ಆ.20, 21 ಸಂತ ಪೌಲರ ಶಾಲೆ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಆ.19: ಸ್ವಾತಂತ್ರ್ಯ ಪೂರ್ವದಿಂದಲೂ ಶಿಕ್ಷಣ ಸೇವೆ ಸಲ್ಲಿಸುತ್ತಾ ಬಂದಿರುವ ಖ್ಯಾತಿಯನ್ನು ಹೊಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭ ಆ.20, 21ರಂದು ನಡೆಯಲಿರುವುದಾಗಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಚರ್ಚ್ ರಸ್ತೆಯಲ್ಲಿರುವ ಸಂತ ಪೌಲರ ಶಾಲೆ ಆವರಣದಲ್ಲಿ ಆ.21ರಂದು ಸಂಜೆ 5 ಗಂಟೆಗೆ ನಡೆಯುವ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ … Read more

ದಾವಣಗೆರೆ ಪಿಬಿವಿ ವಿದ್ಯಾಲಯದಲ್ಲಿ ಕೃಷ್ಣಜನ್ಮಾಷ್ಟಮಿ – ಚಿಣ್ಣರ ಕಲರವ

ಸುದ್ದಿ360 ದಾವಣಗೆರೆ, ಆ.19: ನಗರದ ದೇವರಾಜ ಅರಸು ಬಡಾವಣೆ ‘ಸಿ’ ಬ್ಲಾಕ್ ನಲ್ಲಿರುವ ದೈವಜ್ಞ ವಿದ್ಯಾಸಂಸ್ಥೆ, ಪಿಬಿವಿ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಹಾಗೂ ಸಂಸ್ಕೃತ ಉಪನ್ಯಾಸಕರಾದ ಕೃಷ್ಣರಾಜಾ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶ್ರೀ ಕೃಷ್ಣನ ಬಾಲ ಲೀಲೆಗಳು ಮತ್ತು ಕೃಷ್ಣನ ಅವತಾರ ಮತ್ತು  ಉಡುಗೆಯ ಮಹತ್ವ ಕುರಿತು ಪ್ರವಚನ ನೀಡಿದರು. ಶಾಲೆಯ ಮಕ್ಕಳು ಕೃಷ್ಣ-ರಾಧೆಯರ ವೇಷಭೂಷಣದಲ್ಲಿ ಕಂಗೊಳಿಸಿದರು. ಕೃಷ್ಣನ ಲೀಲೆಯನ್ನು ಸಾರುವ ವಿವಿಧ … Read more

ಗುರು ಅನ್ನದಾನ ಮಹಾಶಿವಯೋಗಿಗಳ ಮತ್ತು ಡಾ. ಅಭಿನವ ಅನ್ನದಾನ ಶ್ರೀಗಳ ಪುಣ್ಯಾರಾಧನೆ – 249ನೇ ಶಿವಾನುಭವ ಸಂಪದ

ಸುದ್ದಿ360 ದಾವಣಗೆರೆ, ಆ.18: ಗುರು ಅನ್ನದಾನ ಮಹಾಶಿವಯೋಗಿಗಳವರ 45ನೇ ಪುಣ್ಯಾರಾಧನೆ ಮತ್ತು ಕಾಯಕಯೋಗಿ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯಾರಾಧನೆಯನ್ನು ಇದೇ ಆಗಸ್ಟ್ 20 ಮತ್ತು 21ರಂದು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶ್ರೀ ಅನ್ನದಾನೇಶ್ವರ ಸಾರ್ವಜನಿಕ ಸೇವಾ ಟ್ರಸ್ಟ್ ಅಧ್ಯಕ್ಷ ಅಥಣಿ ವೀರಣ್ಣ ಮಾತನಾಡಿ, 21ರ ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಶ್ರೀ ದೇವರಾಜ ಅರಸು ಬಡಾವಣೆಯ ಬಿ ಬ್ಲಾಕ್ ನಲ್ಲಿರುವ ಅನ್ನದಾನೇಶ್ವರ ಶಾಖಾಮಠದಲ್ಲಿ ಉಭಯ ಗುರುಗಳ … Read more

