ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸರಣಿ ಅಪಘಾತ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ – 7 ಕಾರುಗಳು ಜಖಂ

ಸುದ್ದಿ360 ದೇವನಹಳ್ಳಿ, ಜ.6: ರಾಷ್ಟ್ರೀಯ ಹೆದ್ದಾರಿ7ರಲ್ಲಿ ಘಟಿಸಿರುವ ಸರಣಿ ಅಪಘಾತದಿಂದ ಕಿಲೋಮೀಟರ್‍ಗಟ್ಟಲ್ಲೇ ಟ್ರಾಫಿಕ್ ಜಾಮ್ ಆದ ಪರಿಣಾಮ ವಾಹನ ಸವಾರರು ಪೇಚಾಡಬೇಕಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಈ ಘಟನೆ ನಡೆದಿದ್ದು, ಕಾರುಗಳಿಗೆ ಯದ್ವಾ ತದ್ವಾ ಡಿಕ್ಕಿ ಹೊಡೆದಿರುವ ಟಿಪ್ಪರ್ ನಿಂದಾಗಿ 7 ಕಾರುಗಳ ಸರಣಿ ಅಪಘಾತಕ್ಕೆ ಕಾರಣವಾಯಿತು ಎಂದು ಹೇಳಲಾಗಿದೆ. ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ  ಎಸ್ಕೇಪ್ ಆಗಿದ್ದು, ಪೊಲೀಸರು ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ಟಿಪ್ಪರ್ ಡಿಕ್ಕಿ … Read more

ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ

ಸುದ್ದಿ360  ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ  ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರು ರಾಜಧಾನಿಯ ಸ್ವಾತಂತ್ರ್ಯ  ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿ ನಿರತರ ಅಹವಾಲು ಸ್ವೀಕರಿಸಿ ಮಾತನಾಡಿದರು. ನಾನ್ನ ಅಧಿಕಾರಾವಧಿಯಲ್ಲಿ  ಓಪಿಎಸ್ ಜಾರಿ ಮಾಡಲು ಸಾಧ್ಯವಿಲ್ಲ ಎಂದು ನಾನು … Read more

ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ ಅನುದಾನಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ … Read more

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು  ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ  ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ … Read more

ಕೇಸರಿ ಕಂಡರೆ ಏಕೆ ಸಿಟ್ಟು? ಎಲ್ಲದರಲ್ಲೂ ರಾಜಕಾರಣ ಸಲ್ಲದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ.  ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು  … Read more

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ … Read more

ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ

ಸುದ್ದಿ360 ಬೆಂಗಳೂರು, ಅ. 23 : ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಹಾಗೂ ಕರ್ನಾಟಕ ರಾಜ್ಯ ಬೆಳೆಯುತ್ತಿರುವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್. ಟಿ. ನಗರ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ :ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನ ದುರ್ದೈವದ ಸಂಗತಿ. ಅವರ ಪಾರ್ಥಿವ ಶರೀರ ಅವರ ಸ್ವಕ್ಷೇತ್ರವಾದ ಸವದತ್ತಿಗೆ ಒಯ್ಯಲಾಗಿದೆ. ಸಕಲ ಸರ್ಕಾರಿ … Read more

ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.23: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನ ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ, ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ. ಒಂದು ಸಣ್ಣ ಪುರಾವೆ ಇಲ್ಲದೆ ಮಾತನಾಡುವ ಈ ಪ್ರವೃತ್ತಿ ಬಹಳ … Read more

ಎಸಿಬಿ ರದ್ದು: ಬಲಗೊಂಡ ಲೋಕಾಯುಕ್ತ

ಸುದ್ದಿ360 ಬೆಂಗಳೂರು, ಸೆ.09:ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಲಾಗಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಉಳಿದಿರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ  ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ. ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೆರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಜಲಪ್ರವಾಹದ … Read more

error: Content is protected !!