ಜು.20ರಿಂದ 5 ದಿನಗಳ ಯೋಗ ಜೀವನ ದರ್ಶನ-2022

ಸುದ್ದಿ360, ಬೆಂಗಳೂರು, ಜು.18: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ ಪತಂಜಲಿ ಯೋಗ ಫೌಂಡೇಶನ್ ವತಿಯಿಂದ ಜುಲೈ, 20 ರಿಂದ 24 ರವರೆಗೆ ನಗರದ 8 ಕಡೆಗಳಲ್ಲಿ ಯೋಗ ಜೀವನ ದರ್ಶನ-2022 ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಫೌಂಡೇಶನ್ನಿನ ಸಂಚಾಲಕ ಟಿ.ವಿ.ವಿ ಸತ್ಯನಾರಾಯಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಯೋಗ ವಿದ್ಯೆಯ ಮುಖಾಂತರ ಸಮಾಜವನ್ನು ಪುಷ್ಟೀಕರಿಸುವ ಕಾರ್ಯವನ್ನು ಮಾಡುತ್ತಿರುವ ಸಂಘಟನೆಯಾಗಿದೆ.  ಅಂತಾರಾಷ್ಟ್ರ-ರಾಷ್ಟ್ರ-ರಾಜ್ಯ ಮಟ್ಟದ ಯೋಗ ಶಿಕ್ಷಕರ ಪ್ರಾಂತ … Read more

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ವ್ಯಕ್ತಿ ಪೂಜೆಯಲ್ಲ ಎಂದು  ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಸೋಮವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ … Read more

ಬಿಜೆಪಿಯವರಿಗೆ ಅಭಿವೃದ್ಧಿಯ ಇಚ್ಛಾಶಕ್ತಿ ಇಲ್ಲ – ಎಸ್ ಎಸ್ ಮಲ್ಲಿಕಾರ್ಜುನ್ ಆರೋಪ

ಸುದ್ದಿ360, ದಾವಣಗೆರೆ, ಜು.18:  ಯಾವುದೇ ಕಾಮಗಾರಿಗಳು ಪರಿಪೂರ್ಣಗೊಳ್ಳಲು ಕ್ರಮಬದ್ಧವಾದ ಯೋಜನೆ ಇರಬೇಕು. ಆದರೆ ಬಿಜೆಪಿ ಜನಪ್ರತಿನಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇಚ್ಛಾಶಕ್ತಿ ಇಲ್ಲ ಎಂದು ನಗರದಲ್ಲಿನ ಕಾಮಗಾರಿಗಳ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್  ಆರೋಪಿಸಿದರು. ನಗರದ ಹೊರವಲಯದ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಸೋಮವಾರ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕುಂದವಾಡ ಕೆರೆ ಏರಿ ಅಭಿವೃದ್ಧಿ ಕುಂಟುತ್ತಾ ಸಾಗಿದ್ದು, ನಗರದೆಲ್ಲೆಡೆ ಕಳಪೆ ಕಾಮಗಾರಿಗಳು … Read more

ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ತೇರಿನ ಯಶಸ್ವೀ ಸಂಚಾರ – ಚಿತ್ರದುರ್ಗಕ್ಕೆ ಮುಂದುವರೆದ ಸಂಚಾರ

ಸುದ್ದಿ360, ದಾವಣಗೆರೆ, ಜು.18: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಕನ್ನಡ ತೇರು ಭಾನುವಾರದಂದು ದಾವಣಗೆರೆ ಜಿಲ್ಲೆಯ ವಿವಿಧ ಭಾಗದಲ್ಲಿ ಸಂಚರಿಸಿತು. ಹೆಬ್ಬಾಳು ಗ್ರಾಮದಲ್ಲಿ ಬೆಳಗ್ಗೆ ಶ್ರೀ ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳಿಂದ ಕನ್ನಡತೇರಿನ ಪೂಜೆ ಹಾಗೂ ಸ್ವಾಗತದೊಂದಿಗೆ ಪ್ರಾರಂಭವಾದ ಕನ್ನಡ ತೇರು, ಗ್ರಾಮದ ವಿದ್ಯಾರ್ಥಿಗಳು, ಯುವಕರು ಹಾಗೂ ಗ್ರಾಮಸ್ಥರಿಗೆ ಸ್ವಾತಂತ್ರ್ಯ ಹೋರಾಟಗಾರರ, ದೇಶಕ್ಕಾಗಿ ತಮ್ಮ ಜೀವನವನ್ನೇ  ಮುಡಿಪಾಗಿಟ್ಟ ವೀರಯೋಧರ ಕುರಿತಾದ ಸಾಕ್ಟ್ಯಚಿತ್ರವನ್ನು ಪ್ರದರ್ಶಿಸಲಾಯಿತು. ನಂತರ ಸಂತೇಬೆನ್ನೂರು ಗ್ರಾಮಸ್ಥರು ಕಹಳೆ ಸದ್ದಿನೊಂದಿಗೆ ಕನ್ನಡ ತೇರಿಗೆ … Read more