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ಜಿಎಂಐಟಿ ಕಾಲೇಜಿನ ಎರಡು ತಂಡಗಳು

ಸುದ್ದಿ360 ದಾವಣಗೆರೆ ಆ.17: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ನಗರದ ಜಿಎಂಐಟಿ ಕಾಲೇಜಿನ ಎರಡು ತಂಡಗಳು ಆಯ್ಕೆಯಾಗಿವೆ. ಇದೆ ಆಗಸ್ಟ್ 25 ಮತ್ತು 26 ರಂದು ಮಹಾರಾಷ್ಟ್ರದಲ್ಲಿ ನಡೆಯುವ ಗ್ರಾಂಡ್ ಫಿನಾಲೆಯಲ್ಲಿ ತಂಡಗಳು ಭಾಗವಹಿಸಲಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 12 ತಂಡಗಳು ಮೊದಲನೇ ಸುತ್ತಿನಲ್ಲಿ ಭಾಗವಹಿಸಿ ಕೊನೆಗೆ ಎರಡು ಅತ್ಯುತ್ತಮ ತಂಡಗಳು ಗ್ರಾಂಡ್ ಫಿನಾಲೆಗೆ ಆಯ್ಕೆಯಾದವು ಎಂದು ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕರು ಮತ್ತು ಸ್ಮಾರ್ಟ್ … Read more

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ ಕಾರ್ಯಕ್ರಮ

ಸುದ್ದಿ360 ದಾವಣಗೆರೆ ಆ.17: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆ.18ರ ಬೆಳಿಗ್ಗೆ 10.30ಕ್ಕೆ ನಗರದ ಶ್ರೀಡಿ.ದೇವರಾಜ ಅರಸು ಬಡಾವಣೆಯ ಸಿ ಬ್ಲಾಕಿನಲ್ಲಿ ಇರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವಧ್ಯಾನ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಾಕುಮಾರಿ ಲೀಲಾಜಿ ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪಿತ ಬ್ರಹ್ಮಾಕುಮಾರಿ, ಈಶ್ವರೀಯ ವಿಶ್ವವಿದ್ಯಾಲಯದ ಹುಬ್ಬಳ್ಳಿ ವಲಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ನಿರ್ಮಲಾಜಿ ಸಾನಿಧ್ಯ ವಹಿಸುವರು. ದಾವಣಗೆರೆಯ ಬ್ರಹ್ಮಾ … Read more

ಎಫ್ ಆರ್ ಪಿ ದರ ಪರಿಷ್ಕರಿಸುವಂತೆ ಆಗ್ರಹಿಸಿ,  ಕಬ್ಬುಬೆಳೆಗಾರರಿಂದ ರಸ್ತೆ ತಡೆ – ಮನವಿ

ಸುದ್ದಿ360 ದಾವಣಗೆರೆ, ಆ.12: ಕೇಂದ್ರ ಸರ್ಕಾರ ಕಬ್ಬಿಗೆ ಘೋಷಿಸಿರುವ ಎಫ್ ಆರ್ ಪಿ ದರ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಷ್ಕರಿಸುವಂತೆ ಆಗ್ರಹಿಸಿದ ಕಬ್ಬುಬೆಳೆಗಾರರು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್ ನೇತೃತ್ವದಲ್ಲಿ ಇಂದು ರಸ್ತೆ ತಡೆ ನಡೆಸಿದರು. ದಾವಣಗೆರೆ ಜಿಲ್ಲಾ ಪಂಚಾಯತಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಬ್ಬು ಬೆಳೆಗಾರರು ತಸ್ತೆ ತಡೆ ನಡೆಸಿದರು. ಈ ವೇಳೆ ಮಾತನಾಡಿದ ತೇಜಸ್ವಿ ವಿ. ಪಟೇಲ್ ಕಳೆದ ಸಾಲಿನಲ್ಲಿ ರೂ. 2900  ಇದ್ದ ಎಫ್‌ಆರ್‌ಪಿಯನ್ನು 3050ಕ್ಕೆ … Read more

ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ

ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮುಸ್ತಕ್ ಅಹಮದ್ ಶೇಕ್ ಕರೆ ಸುದ್ದಿ360 ದಾವಣಗೆರೆ, ಆ. 10: ನಗರದ ನಿಂಚನ ಪಬ್ಲಿಕ್ ಸ್ಕೂಲ್ ನಲ್ಲಿ ಇತ್ತಿಚೆಗೆ ನಡೆದ 2022-23 ನೇ ಸಾಲಿನ ವಿದ್ಯಾರ್ಥಿಗಳಿಗೆ ಶಾಲಾ ಮಂತ್ರಿ ಮಂಡಲ ರಚನೆ ಗೆ ಚುನಾವಣೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಮುಸ್ತಕ್ ಅಹಮದ್ ಶೇಕ್ ಮುಖ್ಯ ಅತಿಥಿ ಗಳಾಗಿ ಭಾಗವಾಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಗುಣಬೆಳಸಿಕೊಳ್ಳಬೇಕು ಮತ್ತು ಸತತ … Read more

