ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ (guarantee) ಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ (warrantee) ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (congress)  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (basavaraja bommai) ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ … Read more

ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು?

ಸುದ್ದಿ360 ಬಾಗಲಕೋಟೆ : ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ ಹಾಗಾದ್ರೆ ನಮ್ಮಂತವರ ಗೋಳು ಕೇಳೋರ್ಯಾರು ? ಈ ಕೂಗು ಕೇಳಿ ಬಂದದ್ದು  ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್‍.ಟಿ.ಸಿ ಬಸ್ನಲ್ಲಿ. ನಮ್ಮ ಲಗೇಜ್ ಹಾಕಿದ್ರೆ ನಡುದಾರಿಯಲ್ಲಿ ತೆಗೆದು ಹಾಕ್ತಿವಿ ಅಂತ ಕಂಡಕ್ಟರ್ ಹೇಳ್ತಾರೆ ಎಂಬುದು ಮಹಿಳೆಯ ಆರೋಪ. ಇಳಕಲ್ ದಿಂದ ಮುದಗಲ್ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ಲಗೇಜ್ ವಿಚಾರದಲ್ಲಿ ಸಾರಿಗೆ ಸಿಬ್ಬಂದಿ, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ವ್ಯಾಪಾರಕ್ಕೆಂದು ಪ್ಲಾಸ್ಟಿಕ್ … Read more

ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ಪ್ರಾಣ ಬಿಟ್ಟ ತಾಯಿ

ಸುದ್ದಿ360, ಬಾಗಲಕೋಟೆ ಜ.11: ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿದ ತಾಯಿ ಕೊನೆಗೆ ತಾನೂ ವಿಷ ಕುಡಿದು ಪ್ರಾಣ ಬಿಟ್ಟಿರುವ ಧಾರುಣ ಘಟನೆ ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ರೇಖಾ ಬಗಲಿ(28) ತಾಯಿ, ಮಕ್ಕಳಾದ ಸನ್ನಿಧಿ(೮), ಸಮೃದ್ದಿ(5), ಶ್ರೀನಿಧಿ(3) ಹೀಗೆ ಮೃತಪಟ್ಟವರಾಗಿದ್ದಾರೆ. ರೇಖಾ ಇತ್ತೀಚೆಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಳು ಎಂದು ಹೇಳಲಾಗಿದ್ದು, ಮೂರು ಜನ ಹೆಣ್ಣು ಮಕ್ಕಳಿದ್ದ ಕಾರಣ ಮಕ್ಕಳ‌ ವಿದ್ಯಾಭ್ಯಾಸ , ಮದುವೆ ಬಗ್ಗೆ  ಚಿಂತಿಸಿ‌ ಮಾನಸಿಕವಾಗಿ ಬಳಲಿದ್ದಳು ಎಂಬ ಮಾಹಿತಿ ಕೇಳಿಬರುತ್ತಿದೆ. ಜ್ಯೂಸ್ ಬಾಟಲ್‌ನಲ್ಲಿ … Read more

ಬಾದಾಮಿಯಿಂದ ಸ್ಪರ್ಧಿಸಿದರೆ ಒಳ್ಳೆಯದಾಗುತ್ತೆ – ಸಿದ್ಧರಾಮಯ್ಯನವರಿಗೆ ಬನಶಂಕರಿ ದೇಗುಲದ ಅರ್ಚಕರ ಮನವಿ