ಆಹಾರ ಧಾನ್ಯಗಳ ಮೇಲಿನ ಜಿಎಸ್ ಟಿ ವಿರೋಧಿಸಿ ಕರೆದ ಬಂದ್ ಗೆ ಅಭೂತಪೂರ್ವ ಸಹಕಾರ: ಕೋಗುಂಡಿ ಬಕ್ಕೇಶಪ್ಪ

ಸುದ್ದಿ360, ದಾವಣಗೆರೆ, ಜು.16: ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ 5% ಜಿ ಎಸ್ ಟಿ ವಿರೋಧಿಸಿ ನಡೆಸಿದ ಬಂದ್ ಗೆ ಅಭೂತ ಪೂರ್ವ ಸಹಕಾರ ನೀಡಿದ  ಎಲ್ಲರಿಗೂ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಇತರ ಆಹಾರ ಧಾನ್ಯಗಳ ವರ್ತಕರು ವಾಣಿಜ್ಯ ಸಂಸ್ಥೆಗಳು ಚೌಕಿಪೇಟೆ ವರ್ತಕರು ದಲಾಲರು ಮೆಕ್ಕೆಜೋಳದ ವರ್ತಕರು ನಮ್ಮೊಂದಿಗೆ ಸಹಕರಿಸುವ ಮೂಲಕ ದಾವಣಗೆರೆ ಇತಿಹಾಸದಲ್ಲೇ ಅಭೂತ ಪೂರ್ವವಾಗಿ ಬಂದ್ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೋರಾಟ ಮಾಡಲು … Read more

ಮಳೆಯನ್ನು ಲೆಕ್ಕಿಸದೆ ಸಾಗಿದ ಡ್ರಗ್ಸ್ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾ

ಸುದ್ದಿ360 ದಾವಣಗೆರೆ, ಜು.16: ದೊಡ್ಡ ಸಾಮಾಜಿಕ ಪಿಡುಗಾಗಿ ಬೆಳೆಯುತ್ತ ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ಸ್ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಬೆಣ್ಣೆನಗರಿಯಲ್ಲಿ ಶನಿವಾರ ಜರುಗಿತು. ವಿಜಯ ಕರ್ನಾಟಕ ದಿನಪತ್ರಿಕೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ನಗರದ  ಗುಂಡಿ ಚೌಲ್ಟ್ರಿ ವೃತ್ತದಲ್ಲಿ ಡಿಸಿ ಶಿವಾನಂದ ಕಾಪಾಶಿ ‘ಮಾದಕ ವಸ್ತುಗಳ ವಿರುದ್ಧದ ಹೋರಾಟಕ್ಕೆ ಪೊಲೀಸರಿಗೆ ಸಹಕಾರ ನೀಡಿ’ ಎಂಬ ಘೋಷವಾಕ್ಯದ ಪ್ಲೇ ಕಾರ್ಡ್‌ನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಕಾಲ್ನಡಿಗೆ ಜಾಥಾಗೆ … Read more

ಅಹಾರ ಧಾನ್ಯಗಳ ಮೇಲಿನ ಜಿಎಸ್ಟಿ ಹಿಂತೆಗೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360,ದಾವಣಗೆರೆ ಜು.15: ಜಿಲ್ಲಾ ಅಕ್ಕಿಗಿರಣಿ ಮಾಲೀಕರ ಸಂಘ, ಆಹಾರ ಧಾನ್ಯಗಳ ವರ್ತಕ ಸಂಘ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5 ಜಿಎಸ್ ಟಿ ಹಿಂದಕ್ಕೆ ಪಡೆಯುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪಮಾತನಾಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5ರಷ್ಟು ಜಿಎಸ್ ಟಿ ವಿಧಿಸುತ್ತಿದೆ. ಈ ಬಗ್ಗೆ … Read more

