ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ  ನಡೆದ … Read more

ಕೆಲವೇ ಕ್ಷಣಗಳಲ್ಲಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಮೂವರು ನಾಯಕರ ಭೇಟಿ . . .

ರಾಜಕಾರಣದಲ್ಲಿ ತಾಳ್ಮೆ ಬೇಕು – ವೈಯ್ಟ್ ಅಂಡ್ ಸಿ ಎಂದ ಜಗದೀಶ್‍ ಶೆಟ್ಟರ್ ಸುದ್ದಿ360 ಹುಬ್ಬಳ್ಳಿ ಏ.15: ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಕರ್ನಾಟಕ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾತ್ರಿ 8.30ಕ್ಕೆ ತಮ್ಮ ನಿವಾಸಕ್ಕೆ ಭೇಟಿ ನೀಡಲಿದ್ದಾರೆ ತದನಂತರ ನಿರ್ಧಾರವನ್ನು ಪ್ರಕಟಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್‍ ಶೆಟ್ಟರ್  ಹೇಳಿದ್ದಾರೆ. ಈ ಕುರಿತು ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರಿಂದ ಸೂಕ್ತ ಸ್ಪಂದನೆ ಬರುವ ನಿರೀಕ್ಷೆಯಲ್ಲಿ ನಾನಿದ್ದೇನೆ ಎಂದು ತಿಳಿಸಿರುವ ಅವರು, ಪಕ್ಷದಿಂದ … Read more

ಗೆಲ್ಲುವ ಪಕ್ಷದಲ್ಲಿ ಅಭ್ಯರ್ಥಿಗಳ ಪೈಪೋಟಿ ಸಹಜ- ಹೈಕಮಾಂಡ್ ಸಮರ್ಥವಾಗಿ ನಿರ್ವಹಿಸಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿ, ಮಾರ್ಚ್ 15 : ಭಾಜಪ ಪಕ್ಷ ಸಂಘಟನೆಯಲ್ಲಿ ಗಟ್ಟಿಯಾಗಿದೆ. ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟು ಉತ್ಸಾಹವಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆಯುವ ಆತ್ಮವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ವಿವಿಧ ಮೋರ್ಚಾ, ಸಮ್ಮೇಳನ , ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ, ಫಲಾನುಭವಿಗಳ ಕಾರ್ಯಕ್ರಮ, ರಥಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿರಂತರವಾಗಿ ರಾಜ್ಯದಲ್ಲಿ ನಡೆಯುತ್ತಿದೆ.  ಬಿಜೆಪಿಯಲ್ಲಿ … Read more

ಸಿದ್ಧರಾಮಯ್ಯಗೆ ಕುರಿ – ಕಂಬಳಿಯೊಂದಿಗೆ ಭವ್ಯ ಸ್ವಾಗತ ನೀಡಿದ ಕಾರ್ಯಕರ್ತರು

ಸುದ್ದಿ360, ಬೆಳಗಾವಿ  ಜ.11: ಕಾಂಗ್ರೆಸ್ ನ ಬಸ್ ಯಾತ್ರೆ ಅಂಗವಾಗಿ ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಾಜಿಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮ ಬಳಿ ಭಾರಿ ಸ್ವಾಗತ ಕಾದಿತ್ತು. ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧರಾಮಯ್ಯರಿಗಾಗಿ ಕುರಿ ಮತ್ತು ಕಂಬಳಿಯನ್ನು ಉಡುಗೊರೆಯಾಗಿ ನೀಡಿ ಸ್ವಾಗತಿಸಿದರು. ಶಂಭು ಕಲ್ಲೋಳ್ಕರ್, ಧೂಳಗೌಡ ಪಾಟೀಲ್ ನೇತೃತ್ವದಲ್ಲಿ ರಾಯಭಾಗ ಮತಕ್ಷೇತ್ರದಿಂದ  ಬೈಕ್ ರ್ಯಾಲಿ ಮೂಲಕ ಮಜಲಟ್ಟಿ ಗ್ರಾಮ ಬಳಿ … Read more