ಸುದ್ದಿ360 ಬಾಗಲಕೋಟೆ ಜ.6: ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯ ಗೆ ಒಳ್ಳೆಯದಾಗುತ್ತದೆ ಎಂದು ಬಾದಾಮಿ ಬನಶಂಕರಿ ದೇಗುಲದ ಅರ್ಚಕರು ಹೇಳಿದ್ದಾರೆ. ಬನಶಂಕರಿ ಜಾತ್ರೆಯ ಮಹಾರಥೋತ್ಸವ ನಿಮಿತ್ತ ಬಾದಾಮಿಗೆ ಆಗಮಿಸಿದ್ದ ಸಿದ್ದರಾಮಯ್ಯರಿಗೆ ಇಲ್ಲಿನ ಅರ್ಚಕರು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯನವರಿಂದ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜಾ ಕೈಂಕರ್ಯ ಮುಗಿದ ಬಳಿಕ ಆಶೀರ್ವಾದ ಮಾಡಿದ ಅರ್ಚಕರು ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಒಳ್ಳೆಯದಾಗುತ್ತೆ ಎಂದು ಹೇಳಿದ್ದಾರೆ.

ಬನಶಂಕರಿ ನಿನ್ನ ಪಾದಕ ಶಂಭೂಕೋ – ಬನಶಂಕರಿ ರಥೋತ್ಸವಕ್ಕೆ ಸಂಭ್ರಮದ ಚಾಲನೆ

ಸುದ್ದಿ360 ಬಾಗಲಕೋಟೆ ಜ.6: ಜಿಲ್ಲೆಯ ಬಾದಾಮಿಯ ಬನಶಂಕರಿ ರಥೋತ್ಸವಕ್ಕೆ ಶುಕ್ರವಾರ ಸಂಭ್ರಮದ ಚಾಲನೆ ದೊರೆತಿದ್ದು, ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಪುಷ್ಪಾರ್ಪಣೆ ಮಾಡು ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ನೆರೆದಿದ್ದ ಜನ ಸಾಗರದಿಂದ “ಬನಶಂಕರಿ ನಿನ್ನ ಪಾದಕ ಶಂಭೂಕೋ” ಎಂಬ ಉದ್ಘೋಷ ಕೇಳಿಬರುತ್ತಿತ್ತು. ಉದ್ಘೋಷದೊಂದಿಗೆ ನಮಿಸಿದ ಭಕ್ತಸಾಗರ ದೇವಿಯ ಕೃಪೆಗೆ ಪಾತ್ರರಾದರು. ಒಂದು ತಿಂಗಳ ಜಾತ್ರೆ ಇದಾಗಿದ್ದು ಇಂದಿನಿಂದ ಅಧಿಕೃತವಾಗಿ ಪ್ರಾರಂಭಗೊಂಡಿದೆ.

ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು – ಇಬ್ಬರ ಸ್ಥಿತಿ ಗಂಭೀರ

ಸುದ್ದಿ360 ಬಾಗಲಕೋಟೆ ಜ.6: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಗೆ  ಹೋಗಿ ಬರುತ್ತಿದ್ದ ವೇಳೆ ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯ ಟ್ರ್ಯಾಕ್ಟರ್ ಮುಂದಿನ ಟ್ರ್ಯಾಕ್ಟರ್ಗೆ ಗುದ್ದಿರುವ ಕಾರಣ ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಬಳಿ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಪಲ್ಟಿಯಾದ ಸ್ಥಳದಲ್ಲೇ ಇಬ್ಬರು ಸಾವುಗೀಡಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಗೋವಿಂದ್( 20), ಹಣಮಂತ (20) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಹನಮಂತ ಹುಣಸಿಕಟ್ಟಿ ಅವರಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, … Read more

ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ

ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ ಎಂದು ಹೇಳಿದ ಅವರು, ಕಷ್ಟ ಕಾಲದಲ್ಲಿ ಕೈ ಹಿಡಿದವರನ್ನು ಮರೆಯಬಾರದು’ .

