ಯಲ್ಲಮ್ಮ ದೇವಿ ದರ್ಶನಕ್ಕೆ ಹೊರಟಿದ್ದ ಆರು ಮಂದಿ ಭೀಕರ ಅಪಘಾತದಲ್ಲಿ ಸಾವು

ಸುದ್ದಿ360 ಬೆಳಗಾವಿ, ಜ.5: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಎಂಬಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿರುವುದಾಗಿ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಮ್ಮ ದೇವಿ ದರ್ಶನಕ್ಕೆಂದು ಪ್ರಯಾಣಿಸುತ್ತಿದ್ದ ಜೀಪ್ ಆಲದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇದರಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುಲಕುಂದ ಗ್ರಾಮದ ನಿವಾಸಿಗಳಾದ ಹನುಮವ್ವ, ದೀಪಾ, ಸವಿತಾ, ಸುಪ್ರೀತಾ, ಮಾರುತಿ ಮತ್ತು ಇಂದ್ರವ್ವ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ದುರ್ದೈವಿಗಳಾಗಿದ್ದಾರೆ.

ದಾವಣಗೆರೆ: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವರ ವಿರುದ್ಧ ಇಲಾಖಾ ಶಿಸ್ತುಕ್ರಮ

ಸುದ್ದಿ360 ದಾವಣಗೆರೆ ಡಿ.27:  ಚೆಕ್ ಬೌನ್ಸ್ ಪ್ರಕರಣದಲ್ಲಿ  ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್  ಭರತ್ ಹಾಗೂ ಲಂಚದ ಹಣವನ್ನು ಪಡೆಯಲು ಸಹಕರಿಸಿದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರ ಸಂಬಂಧಿ  ಸುರೇಶ ಇವರ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯ  ಹೆಡ್ ಕಾನ್ಸ್ಟೇಬಲ್ ಭರತ್ ರವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ … Read more

ನರಬಲಿಗಾಗಿ 2 ತಿಂಗಳ  ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ

ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು ಪೊಲೀಸರ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.  ಸತ್ತ ಅಪ್ಪ ಮರಳಿ ಬದುಕಬೇಕೆಂದರೆ ಮಗುವೊಂದರ ನರಬಲಿಯಾಗಬೇಕು ಎಂದು ಜ್ಯೋತಿಷಿ ಹೇಳಿದ್ದರಂತೆ. ಪೊಲೀಸರ ಯಶಸ್ವೀ ಕಾರ್ಯಾಚರಣೆ ಪೊಲೀಸರ ಯಶಸ್ವೀ ಕಾರ್ಯಾಚರಣೆಯಿಂದ ಮಗುವನ್ನು ರಕ್ಷಿಸಲಾಗಿದೆ. ನರಬಲಿಗಾಗಿ ಮಗುವನ್ನು ಅಪಹರಿಸಿದ್ದ ಮಹಿಳೆಯನ್ನು … Read more

ನೇಣಿಗೆ ಶರಣಾದ ಯುವಕ

ಸುದ್ದಿ360 ಶಿವಮೊಗ್ಗ, ಸೆ,16: ಶಿಕಾರಿಪುರ ತಾಲ್ಲೂಕಿನ ಯುವಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಕ್ಸೊ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಈತ, ತಾನು ಬಂಧನಕ್ಕೊಳಗಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳಲು ದೂರುದಾರ ಬಾಲಕಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬುದಾಗಿ ಪತ್ರ ಬರೆದಿದ್ದಾನೆ. ಬಡವನಾದ ನನ್ನಿಂದ ಹಣ ನೀಡಲು ಸಾಧ್ಯವಿಲ್ಲ, ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನನ್ನ ಮಗ ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಈ ಸಂಬಂಧ ಬಾಲಕಿಯ ತಂದೆ, ತಾಯಿ … Read more

ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ – ಪತಿಯ ಜೀವ ಉಳಿಸಲು ಮದುರೈನಿಂದ ಬಂದ ಪತ್ನಿಯ ದುರಂತ ಅಂತ್ಯ