ದಾವಣಗೆರೆ: ಖೋಟಾ ನೋಟು ಜಾಲ ಪತ್ತೆ – ಇಬ್ಬರ ಬಂಧನ

ಸುದ್ದಿ360 ದಾವಣಗೆರೆ, ಆ. 10: ನಗರದಲ್ಲಿ ಖೋಟಾ ನೋಟು ಮುದ್ರಣ ಮತ್ತು ಚಲಾವಣೆ ಮಾಡುತ್ತಿದ್ದ ಇಬ್ಬರನ್ನು ದಾವಣಗೆರೆ ಜಿಲ್ಲಾ ಡಿಸಿಆರ್ ಬಿ ಪೊಲೀಸರು ಪೊಲೀಸರು ಬಂಧಿಸಿ, ಆರೋಪಿಗಳಿಂದ 1,20,700 ಮುಖಬೆಲೆಯ ಖೋಟಾ ನೋಟುಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ.ರಿಷ್ಯಂತ್, ಇಂದು (ಆ.10) ದಾವಣಗೆರೆಯ ಯಲ್ಲಮ್ಮನಗರ 4ನೇ ಮೇನ್ 6ನೇ ಕ್ರಾಸ್ ತೆಲಗಿ ಶೇಖರಪ್ಪನವರ ಮನೆ ಸಮೀಪ ಕಲರ್ ಜೆರಾಕ್ಸ್ ಮಿಷಿನ್‌ನಿಂದ ಜೆರಾಕ್ಸ್ ಮಾಡಿದ ಖೋಟಾ ನೋಟುಗಳನ್ನು ತೆಗೆದುಕೊಂಡು ಚಲಾವಣೆ … Read more

ಆ.11ಕ್ಕೆ ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ, ಆ. 10: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಬೈಕ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಜಗದೀಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆಗಸ್ಟ್ 11ರ ಬೆಳಗ್ಗೆ 10ಕ್ಕೆ ನಗರದ ಬೇತೂರು ರಸ್ತೆಯಲ್ಲಿರುವ ವೆಂಕಟೇಶ್ವರ ವೃತ್ತದಿಂದ ಬೈಕ್ ರ್ಯಾಲಿ ಆರಂಭವಾಗಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್‌ ಹನಗವಾಡಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ. ಸಂಸದರು, ಶಾಸಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದು, ತಿರಂಗದೊಂದಿಗೆ ಹೊರಡುವ … Read more

ಜಿಎಂಎಸ್ ಅಕ್ಯಾಡೆಮಿ: ಪದವೀಧರರ ದಿನಾಚರಣೆ – ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಕಲಿಯುವ ದಿನ ಬಂಗಾರದ ದಿನ: ಡಾ.ಕೆ. ಶಿವಶಂಕರ್ ಸುದ್ದಿ360 ದಾವಣಗೆರೆ, ಆ. 10: ವಿದ್ಯಾರ್ಥಿಗಳು ವಿನೂತನ ಶಿಕ್ಷಣದೊಂದಿಗೆ ಕ್ರಿಯಾಶೀಲರಾಗಿ ದೇಶಕ್ಕೆ ಗೌರವ ತಂದುಕೊಡುವ ಮಹಾ ಚೇತನವಾಗಿ ಬೆಳೆಯಬೇಕು. ಶಿಸ್ತು ಸಂಯಮ ಪರಿಶ್ರಮವೇ ಅವರ ಉನ್ನತ ದರ್ಜೆಗೆ ಕೊಂಡೊಯ್ಯುತ್ತದೆ ಎಂದು ಡಾ.ಕೆ. ಶಿವಶಂಕರ್ ಕುಲ ಸಚಿವರು, ಮೌಲ್ಯಮಾಪನ ವಿಭಾಗ ದಾ. ವಿ. ವಿ. ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ನಗರದ ಜಿ.ಎಮ್.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮೂರು ವರ್ಷದ ಪದವಿಧರ ದಿನಾಚರಣೆ ಮತ್ತು ಅಲ್ಯೂಮಿನಿ ಕಾರ್ಯಕ್ರಮದಲ್ಲಿ … Read more

error: Content is protected !!