀಡಿದರು. ನಗರದ ಬಾಪೂಜಿ ಎಂಬಿಎ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ನವಸಂಕಲ್ಪ ಚಿಂತನಾ ಶಿಬಿರದ ಉದ್ಘಾಟಸಿ ಮಾತನಾಡಿ, ಕಾಂಗ್ರೆಸ್‌ಗೆ ಅಧಿಕಾರ ಮುಖ್ಯವಲ್ಲ. ದೇಶದ ಮತ್ತು ಕರ್ನಾಟಕದ ಜನತೆಯ ರಕ್ಷಣೆ ಅತೀ … Read more

error: Content is protected !!