ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ

ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ ಆಯೋಜಿಸಿದಸಿಎಂ ಕಪ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿಬೆಂಗಳೂರು ಗ್ರಾಮಾಂತರ ವಿಭಾಗದಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಶಿವಮೊಗ್ಗದ ಹೆಮ್ಮೆಯ ಮಹಿಳಾ ಬಾಕ್ಸರ್ ಮತ್ತು ಶಿವಮೊಗ್ಗ ದ ಮೊದಲ ಮಹಿಳಾ ಎನ್ಐಎಸ್ ಕೋಚ್ ಆದ ಮೀನಾಕ್ಷಿ 60-63 ಕೆಜಿ ತೂಕದ ವಿಭಾಗದಲ್ಲಿ ಭಾಗವಹಿಸಿತೃತೀಯ ಸ್ಥಾನ ಪಡೆದುಜಿಲ್ಲೆಗೆ ಕೀರ್ತಿ ತಂದಿದ್ದುವಿಜೇತ ಕ್ರೀಡಾಪಟು ಕಳೆದ ಬಾರಿಯ … Read more

ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!?

dussehra-commission-asked-by-the-official-from-the-sarod-giant pt-taranath

ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‍ ವಾದಕ ಪಂ. ರಾಜೀವ ತಾರಾನಾಥ್‍ ಅವರನ್ನು ದಸರಾ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ಸಂಗೀತ ಕಚೇರಿ  ನೀಡುವಂತೆ  ಆಹ್ವಾನಿಸಿರುವ ದಸರಾ ಅಧಿಕಾರಿಗಳು ಕಮಿಷನ್‍ ಬೇಡಿಕೆ ಇಟ್ಟಿರುವುದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ. ಕಾರ್ಯಕ್ರಮ ನೀಡುವಂತೆ ಪಂ. … Read more

ಬಿಸಿಯೂಟ ತಯಾರಕರ ವೇತನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಯಾಗುವವರೆಗೆ ಸುಮ್ಮನೇ ಕೂರುವ ಮಾತೇ ಇಲ್ಲ: ಕಾಂ. ದೇವದಾಸ್

ಸುದ್ದಿ360, ಮೈಸೂರು: ಗ್ಯಾರಂಟಿ ಭರವಸೆ ನೀಡಿದರೂ ಸುಮ್ಮನೆ ಕೂರುವ ಹಾಗಿಲ್ಲ  ಹೋರಾಟ ಅನಿವಾರ್ಯ ಎಂಬುದಾಗಿ ಮೈಸೂರು ಎಐಟಿಯುಸಿ ಜಿಲ್ಲಾಧ್ಯಕ್ಷರಾದ ಕಾಂ. ದೇವದಾಸ್ ಹೇಳಿದರು. ಶನಿವಾರ ಮೈಸೂರಿನ ಎಐಟಿಯುಸಿ ಕಚೇರಿಯಲ್ಲಿ ನಡೆದ ಬಿಸಿಊಟ ತಯಾರಕರ ರಾಜ್ಯ ಸಮಿತಿ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಿಸಿಯೂಟ ತಯಾರಕರಿಗೆ 6000ರೂಪಾಯಿ ವೇತನ ನೀಡುವುದಾಗಿ ಆರನೇ ಗ್ಯಾರಂಟಿಯ ಭರವಸೆ ನೀಡಿತ್ತು, ಕಾಂಗ್ರೆಸ್ ಪಕ್ಷ ಈಗ ರಾಜ್ಯದಲ್ಲಿ ಅಧಿಕಾರದಲ್ಲಿದೆ ಆದರೆ … Read more

ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ  ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ … Read more

ದಶಪಥ ಹೆದ್ದಾರಿ ತರಾತುರಿ ಉದ್ಘಾಟನೆ: ಟೋಲ್ ಸಂಗ್ರಹ ಸಲ್ಲ –  ಸಿದ್ಧು

ಸುದ್ದಿ360 ದಾವಣಗೆರೆ ಮಾ.14: ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಅರೆ ಬರೆಯಾಗಿದೆ. ಸರ್ವಿಸ್ ರಸ್ತೆಗಳೇ ಪೂರ್ಣಗೊಂಡಿಲ್ಲ. ಹೀಗಿರುವಾಗ ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದಶಪಥ ರಸ್ತೆ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಸರ್ವಿಸ್ ರಸ್ತೆಗಳು ನಿರ್ಮಾಣವಾಗಿಲ್ಲ. ಅಲ್ಲಿನ್ನು ಬೈಪಾಸ್, ಹಲವು ಅಂಡರ್ ಪಾಸ್ ಕಾಮಗಾರಿಗಳೂ ಆಗಿಲ್ಲ. ಇದರಿಂದ ಅಲ್ಲಿನ ಸುತ್ತಮುತ್ತಲಿನ ಹಳ್ಳಿಜನರು ಬಹಳಷ್ಟು ತೊಂದರೆಗೆ ಈಡಾಗುತ್ತಾರೆ. … Read more

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ನಡೆಯಲಿದೆ. ಹಿರಿಯ ರಂಗ ಹಾಗೂ ಚಿತ್ರ ಕಲಾವಿದ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆ, ಮೈಸೂರು ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಡಿಪ್ಲೊಮಾ ಪ್ರವೇಶಕ್ಕೆ 16ರಿಂದ 30 ವರ್ಷದೊಳಗಿನ … Read more

‘ಸಿಎಂ ಆಗುವುದು ಡಿಕೆಶಿಯವರ ಬಹಳ ದಿನದ ಕನಸು – ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ’

ಸುದ್ದಿ360,ಮೈಸೂರು, ಜುಲೈ 20: ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು  ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಲಿ’ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ … Read more

ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ಸುರಿವ ಮಳೆಯಲ್ಲಿಯೂ ಚಾಮುಂಡೇಶ್ವರಿ ಅಮ್ಮನ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತ ಸಮೂಹ

ಸುದ್ದಿ360, ಮೈಸೂರು ಜು.15: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಮೂರನೇ ಶುಕ್ರವಾರವಾದ ನಿಮಿತ್ತ  ವಿಶೇಷ ಅಲಂಕಾರ ಮಾಡಲಾಗಿದ್ದು, ಬಿಡುವು ನೀಡದೆ ಸುರಿಯುತ್ತಿರುವ ಮಳೆಯಲ್ಲಿಯೂ ಭಕ್ತರು ಬಂದು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಡಿಯೋ ಸಹಿತವರದಿ:  ಮಹೇಶ್ ಕುಮಾರ್ ಆರ್.

error: Content is protected !!