ಬೇಡಿಕೆ ಈಡೇರಿಕೆಗೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ-ಮನವಿ

ಸುದ್ದಿ360 ದಾವಣಗೆರೆ ಜ.11: ಹಲವಾರು ವರ್ಷಗಳಿಂದ ನಮ್ಮ ಬೇಡಿಕೆಗಳು ಬೇಡಿಕೆಗಳಾಗೆ ಉಳಿದಿವೆ, ನಮ್ಮ ಬೇಡಿಕೆಗಳ ಕುರಿತಾಗಿ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯುಕ್ತರ ನೇತೃತ್ವದಲ್ಲಿ ತಕ್ಷಣ ಜಂಟಿ ಸಭೆ ಕರೆದು ಕ್ರಮ ಕೈಗೊಳ್ಳಬೇಕು ಎಂಬುದಾಗಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಆಗ್ರಹಿಸಿದೆ, ಮೂಲಭೂತ ಸೌಕರ್ಯಗಳೊಂದಿಗೆ ವಸತಿ/ನಿವೇಶನ ರಹಿತರಿಗೆ ವಸತಿ/ನಿವೇಶನ ಕಲ್ಪಿಸಲು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಆವರಣ ತಲುಪಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. … Read more

ದಾವಣಗೆರೆಯಲ್ಲಿ ಸಂಚಾರಿ ನಿಯಮ ಅರಿವು ಮೂಡಿಸುವ ಚಂದದ ಕಲಿಕೆಯ ‘ಟ್ರಾಫಿಕ್ ಅವೇರ್ನೆಸ್ ಪಾರ್ಕ್’ – ನೀವೂ ಒಮ್ಮೆ ಭೇಟಿ ನೀಡಿ…

ಸುದ್ದಿ360 ದಾವಣಗೆರೆ ಜ.11: ರಸ್ತೆ ಮೇಲಿನ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಸ್ತೆಬದಿಯಲ್ಲಿನ ಸಂಚಾರಿ ನಿಯಮಗಳ ಸೂಚನಾ ಫಲಕಗಳ ಬಗ್ಗೆ ವಿದ್ಯಾರ್ಥಿದಿಸೆಯಿಂದಲೇ ಅರಿವು ಮೂಡಿಸಿದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ನಗರದ ನಿಜಲಿಂಗಪ್ಪ ಬಡಾವಣೆಯ  ಶ್ರೀಮತಿ ಗಂಗೂಬಾಯಿ ಹಾನಗಲ್ಲ ಉದ್ಯಾನವನ (ಗಸೆಗಸೆ ಪಾರ್ಕ್)  ದಲ್ಲಿ ನಿರ್ಮಿಸಲಾಗಿದ್ದ ‘‘ಸಂಚಾರ ಜಾಗೃತಿ ಉದ್ಯಾನವನ’ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ 24ಕ್ಕೂ ಹೆಚ್ಚು ಸೂಚನಾ … Read more

ಗೌರವಯುತ ಜೀವನ ನಡೆಸಲು ಬಿಡಿ – ಪಿಂಚಣಿದಾರರ ಆಗ್ರಹ

ಸುದ್ದಿ 360 ದಾವಣಗೆರೆ, ಜ.10:  ನಿವೃತ್ತ ಸರಕಾರಿ ನೌಕರರು ಗೌರವಯುತ ಜೀವನ ನಡೆಸಲು ಅನುಕೂಲವಾಗುವಂತೆ ಪಿಂಚಣಿ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಕೇಂದ್ರ ಸರಕಾರ, ಭವಿಷ್ಯ ನಿಧಿ ಇಲಾಖೆ ತಮಗೆ ಬೇಕಾದಂತೆ ಸುತ್ತೋಲೆ ಹೊರಡಿಸಿ ಪಿಂಚಣಿದಾರರಿಗೆ ತೊಂದರೆ ನೀಡುತ್ತಿವೆ ಎಂದು ಆರೋಪಿಸಿ ಇಂದು ಮಂಗಳವಾರ ಪಿಂಚಣಿದಾರರು ಪ್ರತಿಭಟನೆ ನಡೆಸಿದರು. ನಗರದ ಕೆ.ಬಿ. ಬಡಾವಣೆಯ ಭವಿಷ್ಯ ನಿಧಿ ಕಚೇರಿ ಎದುರು ರಾಷ್ಟ್ರೀಯ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟಿಸಿದ ಪಿಂಚಣಿದಾರರು, ಸಾರಿಗೆ, ದೂರ ಸಂಪರ್ಕ ಸೇರಿ ಸರಕಾರದ … Read more