ಜು.17ಕ್ಕೆ ಅಭಿನಂದನಾ ಸಮಾರಂಭ

ಸುದ್ದಿ360, ದಾವಣಗೆರೆ, ಜು.16: ನಗರದ ನೂತನ ಕಾಲೇಜು ರಸ್ತೆಯ ಸವಿತಾ ಹೋಟೆಲ್ ಬಳಿ ಇರುವ ನಿರ್ವರ್ಣ ಆರ್ಟ್ ಗ್ಯಾಲರಿಯಲ್ಲಿ ಜು.17ರ ಬೆಳಗ್ಗೆ 10.30ಕ್ಕೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಫೈಜ್ನಟ್ರಾಜ್‌ರ ಸಾಹಿತ್ಯ ಕೃತಿಗಳ ಅವಲೋಕನ ಮತ್ತು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಸಾಹಿತ್ಯ ಪರಿಷತ್ತು ಮತ್ತು ಕಾವ್ಯ ಮಂಡಳ ವತಿಯಿಂದ ನಡೆಯುವ ಕಾರ್ಯಕ್ರಮಕ್ಕೆ ಡಾ. ಆನಂದ್ ಋಗ್ವೇದಿ ಚಾಲನೆ ನೀಡುವರು. ಬಾ.ಮ. ಬಸವರಾಜಯ್ಯ ಅಧ್ಯಕ್ಷತೆ ವಹಿಸಲಿದ್ದು, ಕಥೆಗಳ ಕುರಿತು ಡಾ.ಜಿ. ಕಾವ್ಯಶ್ರೀ, ಕಾವ್ಯ ಕುರಿತು ಮಲ್ಲಿಕಾರ್ಜುನ … Read more

ಸನ್ಮಾನ ಎನ್ನುವುದು ಶಿಕ್ಷಕರಿಗೆ  ದೊಡ್ಡ ಬಹುಮಾನ: ಮುಖ್ಯಶಿಕ್ಷಕ ದೇವೇಂದ್ರಪ್ಪ ಅಭಿಮತ

ಸುದ್ದಿ360, ದಾವಣಗೆರೆ, ಜು.16: ಶಿಕ್ಷಕನಾದವನಿಗೆ ಸಮಾಜ ಅವನ ಸೇವೆಯನ್ನು ಗುರುತಿಸಿ ಸನ್ಮಾನಿಸಿದರೆ ಅದರಷ್ಟು ಹೆಮ್ಮೆ ತರುವ ವಿಚಾರ ಇನ್ನೊಂದಿಲ್ಲ. ಸನ್ಮಾನ ಎಂಬುದು ಶಿಕ್ಷಕರ ಪಾಲಿಗೆ ದೊಡ್ಡ ಬಹುಮಾನದಂತೆ ಎಂದು ಶಾಮನೂರು ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮುಖ್ಯಶಿಕ್ಷಕ ದೇವೇಂದ್ರಪ್ಪ ಹೇಳಿದರು. ದಾವಣಗೆರೆ ಜಿಲ್ಲಾ ಸಂಸ್ಕಾರ ಭಾರತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಶಿಕ್ಷಕರನ್ನು ಗೌರವಿಸಿದರೆ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರೋತ್ಸಾಹದಾಯಕವಾಗುತ್ತದೆ. ತನ್ನನ್ನು ಪ್ರೀತಿಸುವ ವ್ಯಕ್ತಿಗಳಿದ್ದಾರೆ ಎಂದರೆ ಶಿಕ್ಷಕರಿಗೆ ನವಚೈತನ್ಯ ಮೂಡುತ್ತದೆ. … Read more

ಗೊಲ್ಲರಹಳ್ಳಿಯಲ್ಲಿ ಸಂಭ್ರಮದ ಅಜ್ಜಿ ಹಬ್ಬ

ಸುದ್ದಿ360, ದಾವಣಗೆರೆ, ಜು.16: ಜಿಲ್ಲೆಯಮಾಯಕೊಂಡ ವಿಧಾನಸಭಾ ಕ್ಷೇತ್ರದ ಅಣಜಿ ಬಳಿಯ ಗೊಲ್ಲರಹಳ್ಳಿ ಗ್ರಾಮದಲ್ಲಿ ಸಂಭ್ರಮದಿಂದ ಅಜ್ಜಿ ಹಬ್ಬವನ್ನು ಆಚರಿಸಲಾಯಿತು. ಎಂದಿನಂತೆ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಈ ಹಬ್ಬ ಆಚರಿಸಲಾಯಿತು. ಅಜ್ಜಿಹಬ್ಬ ಬಂತೆಂದರೆ, ರೈತರ ಮೊಗದಲ್ಲಿ ಒಂದು ರೀತಿಯ ಮಂದಹಾಸ. ಈ ಹಬ್ಬ ಬರುವುದರೊಳಗೆ ರೈತರು ತಮ್ಮ ಬಿತ್ತನೆ ಕಾರ್ಯಗಳನ್ನು ಮುಗಿಸಿ, ಬೆಳೆಗಳು ಸಮೃದ್ಧವಾಗಿ ಬರಲೆಂದು ದೇವಿಯನ್ನು ಆರಾಧಿಸುತ್ತಾರೆ. ಮನೆಗಳಲ್ಲಿನ ದನ-ಕರುಗಳು ಚೆನ್ನಾಗಿರಲಿ, ರೈತರ ಆರೋಗ್ಯ ವೃದ್ಧಿಯಾಗಿ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲೆಂದು ಹಾಗೂ ಸಣ್ಣ ಮಕ್ಕಳ … Read more

error: Content is protected !!