ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ ಸಿಎಂ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು  ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇದು  ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ  ದೊಡ್ಡ ಅಂತರರಾಷ್ಟ್ರೀಯ ಷಡ್ಯಂತ್ರವಿದೆ. ಅದರ ಸಂಪೂರ್ಣ ತನಿಖೆಯಾಗಬೇಕು.  ಅಪರಾಧಿಗಳನ್ನು ಪತ್ತೆ ಹಚ್ಚಿ ಗಲ್ಲಿಗೇರಿಸಬೇಕು.  ರಾಜಸ್ತಾನ ಸರ್ಕಾರ ಸಂಪೂರ್ಣ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕು … Read more

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಂಡೀಗಢ ಪ್ರವಾಸ

ಜಿಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಚಂದೀಗಢಗೆ ಪ್ರವಾಸ ಸುದ್ದಿ 360 ಬೆಂಗಳೂರು, ಜೂ. 27:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಸೋಮವಾರ (ಜೂನ್ 27) ಸಂಜೆ ಚಂಡೀಗಢ ಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದು, ಸಭೆಯಲ್ಲಿ ಜಿಎಸ್ ಟಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ಜಿ ಎಸ್ ಟಿ ತೆರಿಗೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಗ್ರೂಪ್ … Read more

ತುರ್ತು ಪರಿಸ್ಥಿತಿಯಲ್ಲಿಯೂ  ದೇಶದ ರಾಜಕಾರಣವನ್ನು ಬದಲಾಯಿಸಿದ್ದು ಜನಶಕ್ತಿ: ಸಿಎಂ

ಸುದ್ದಿ360 ಬೆಂಗಳೂರು, ಜೂನ್ 26: ತುರ್ತು ಪರಿಸ್ಥಿತಿಯಲ್ಲಿಯೂ  ಇಡೀ ದೇಶದ ರಾಜಕಾರಣ ಹಾಗೂ ಪ್ರಜಾಪ್ರಭುತ್ವವನ್ನು  ದೊಡ್ಡ ಪ್ರಮಾಣದಲ್ಲಿ ಬದಲಾಯಿಸಿದ್ದು ಜನಶಕ್ತಿ ಎಂದು ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆಯ ಪ್ರಯುಕ್ತ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿ ಮಾತನಾಡುತ್ತಿದ್ದರು. ದೇಶದಲ್ಲಿ ಇಂಥದ್ದು ಘಟಿಸಿತ್ತು ಹಾಗೂ ಈ ದೇಶವನ್ನು ಉಳಿಸುವ ಶಕ್ತಿ ಜನಸಾಮಾನ್ಯರಿಗಿದೆ ಎನ್ನುವುದನ್ನು ತಿಳಿಸಲೆಂದು  ಕರಾಳ ದಿನಾಚರಣೆಯನ್ನು  ನಾವು ಆಚರಿಸಬೇಕಿದೆ. ಅಧಿಕಾರ ಎಂಬುದು ಸರ್ವ ಗುಣಧರ್ಮಗಳನ್ನು ಮರೀಚಿಕೆಯಾಗಿ  ಮಾಡಿ ತಾನು … Read more

ಕೆಐಎ ನಲ್ಲಿ ಶೀಘ್ರದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜೂ. 24: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲಿಯೇಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಿಂದ ಇಂದು ಹಿಂದಿರುಗಿದ ಸಂದರ್ಭದಲ್ಲಿ ಬೆಂಗಳೂರು ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿಯ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿ ಅಂತಿಮ ಘಟ್ಟಕ್ಕೆ ಬಂದಿದೆ. ಸ್ಟೀಲ್ ಮತ್ತು ಕಂಚಿನಿಂದ ಮಾಡಲಾಗಿರುವ ಸುಮಾರು 108 ಅಡಿ ಎತ್ತರದ ಪ್ರತಿಮೆ 220 ಟನ್ … Read more

ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯುವುದಿಲ್ಲ: ರಾಜ್ಯಸರ್ಕಾರದ ಸ್ಪಷ್ಟ ನಿಲುವು

