ಬಿದ್ದ ಮರಕ್ಕೆ ಬೈಕ್ ಡಿಕ್ಕಿ- ಬೈಕ್‌ ಸವಾರ  ಸ್ಥಳದಲ್ಲೆ ಸಾವು

ಸುದ್ದಿ360 ಬೆಳ್ತಂಗಡಿ, ಜೂ.15 : ಬೆಳಗ್ಗಿನ ಜಾವ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದ್ದು ಇದನ್ನು ಗಮನಿಸದ ಬೈಕ್ ಸವಾರ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಳಿಯ ಅಡ್ಯಾಲ ಚಡವು ಎಂಬಲ್ಲಿ ಬೆಳಗಿನ ಜಾವ ಸುಮಾರು 5.30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್ ಸವಾರ ಕನ್ಯಾಡಿ ಬಳಿ ಇರುವ ಹೊಟೇಲ್ ಮಾಲಿಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಮುಗುಳಿಚತ್ರ ನಿವಾಸಿ ನೇಮಿರಾಜ್ … Read more

ಪಶ್ಚಿಮ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಬಸವರಾಜ ಹೊರಟ್ಟಿ ದಾಖಲೆ ಜಯ

ಸುದ್ದಿ360 ಬೆಳಗಾವಿವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲವು ಸಾಧಿಸಿದ್ದಾರೆ. ಈ ಮೂಲಕ ಸತತ 8 ನೇ ಬಾರಿ ಹೊರಟ್ಟಿ ಇದೇ ಕ್ಷೇತ್ರದಲ್ಲಿ ತಮ್ಮ ಗೆಲುವಿನ ಓಟ ಮುಂದುವರಿಸಿದ್ದಾರೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ £ಬುಧವಾರ ಬೆಳಗ್ಗೆ 8 ಗಂಟೆಗೆ ಮತಗಳ ಎಣಿಕೆ ಆರಂಭವಾಗಿ, ಮೊದಲು ಅನರ್ಹ ಮತಗಳನ್ನು ಬೇರ್ಪಡಿಸಲಾಯಿತು. ಒಟ್ಟು 9,266 ಮತಗಳನ್ನು ಪಡೆದ ಹೊರಟ್ಟಿ, ಕಾಂಗ್ರೆಸ್ ಬಸವರಾಜ ಗುರಿಕಾರ ವಿರುದ್ಧ 4669 ದಾಖಲೆ ಮತಗಳ ಅಂತರದಲ್ಲಿ ವಿಜಯ … Read more

ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಇಡಿ ಕಚೇರಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಮಾಡಲಾಗಿದೆ.

11ತಿಂಗಳ ಮಗುವಿನೊಂದಿಗೆ ತಾಯಿ ನೇಣಿಗೆ ಶರಣು

ದಾವಣಗೆರೆ: 11 ತಿಂಗಳ ಹಸುಗೂಸಿನ ಜೊತೆ ತಾಯಿಯು ನೇಣಿಗೆ ಶರಣರಾಗಿರುವ ಹೃದಯವಿದ್ರಾವಕ ಘಟನೆ ಜಗಳೂರು ಪಟ್ಟಣದ ಜೆ. ಸಿ. ಆರ್. ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.22 ವರ್ಷದ ನಿಖಿತ ಹಾಗೂ 11 ತಿಂಗಳ ಗಂಡು ಮಗು ಅನ್ವಿಷ್ ಇಹಲೋಕ ತ್ಯಜಿಸಿದ ದುರ್ದೈವಿಗಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ಇಂಜಿನಿಯರ್ ಮನೋಜ್ ಕುಮಾರನೊಂದಿಗೆ ವಿವಾಹ ಆಗಿದ್ದ ನಿಖಿತಾ ಸೋಮವಾರವಷ್ಟೇ ತವರಿಗೆ ಬಂದಿದ್ದರು. ಮನೋಜ್ … Read more

ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ: ಡಾ. ನಾಗರಾಜ್

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ 2022 ದಾವಣಗೆರೆ ಜೂ.14 : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅವರು ಹೇಳಿದರು. ಮಂಗಳವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು … Read more

2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಲು ಎಂ.ಸಿ.ವೇಣುಗೋಪಾಲ್ ಕರೆ

ದಾವಣಗೆರೆ, ಜೂ.14: ದೇಶ ಎತ್ತ ಸಾಗುತ್ತಿದೆ ಎಂದು ಯೋಚನೆ ಮಾಡಬೇಕಾದ ಸ್ಥಿತಿ ಇಂದು ಬಂದೊದಗಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ರಕ್ಷಣೆ, ಎಲ್ಲರೂ ನೆಮ್ಮದಿಯಿಂದ ಬಾಳುವ, ಯುವ ಜನರಿಗೆ ಉದ್ಯೋಗ ಒದಗಿಸುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಕರೆ ನೀಡಿದರು. ನಗರದ ಬಾಪೂಜಿ ಎಂಬಿಎ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ನವಸಂಕಲ್ಪ ಚಿಂತನಾ ಶಿಬಿರದ ಉದ್ಘಾಟಸಿ ಮಾತನಾಡಿ, ಕಾಂಗ್ರೆಸ್‌ಗೆ ಅಧಿಕಾರ ಮುಖ್ಯವಲ್ಲ. ದೇಶದ ಮತ್ತು ಕರ್ನಾಟಕದ ಜನತೆಯ ರಕ್ಷಣೆ ಅತೀ … Read more

ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ

ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಎಂಥವರಿಗೂ ಕಣ್ಣಿಗೆ ಕಾಣಿಸುವಂತಿದೆ. ಒಂದೊಮ್ಮೆ ಅವರು ತಪ್ಪು ಮಾಡಿಲ್ಲ, ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದಾದರೆ ತನಿಖೆಗೆ ಸಹಕರಿಸಬೇಕಿತ್ತು. ಕೋರ್ಟ್‌ಗೆ ಹಾಜರಾಗಿ ಅಲ್ಲಿ ಬರುವ ತೀರ್ಪನ್ನು … Read more

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜೂ.14 : ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು ದಾವಣಗೆರೆ ತಾಲ್ಲೂಕಿನ ಹಳೆ ಬಿಸಲೇರಿ ಗ್ರಾಮದಲ್ಲಿ ದಾನಿಗಳಾದ ಶ್ರೀಮತಿ ಗೌರಮ್ಮ ಕುಂದೂರು ವೀರಭದ್ರಪ್ಪ ಟ್ರಸ್ಟ್ ಹಾಗೂ ಕುಂದೂರು ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರುಗಳು ನಿರ್ಮಿಸಿರುವ ನೂತನ ಶಾಲಾ ಕಟ್ಟಡದ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿ … Read more

ಹಿಟ್ ಅಂಡ್ ರನ್ – ಬೈಕ್‍ ಸವಾರ ಗಂಭೀರ

ಶಿವಮೊಗ್ಗ, ಜೂ.14: ನಗರದ ಬೈಪಾಸ್‍ ರಸ್ತೆಯ ಕಿಯಾ ಶೋ ರೂಂ ಎದುರಿನಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ತೀವ್ರಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೆಂಪು ಬಣ್ಣದ ಐಟೆನ್ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಕಾರು ನಿಲ್ಲಿಸದೆ ಮುಂದೆ ಸಾಗಿದೆ. ಟ್ರಾಫಿಕ್ ಪೂರ್ವ ಪೊಲೀಸರು ಬೈಕ್ ಸವಾರನಿಗೆ ಆಸ್ಪತ್ರೆಗೆ ಸೇರಿಸಿ ಹಿಟ್ ಅಂಡ್ ರನ್ ಮಾಡಿದ ಕಾರು ಚಾಲಕನನ್ನು ಸಿಸಿ ಕ್ಯಾಮೇರ ದೃಶ್ಯಾವಳಿಗಳಿಂದ ಗುರುತಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

error: Content is protected !!