ಸಿದ್ಧರಾಮೋತ್ಸವಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಸುದ್ದಿ360 ಬಾಗಲಕೋಟೆ, ಸೆ.16: ಸಿದ್ಧರಾಮಾತ್ಸವಕ್ಕೆಂದು ದಾವಣಗೆರೆಗೆ ತೆರಳಿದಾಗ ಕಾಣೆಯಾಗಿದ್ದ ಜಮಖಂಡಿ ತಾಲೂಕಿನ ಅಡಿಹುಡಿಯ ಗಿರಿಮಲ್ಲಪ್ಪ ಖಂಡೇಕರ್ ಅವರನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿದ್ದಾರೆ. ಗಿರಿಮಲ್ಲಪ್ಪಗಾಗಿ ಶೋಧನೆ ಕೈಗೊಂಡಿದ್ದ ಪೊಲೀಸರು ಈ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದಿಂದ 50 ಜನ ಹುಬ್ಬಳ್ಳಿ ಗೆ ತೆರಳಿ ಗಿರಿಮಲ್ಲಪ್ಪ ಕರೆ ತಂದಿದ್ದಾರೆ. ಆತಂಕದಲ್ಲಿದ್ದ  ಗಿರಿಮಲ್ಲಪ್ಪ ಕುಟುಂಬದವರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಆ. 2 ರಂದು ದಾವಣಗೆರೆಗೆ ಸಿದ್ದರಾಮಯ್ಯ ಜನ್ಮದಿನ ಕ್ಕಾಗಿ ಗಿರಿಮಲ್ಲಪ್ಪ ಊರಿನವರೊಂದಿಗೆ ದಾವಣಗೆರೆಗೆ ತೆರಳಿದ್ದರು. ಆದರೆ ಸಮಾರಂಭ … Read more

ಸಾಯಲು ನೀರಿಗೆ ದುಮುಕಿದವಗೆ ಗರಿಗೆದರಿದ ಜೀವದ ಆಸೆ – ಅದೃಷ್ಟವಶಾತ್ ಬದುಕುಳಿದ ಜೀವ

ಸುದ್ದಿ360, ಬಾಗಲಕೋಟೆ ಜು.25: ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ನೀರಿಗೆ ದುಮುಕಿದ ವ್ಯಕ್ತಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿರುವ ಘಟನೆ ಭಾನುವಾರ ಮಧ್ಯಾಹ್ನ ಅನಗವಾಡಿ ಸೇತುವೆ ಬಳಿ ನಡೆದಿದೆ. ಗದ್ದನಕೇರಿ ಕ್ರಾಸ್ ಬಳಿಯ ವೀರಾಪುರದ ನಿವಾಸಿ 43ರ ವಯೋಮಾನದ ಚನ್ನಬಸಪ್ಪ ಯಲಗನ್ನವರ  ಎಂಬ ವ್ಯಕ್ತಿ ಹೀಗೆ ಬದುಕಿ ಬಂದವರು. ಸಾವನ್ನಪ್ಪಲು ಅನಗವಾಡಿ ಸೇತುವೆಯ ಮೇಲಿಂದ ತುಂಬಿಹರಿಯುತ್ತಿರುವ ಘಟಪ್ರಭೆಗೆ ಜಿಗಿದ ಈತ ನೀರಿಗೆ ಬೀಳುತ್ತಿದ್ದಂತೆ ಬದುಕುವ ಆಸೆ ಮೊಳೆತಿದೆ. ಇದರಿಂದ ನೀರಿನ ಮಧ್ಯದ ಸೇತುವೆ ಕಂಬವನ್ನು ಆಸರೆಯಾಗಿ ಹಿಡಿದುಕೊಂಡು ಜೀವ ಉಳಿಸಿಕೊಳ್ಳಲು … Read more

ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ

ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಗ್ನಿಪಥ ಯೋಜನೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಪಷ್ಡವಾಗಿ ಹೇಳಿವೆ. ಅಗ್ನಿಪಥ ಯೋಜನೆಯಿಂದ ಅನ್ಯಾಯವಾಗುವಂತಹ ಪ್ರಶ್ನೆಯೇ ಇಲ್ಲ. ಇದರಿಂದ … Read more

error: Content is protected !!