ಸುದ್ದಿ360 ದಾವಣಗೆರೆ, ಸೆ.16: ಪತಿಯ ಜೀವ ಉಳಿಸಲು ಕಾಳಜಿ ವಹಿಸಿ ಆಂಬ್ಯುಲೆನ್ಸ್ ನಲ್ಲಿ ಕೂತಿದ್ದ ಪತ್ನಿಯೇ ದುರಂತ ಅಂತ್ಯ ಕಂಡಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕಲ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಕಲ್ಪನಹಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕಿ ಸೇರಿ ಇಬ್ಬರು ಸಾವು ಕಂಡಿದ್ದಾರೆ. ಕಾರಿಗನೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ಜ್ಯೋತಿ(43) ಮತ್ತು … Read more

ನಾಪತ್ತೆಯಾದ ಯುವಕ ಶವವಾಗಿ ಪತ್ತೆ

ಸುದ್ದಿ360 ರಾಮನಗರ, ಸೆ.15: ಹಾಸನ ಜಿಲ್ಲೆಯ ಹಿರಿಸಾವೆ ಹೋಬಳಿಯ ಪುರ್ ಗ್ರಾಮದ ಯುವಕ ಸೆ.14ರ ಬೆಳಿಗ್ಗೆಯಿಂದ ಕಾಣೆಯಾಗಿದ್ದು, ಇದೀಗ ಮಾಗಡಿಯ ಜಡೆದೇವರ ಮಠದ ಪಕ್ಕದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕ ದರ್ಶನ್ (19) ಮಾಗಡಿಯ ಜಡೆದೇವರ ಮಠದ ವಿದ್ಯಾರ್ಥಿಯಾಗಿದ್ದು, ಯುವಕನ ಪತ್ತೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿತ್ತು. ಇಂದು ಮುಂಜಾನೆ ಮಠದ ಪಕ್ಕದಲ್ಲೇ ಇರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದರ್ಶನ್, ಜಡೇದೇವರ ಮಠದಲ್ಲಿ ಸಂಸ್ಕೃತ ಕಲಿಕೆಯ ವಿದ್ಯಾರ್ಥಿಯಾಗಿದ್ದನು ಎಂದು ಹೇಳಲಾಗಿದೆ. ಮೃತ ದೇಹವನ್ನು ಮಾಗಡಿಯ ಅಗ್ನಿಶಾಮಕ … Read more

ದಾವಣಗೆರೆ ಪೊಲೀಸರಿಂದ ನಾಲ್ಕು ಅಂತರ್ ಜಿಲ್ಲಾ ಕಳ್ಳರ ಬಂಧನ

ಸುದ್ದಿ360 ದಾವಣಗೆರೆ, ಸೆ.14: ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಜಿಲ್ಲಾ ಪೊಲೀಸರು ಆರೋಪಿಗಳಿಂದ 4,87,350 ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ 6ನೇ ಕಲ್ಲು ಮತ್ತು ತುರ್ಚಗಟ್ಟ ಗ್ರಾಮದಲ್ಲಿ ರಾತ್ರಿ ಕನ್ನಕಳವು ಪ್ರಕರಣಗಳು ವರದಿಯಾಗಿದ್ದು, ಈ ಬಗ್ಗೆ ಆ.28 ರಂದು ಹದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದರಿ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆಗಾಗಿ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಎಎಸ್‌ಪಿ ಕನಿಕಾ ಸಿಕ್ರಿವಾಲ್ … Read more

