ಆಸರೆಯಾದ ಅಜ್ಜಿಯ ನಿವೃತ್ತಿಯ ದಿನದಂದೆ ಹಾಲಮ್ಮನ ಕೊರಳಿಗೆ 5 ಸ್ವರ್ಣ ಪದಕ

ಸುದ್ದಿ360 ದಾವಣಗೆರೆ.ಫೆ.28: ತಾನು 3ನೇ ತರಗತಿಯಲ್ಲಿ ಓದುತ್ತಿರುವಾಗಲೇ ತನ್ನ ಅಮ್ಮನನ್ನು ಕಳೆದುಕೊಂಡು ಅಜ್ಜಿಯ ಆಸರೆಯಲ್ಲಿ ಬೆಳೆದ ಹಾಲಮ್ಮ ಬಿ. ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಐದು ಚಿನ್ನದ ಪದಕ ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಇಂದು ನಡೆದ 10ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಪದವಿಯೊಂದಿಗೆ ಐದು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿರುವ ಹಾಲಮ್ಮ ‘ಸುದ್ದಿ360’ ಯೊಂದಿಗೆ ಸಂತಸವನ್ನು ಹಂಚಿಕೊಂಡರು. ನನ್ನನ್ನು ಸಾಕಿ ಸಲಹಿದ ನನ್ನ ಅಜ್ಜಿಗೆ ಇಂದು ನಿವೃತ್ತಿಯ ದಿನವಾಗಿದೆ. ಇದೇ … Read more

ದಾವಣಗೆರೆಯಲ್ಲಿ ಸಂಚಾರಿ ನಿಯಮ ಅರಿವು ಮೂಡಿಸುವ ಚಂದದ ಕಲಿಕೆಯ ‘ಟ್ರಾಫಿಕ್ ಅವೇರ್ನೆಸ್ ಪಾರ್ಕ್’ – ನೀವೂ ಒಮ್ಮೆ ಭೇಟಿ ನೀಡಿ…

ಸುದ್ದಿ360 ದಾವಣಗೆರೆ ಜ.11: ರಸ್ತೆ ಮೇಲಿನ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಸ್ತೆಬದಿಯಲ್ಲಿನ ಸಂಚಾರಿ ನಿಯಮಗಳ ಸೂಚನಾ ಫಲಕಗಳ ಬಗ್ಗೆ ವಿದ್ಯಾರ್ಥಿದಿಸೆಯಿಂದಲೇ ಅರಿವು ಮೂಡಿಸಿದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ನಗರದ ನಿಜಲಿಂಗಪ್ಪ ಬಡಾವಣೆಯ  ಶ್ರೀಮತಿ ಗಂಗೂಬಾಯಿ ಹಾನಗಲ್ಲ ಉದ್ಯಾನವನ (ಗಸೆಗಸೆ ಪಾರ್ಕ್)  ದಲ್ಲಿ ನಿರ್ಮಿಸಲಾಗಿದ್ದ ‘‘ಸಂಚಾರ ಜಾಗೃತಿ ಉದ್ಯಾನವನ’ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ 24ಕ್ಕೂ ಹೆಚ್ಚು ಸೂಚನಾ … Read more