ನ್ಯಾ.ಸದಾಶಿವ ವರದಿ ಯಥಾವತ್ ಜಾರಿ ಒತ್ತಾಯಿಸಿ ದಸಂಸ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10:  ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಯದೇವ ವೃತ್ತ,  ಗಾಂಧಿ ವೃತ್ತ, ಪಿಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ  ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ದಲಿತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಈ ವೇಳೆ ಮಾತನಾಡಿದ … Read more

ದಾವಣಗೆರೆ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳಿಂದ ‘ವಿ ವಾಂಟ್ ಜಸ್ಟೀಸ್’ ಫಲಕ ಹಿಡಿದು ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10: ಇಲ್ಲಿನ ಡಿಆರ್ ಆರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ನಮಗೆ ಅನ್ಯಾಯವಾಗಿದೆ, ನಮಗೆ ನ್ಯಾಯ ಬೇಕು ಎಂಬ ಫಲಕಗಳೊಂದಿಗೆ ಇಂದು ಪ್ರತಿಭಟನೆ ನಡೆಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಡಿಆರ್ ಆರ್ ಪಾಲಿಟೆಕ್ನಿಕ್ ಕಾಲೇಜು ಆವರಣಗಳು ಪರಸ್ಪರ ಹೊಂದಿಕೊಂಡಿದ್ದು, ಡಿಆರ್‌ಆರ್ ಪಾಲಿಟೆಕ್ನಿಕ್‌ಗೆ ಸೇರಿದ ಜಾಗದಲ್ಲಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಿಸಲು ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟಿಸಿದರು. ರಾಜ್ಯ ಸರಕಾರ ಕಾಲೇಜು ಮತ್ತು … Read more

ಪೋಷಕರನ್ನು ಬಾಲ್ಯದ ದಿನಕ್ಕೆ ಕರೆದೊಯ್ದ ದಾವಣಗೆರೆ ಪಿಬಿವಿ ವಿದ್ಯಾಲಯ

ಸುದ್ದಿ 360 ದಾವಣಗೆರೆ, ಜ.10: ದಿನಾ ಬೆಳಗೆದ್ದು ಮಕ್ಕಳ ಶಾಲೆಯ ಬ್ಯಾಗ್, ಲಂಚ್ ಬ್ಯಾಗ್, ನೀರು ಬಾಟಲ್, ಕರ್ಚಿಪ್, ಮಾಸ್ಕ್ ಹೀಗೆ ಮಕ್ಕಳನ್ನು ಶಾಲೆಗೆ ಸಜ್ಜುಗೊಳಿಸಿ ಶಾಲಾ ಆವರಣಕ್ಕೆ ತಲುಪಿಸಿ ಉಸ್ಸಪ್ಪ ಇವತ್ತಿನ ಅರ್ಧ ಕೆಲಸ ಮುಗೀತು ಎಂದು ನಿಟ್ಟುಸಿರು ಬಿಡುತ್ತಾ ಮನೆ ಕಡೆಗೆ ತೆರಳುತ್ತಿದ್ದ ಪೋಷಕರ ಈ ದಿನ ಕೊಂಚ ವಿಶೇಷವಾಗಿಯೇ ಇತ್ತು. ನಗರದ ದೇವರಾಜ ಅರಸು ಬಡಾವಣೆಯ ಬಿ ಬ್ಲಾಕ್ ನಲ್ಲಿರುವ ದೈವಜ್ಞ ವಿದ್ಯಾಸಂಸ್ಥೆ ಪಿಬಿವಿ ವಿದ್ಯಾಲಯದಲ್ಲಿ ಸೋಮವಾರ ಶಾಲಾ ವಿದ್ಯಾರ್ಥಿಗಳ ಪೋಷಕರಿಗಾಗಿ ಹಲವು … Read more

ಮಹಿಳೆಯರಿಗೆ ಉತ್ತಮ ಸಂದೇಶವಿರುವ ಚಿತ್ರ ‘ವೇದ’ ಪುರುಷರೂ ಸ್ವೀಕರಿಸಿ ಸೈ ಎಂದಿದ್ದಾರೆ – ಶಿವರಾಜ್ ಕುಮಾರ್

ಸುದ್ದಿ360 ದಾವಣಗೆರೆ,ಜ.05 : ವೇದ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಯಶಸ್ಸು ದೊರೆತಿದೆ. ಮಹಿಳೆಯರಿಗೆ ಉತ್ತಮ ಸಂದೇಶ ನೀಡುವ ಚಿತ್ರ ಇದು. ಮಹಿಳೆಯರು ಮಾತ್ರವಲ್ಲದೇ ಪುರುಷರು ಈ ಚಿತ್ರದಲ್ಲಿನ ಸಂದೇಶವನ್ನು ಸ್ವೀಕರಿಸಿದ್ದಾರೆ. ಇಡೀ ಕುಟುಂಬ ಸಮೇತರಾಗಿ ಕುಳಿತು ನೋಡುವಂತಹ ಚಿತ್ರ ಇದಾಗಿದೆ. ಇವು ವೇದ ಚಿತ್ರ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ ಮಾತುಗಳು. ವೇದ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಸಕ್ಸಸ್ ಆದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್, ಚಿತ್ರದ ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ … Read more