ದಾವಣಗೆರೆ: ಗಾಂಜಾ ಮಾರಾಟ ಮಾಡುತ್ತಿದ್ದಾತನ ಬಂಧನ

ಸುದ್ದಿ360 ದಾವಣಗೆರೆ, ಸೆ.11: ಜಿಲ್ಲೆಯ ಹರಿಹರ ನಗರದ ಮನೆಯೊಂದರಲ್ಲಿ ಅಕ್ರಮ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿರುವ ಪೊಲೀಸರು ಆತನಿಂದ 14 ಸಾವಿರ ಮೌಲ್ಯದ 280 ಗ್ರಾಂ ಗಾಂಜಾ ಸೊಪ್ಪು, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಹರಿಹರ ನಗರದ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡಲಾಗಿತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ವಿಭಾಗದ ಡಿವೈಎಸ್ ಪಿ ಕನಿಕಾ ಸಿಕ್ರಿವಾಲ್ ನೇತೃತ್ವದಲ್ಲಿ … Read more

ಹೊರ ರಾಜ್ಯಕ್ಕೆ ಟ್ರ್ಯಾಕ್ಟರ್ ಬಿಡಿ ಭಾಗಗಳ ಅಕ್ರಮ ಮಾರಾಟ – ತಡೆದ ದಾವಣಗೆರೆ ಪೊಲೀಸರು

ಸುದ್ದಿ360 ದಾವಣಗೆರೆ, ಸೆ.07: ಯಾವುದೇ ದಾಖಲೆ ಹೊಂದಿರದೇ ಆರ್‌ಟಿಒ ದಿಂದ ಪರವಾನಿಗೆ ಪಡೆಯದೇ ದಾವಣಗೆರೆಯಿಂದ ಪಂಜಾಬ್‌ಗೆ ಅಕ್ರಮವಾಗಿ ಟ್ರಾಕ್ಟರ್ ಬಿಡಿ ಭಾಗಗಳನ್ನು ಮಾರಾಟವಾಗುತ್ತಿದ್ದುದನ್ನು ಜಿಲ್ಲಾ ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ಘಟಕದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬಿ. ಎಸ್. ಬಸವರಾಜ್ ಮತ್ತು ಅಧಿಕಾರಿ, ಸಿಬ್ಬಂದಿಗಳು ದಾವಣಗೆರೆ ನಗರದ ರೈತರ ಸಂಘದ ಕಾಂಪೌಂಡ್, ಬಿಲಾಲ್ ಕಾಂಪೌಂಡ್ ಬಳಿ ಇರುವ ಗ್ಯಾರೇಜುಗಳನ್ನು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ಹಳೇಯ ಟ್ರಾಕ್ಟರ್‌ಗಳನ್ನು … Read more

ಪತ್ನಿಯ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುದ್ದಿ360 ಶಿವಮೊಗ್ಗ, ಸೆ.07: ಗಂಡ ಹೆಂಡತಿಯ ನಡುವಿನ ಜಗಳದಿಂದಾಗಿ ಹೆಂಡತಿ ರಕ್ತದಮಡುವಿನಲ್ಲಿ ಕೊನೆಯುಸಿರೆಳೆದರೆ, ಪತಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ವರದಿಯಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಪ್ರಿಯಾಂಕ ಲೇ ಔಟ್ ನಲ್ಲಿನ ಮನೆಯೊಂದರಲ್ಲಿನ ಅಡುಗೆ ಮನೆಯ ರಕ್ತದ ಮಡುವಿನಲ್ಲಿ ಪತ್ನಿ ಪತ್ತೆಯಾಗಿದ್ದಾಳೆ. ಮೃತ ಮಹಿಳೆಯನ್ನ ಮಂಜುಳ (30) ಎಂದು ಗುರುತಿಸಲಾಗಿದೆ.ಪತಿ ದಿನೇಶ್ ಮೆಸ್ಕಾಂ ಉದ್ಯೋಗಿ ಎನ್ನಲಾಗಿದ್ದು, ಆತ ಸಹ ಕೈಕೊಯ್ದುಕೊಂಡಿದ್ದಾನೆ. ಆತನಿಗೆ ನಾರಾಯಣ ಹೃದಯಾಲಯಕ್ಕೆ ದಾಖ ಲಿಸಲಾಗಿದೆ. … Read more

error: Content is protected !!