ಪೋಷಕರನ್ನು ಬಾಲ್ಯದ ದಿನಕ್ಕೆ ಕರೆದೊಯ್ದ ದಾವಣಗೆರೆ ಪಿಬಿವಿ ವಿದ್ಯಾಲಯ

ಸುದ್ದಿ 360 ದಾವಣಗೆರೆ, ಜ.10: ದಿನಾ ಬೆಳಗೆದ್ದು ಮಕ್ಕಳ ಶಾಲೆಯ ಬ್ಯಾಗ್, ಲಂಚ್ ಬ್ಯಾಗ್, ನೀರು ಬಾಟಲ್, ಕರ್ಚಿಪ್, ಮಾಸ್ಕ್ ಹೀಗೆ ಮಕ್ಕಳನ್ನು ಶಾಲೆಗೆ ಸಜ್ಜುಗೊಳಿಸಿ ಶಾಲಾ ಆವರಣಕ್ಕೆ ತಲುಪಿಸಿ ಉಸ್ಸಪ್ಪ ಇವತ್ತಿನ ಅರ್ಧ ಕೆಲಸ ಮುಗೀತು ಎಂದು ನಿಟ್ಟುಸಿರು ಬಿಡುತ್ತಾ ಮನೆ ಕಡೆಗೆ ತೆರಳುತ್ತಿದ್ದ ಪೋಷಕರ ಈ ದಿನ ಕೊಂಚ ವಿಶೇಷವಾಗಿಯೇ ಇತ್ತು. ನಗರದ ದೇವರಾಜ ಅರಸು ಬಡಾವಣೆಯ ಬಿ ಬ್ಲಾಕ್ ನಲ್ಲಿರುವ ದೈವಜ್ಞ ವಿದ್ಯಾಸಂಸ್ಥೆ ಪಿಬಿವಿ ವಿದ್ಯಾಲಯದಲ್ಲಿ ಸೋಮವಾರ ಶಾಲಾ ವಿದ್ಯಾರ್ಥಿಗಳ ಪೋಷಕರಿಗಾಗಿ ಹಲವು … Read more

ಜ.4ಕ್ಕೆ ಪುಸ್ತಕ ಪಂಚಮಿ

ದಾವಣಗೆರೆ ನಗರದ ಆಯ್ದ 68 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಸುದ್ದಿ360 ದಾವಣಗೆರೆ ಜ.3: ಡಾ ಹೆಚ್ ಎಫ್ ಕಟ್ಟೀಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಧಾರವಾಡ, ದಾವಣಗೆರೆ ಘಟಕದಿಂದ‌ ಪುಸ್ತಕ ವಾಚನ ಸಹಾಯ ಯೋಜನೆಯಡಿಯಲ್ಲಿ ‘ಪುಸ್ತಕ ಪಂಚಮಿ’ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಜ.4ರಂದು ನಗರದ ಪಿಜೆ ಬಡಾವಣೆಯ ಈಶ್ವರಮ್ಮ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಪ್ರಕಾಶ್ ಬೂಸ್ನೂರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, … Read more

ಕಲಿಕೆಯೊಂದಿಗೆ ಕುಣಿತದ ಝಲಕ್ ನೀಡಿದ ದವನ್ ಕಾರ್ನಿವಲ್-2022

ಸುದ್ದಿ360 ದಾವಣಗೆರೆ, ಡಿ.31: ಗಂಧದ ಗುಡಿ, ಹಳ್ಳಿಮನೆ, ದೇಶಿ ಖಿಲ್ಲ, ಫುಡ್ ಪಾಯಿಂಟ್, ಈಶ್ವರ್, ಗೋಲ್ಡನ್ ಸ್ಪೂನ್ ರೆಸ್ಟಾರೆಂಟ್, ಫಾಲ್ ಆಫ್ ಫ್ಲೇವರ್ಸ್, ಫುಡೀಶಿಯಸ್ ಹ್ಯಾಲೊ ಸ್ಪೂಕಿ, ಹಕುನ ಮಟಾಟ ಇಂತಹ ಹೆಸರಿನ ಒಟ್ಟು 16 ಸ್ಟಾಲ್ಗಳು ಇಂದು ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯಭವನದಲ್ಲಿ ನಡೆದ ದವನ್ ಕಾರ್ನಿವಲ್-2022 ಜಾತ್ರೆಯ ವಾತಾವರಣವನ್ನೇ ನಿರ್ಮಿಸಿತ್ತು. ದವನ್ ಇನ್ಟ್ಸಿಟ್ಯೂಟ್ ಆಫ್ ಅಡ್ವಾನ್ಸ್‍ಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ವತಿಯಿಂದ 2022ರ ಕೊನೆಯ ದಿನದಂದು ಆಯೋಜಿಸಲಾಗಿದ್ದ ದವನ್ ಕಾರ್ನಿವಲ್-2022ನ್ನು ದವನ್ ಕಾಲೇಜು ಕಾರ್ಯದರ್ಶಿ ವೀರೇಶ್ … Read more

error: Content is protected !!