ಸಾಂದರ್ಭಿಕ ಚಿತ್ರ

ತಜ್ಞರು ತಿಳಿಸಿರುವ ಕೆಲವು ದೋಷಗಳನ್ನು ಸರಿಪಡಿಸಿ ಶಾಲೆಗಳಿಗೆ ಪುಸ್ತಕ ವಿತರಿಸಲು ಸರ್ಕಾರದ ನಿರ್ಧಾರ ಸುದ್ದಿ 360 ಬೆಂಗಳೂರು, ಜೂ.24: ಇತ್ತೀಚೆಗೆ ಅತ್ಯಂತ ವಿವಾದಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರೂಪಿಸಿರುವ ಪಠ್ಯವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ. ಪಠ್ಯದಲ್ಲಿ ಕೆಲವು ಲೋಪದೋಷಗಳನ್ನು ತಜ್ಞರು ಗುರುತಿಸಿ ಅವುಗಳನ್ನು ಸರಿಪಡಿಸಿ ಮುಂದಿನ ಹತ್ತು ದಿನಗಳ ಒಳಗಾಗಿ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ … Read more

ಸಚಿವ ಸಂಪುಟ ವಿಸ್ತರಣೆ ? ನಾನು ಹೇಳುವವರೆಗೆ ಏನೂ ಇಲ್ಲ . . .

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ 360 ನವದೆಹಲಿ, ಜೂನ್ 23: ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ಕುರಿತಾದ ಸುದ್ಧಿಗಳು ಮಾಧ್ಯಮಗಳಲ್ಲಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ರಾಷ್ಟ್ರಪತಿ ಚುನಾವಣೆ ಪ್ರಯುಕ್ತ ವರಿಷ್ಠರ ಸೂಚನೆ ಮೇರೆಗೆ ನವದೆಹಲಿ ತಲುಪಿರುವ ಅವರು, ಸಚಿವ ಸಂಪುಟ ಕುರಿತಾದ ಮಾದ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಐಕಿಯಾದಿಂದ ಸ್ಥಳೀಯರಿಗೆ ಶೇ 75 ರಷ್ಟು  ಉದ್ಯೋಗಾವಕಾಶ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಐಕಿಯಾ ಪೀಠೋಪಕರಣ ಮಳಿಗೆಗೆ ಮುಖ್ಯಮಂತ್ರಿ ಚಾಲನೆ ಸುದ್ದಿ360 ಬೆಂಗಳೂರು, ಜೂನ್ 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ಐಕಿಯಾ … Read more

ಪ್ರಧಾನಿಯಿಂದ ಕೊಮ್ಮಘಟ್ಟದಲ್ಲಿ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ

ಸುದ್ದಿ360 ಬೆಂಗಳೂರು, ಜೂ.20: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ – ಪೆನುಕೊಂಡ ಜೋಡಿ ರೈಲು ಮಾರ್ಗ ಉದ್ಘಾಟನೆ ಹಾಗೂ ಹೊಸ ರೈಲು ಸೇವೆಗಳಿಗೆ ಚಾಲನೆ ನೀಡಿದರು. ಬೆಂಗಳೂರು ಉಪ ನಗರ ರೈಲು ಯೋಜನೆಗೆ ಹಾಗೂ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ … Read more

ಮುಖ್ಯಮಂ‍ತ್ರಿಯಿಂದ ಪ್ರಧಾನಿ ಮೋದಿ ಭಾಗಿಯಾಗುವ ವೇದಿಕೆ ಪರಿಶೀಲನೆ

ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.. ನಾಳೆ ಶಂಕು ಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ,  ರಾಷ್ಟ್ರೀಯ ಹೆದ್ದಾರಿ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿ ವಿವರಣೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, … Read more

ಪ್ರಧಾನಿ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸ

ಸುದ್ದಿ360 ಬೆಂಗಳೂರು, ಜೂ.19: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಿ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ 1.45 ಕ್ಕೆ ಪ್ರಧಾನಿಯವರು (ಬೇಸ್) ಕ್ಯಾಂಪಸ್ ಗೆ ತೆರಳಿ, ಡಾ:ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ, … Read more

error: Content is protected !!