ಜ.13: ಮುಖ್ಯಮಂತ್ರಿಯವರ ಶಿಗ್ಗಾವಿಯ ಮನೆ ಮುಂದೆ ಸತ್ಯಾಗ್ರಹ – ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸುದ್ದಿ360 ಬೆಳಗಾವಿ, ಜ.10: ಬೀಸುವ ದೊಣ್ಣಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿರುವ ಸರಕಾರ  ಮೀಸಲಾತಿ ಹುಸಿ ಭರವಸೆ ಕೊಡುವ ಮೂಲಕ  ಹೋರಾಟದ ದಾರಿ ತಪ್ಪಿಸುತ್ತಿದೆ. ಸರಕಾರಕ್ಕೆ ಬಿಸಿ ಮುಟ್ಟಿಸಲು ಜ.13 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಂದು ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದ ಸರಕಾರ … Read more

ಯಲ್ಲಮ್ಮ ದೇವಿ ದರ್ಶನಕ್ಕೆ ಹೊರಟಿದ್ದ ಆರು ಮಂದಿ ಭೀಕರ ಅಪಘಾತದಲ್ಲಿ ಸಾವು

ಸುದ್ದಿ360 ಬೆಳಗಾವಿ, ಜ.5: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಎಂಬಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿರುವುದಾಗಿ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಮ್ಮ ದೇವಿ ದರ್ಶನಕ್ಕೆಂದು ಪ್ರಯಾಣಿಸುತ್ತಿದ್ದ ಜೀಪ್ ಆಲದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇದರಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುಲಕುಂದ ಗ್ರಾಮದ ನಿವಾಸಿಗಳಾದ ಹನುಮವ್ವ, ದೀಪಾ, ಸವಿತಾ, ಸುಪ್ರೀತಾ, ಮಾರುತಿ ಮತ್ತು ಇಂದ್ರವ್ವ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ದುರ್ದೈವಿಗಳಾಗಿದ್ದಾರೆ.

‘ಹಳೇ ಪಿಂಚಣಿ ಸಾಧ್ಯವಿಲ್ಲ – ಕೆಲಸಕ್ಕೆ ಸೇರುವಾಗಲೇ ಇದಕ್ಕೆ ಒಪ್ಪಿದ್ದೀರಿ’

ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ

‘ಪೌರ ಕಾರ್ಮಿಕರಲ್ಲ, ಪೌರ ನೌಕರರು’ – ರಾಜ್ಯದ 42000 ಪೌರಕಾರ್ಮಿಕ ರನ್ನು ಖಾಯಂಗೊಳಿಸಲು ಕ್ರಮ : ಸಿಎಂ

ಸುದ್ದಿ360 ಬೆಳಗಾವಿ, ಡಿ.28 : ರಾಜ್ಯದಲ್ಲಿ  11133 ಪೌರ ಕಾರ್ಮಿಕರ  ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ : ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ … Read more

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಳಗಾವಿ, ಡಿ. 26 :  ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ  ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ … Read more

ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ

ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ ವೇಳೆ ಹಿಂಬದಿಯಿಂದ ಬೈಕ್ ಮೇಲೆ ಬಂದ  ಆರೋಪಿಗಳು ಈ ದುಶ್ಕೃತ್ಯ ಎಸಗಿದ್ದಾರೆ. ಬೈಕ್ ಚಲನೆಯಲ್ಲಿದ್ದಾಗಲೇ ಗದಗಯ್ಯನ ಕುತ್ತಿಗೆಯ ಭಾಗಕ್ಕೆ ಮಾರಕಾಸ್ತ್ರ ಬೀಸಿದ್ದು, ಕುತ್ತಿಗೆಯ ಬಹುಪಾಲು ತುಂಡರಿಸಿದೆ. ಇದರಿಂದ ಬೈಕ್ ಸಮೇತ ಬಿದ್ದ ಗದಗಯ್ಯ ಸ್ಥಳದಲ್ಲೇ … Read more

error: Content is protected !!