ಹರಿಹರ ನಗರದ ಬೀಡಿ ಕಾಲೋನಿ ನಿವಾಸಿಗಳಿಂದ ಹಕ್ಕುಪತ್ರಕ್ಕಾಗಿ ಪ್ರತಿಭಟನೆ

ಸುದ್ದಿ360 ದಾವಣಗೆರೆ ಜ.5: ಕಳೆದ ಹತ್ತು ವರ್ಷಗಳಿಂದ ಬೀಡಿ ಕಾಲೋನಿಯಲ್ಲಿ ವಾಸಿಸುತ್ತಿದ್ದರೂ ನಮಗೆ ಹಕ್ಕುಪತ್ರ ದೊರೆತಿಲ್ಲ. ಇದರಿಂದ ಅಗತ್ಯ ಮೂಲಭೂತ ಸೌಕರ್ಯಗಳೂ ಮರೀಚಿಕೆಯಾಗಿದ್ದು ಕೂಡಲೇ ನ್ಯಾಯ ಒದಗಿಸಿಕೊಡುವಂತೆ ಕೋರಿ ಹರಿಹರ ನಗರದ ಬೀಡಿ ಕಾಲೋನಿಯ ನಿವಾಸಿಗಳು ಜಿಲ್ಲಾಡಳಿತದ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು. ಬಹುಜನ ಸಮಾಜ ಪಾರ್ಟಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅಲ್ಲಿನ ನಿವಾಸಿಗಳು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಡಿ.ಹನುಮಂತಪ್ಪ, ಹರಿಹರದ ಬೀಡಿ ಕಾಲೋನಿಯಲ್ಲಿ ಕಳೆದ … Read more

ದಾವಣಗೆರೆಯ ಯುವ ಮತದಾರರು ಎಷ್ಟು? ಕ್ಷೇತ್ರವಾರು ಮತದಾರರು ಎಷ್ಟಿದ್ದಾರೆ – ಲೇಟೆಸ್ಟ್ ಮಾಹಿತಿ

ಸುದ್ದಿ360 ದಾವಣಗೆರೆ ಜ.5: ಜಿಲ್ಲೆಯಲ್ಲಿ ಪರಿಷ್ಕೃತ ಮತದಾರರ ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 14,05,710 ಮತದಾರರಿದ್ದು, 7,05,233 ಪುರುಷರು, 7,00,357 ಮಹಿಳೆಯರು ಸೇರಿ ಒಟ್ಟು 14,05,710 ಮತದಾರರಿದ್ದಾರೆ. ಈ ಹಿಂದೆ ನ.9ರಂದು ಪ್ರಕಟಿಸಿದ್ದ ಕರಡು ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 13,88,343 ಮತದಾರರಿದ್ದರು, ಪರಿಷ್ಕರಣೆ ಬಳಿಕ ಅಂತಿಮ ಪಟ್ಟಿಯಲ್ಲಿ 17,276 ಮತದಾರರ ಹೆಚ್ಚಳವಾಗಿದೆ. ಏಳು ವಿಧಾನಸಭೆ ಕ್ಷೇತ್ರಗಳಲ್ಲಿ 1683 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಒಬ್ಬರಂತೆ ಅಧಿಕಾರಿ (ಬಿಎಲ್‌ಒ) ಗಳನ್ನು ನೇಮಿಸಲಾಗಿದೆ. ಇವರೊಂದಿಗೆ 166 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ … Read more

2023ರ ಜ.1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ

ಸುದ್ದಿ360 ದಾವಣಗೆರೆ ಜ.5: ಚುನಾವಣಾ ಆಯೋಗದ ಆದೇಶದಂತೆ ಜಿಲ್ಲೆಯಲ್ಲಿ ಹೊಸ ಮತದಾರರ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದ್ದು, 2023ರ ಜ.1ಕ್ಕೆ 18 ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಜಿಲ್ಲೆಯ ಎಲ್ಲ ಏಳು ವಿಧಾನಸಭೆ ಕ್ಷೇತ್ರಗಳ ಮತದಾರರ ಪರಿಷ್ಕೃತ ಅಂತಿಮ ಪಟ್ಟಿ ಸಿದ್ಧವಾಗಿದೆ. ಆದರೆ, ಈಗಲೂ ಹೊಸ ಮತದಾರರ ಹೆಸರು ಸೇರಿಸಲು ಅವಕಾಶ ಇರುವುದಾಗಿ … Read more

error: Content is protected !!