ಜಲಸಿರಿ ಯೋಜನಾ ಅನುಷ್ಠಾನ ಸಭೆ

ಸುದ್ದಿ360, ದಾವಣಗೆರೆ, ಜು.15: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಜಲಸಿರಿ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ನೀರು ಸರಬರಾಜು ಹಾಗೂ ನಿರಂತರ ನೀರು ಸರಬರಾಜು ಕಾಮಗಾರಿಯ ಪ್ರಗತಿ ಪರಿಶೀಲನಾ ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಜುಲೈ.15 ರಂದು ನಡೆಯಲಿದೆ. ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಜಿ.ಎಂ ಸಿದ್ದೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕೆ.ಯು.ಐ.ಡಿ.ಎಫ್.ಸಿ ಬೆಂಗಳೂರು, ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಕಚೇರಿಯ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ … Read more

ಜು.15 – ವಿಶ್ವ ಜನಸಂಖ್ಯಾ ದಿನಾಚರಣೆ

ಸುದ್ದಿ360, ದಾವಣಗೆರೆ, ಜು.15: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಇವರ ಸಂಯಕ್ತಾಶ್ರಯದಲ್ಲಿ “ವಿಶ್ವ ಜನಸಂಖ್ಯಾ ದಿನಾಚರಣೆ-2022” ರ “ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ, ಉನ್ನತಿಯ ಹೊಸ ಅಧ್ಯಾಯ ಬರೆಯೋಣ” ಎಂಬ ಘೋಷಣೆಯೊಂದಿಗೆ ಜು.15 ರ ಶುಕ್ರವಾರ ದಂದು ಬೆ.10.30ಕ್ಕೆ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಬೆ.09 ಗಂಟೆಗೆ ಸಿ.ಜಿ. ಆಸ್ಪತ್ರೆ ಆವರಣದಿಂದ ಗುಂಡಿ … Read more

ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಎಸ್ ಟಿ ವೀರೇಶ್ ಜನ್ಮದಿನಾಚರಣೆ

ಸುದ್ದಿ360, ದಾವಣಗೆರೆ, ಜು.14: ನಗರದ ಕೆ. ಬಿ.‌ ಬಡಾವಣೆಯ ಒಂದನೇ ಮುಖ್ಯ‌ ರಸ್ತೆಯ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಹಾಗೂ ಹಾಲಿ‌ ಸದಸ್ಯ ಎಸ್. ಟಿ. ವೀರೇಶ್ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ವೇಳೆ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ನ ಮಾಲೀಕರಾದ ನಾಗಭೂಷಣ್ ವಾಣಿ, ಡೈಮಂಡ್ ಮಂಜುನಾಥ್, ಎಸ್. ರವೀಂದ್ರ ಮೊಯ್ಲಿ, ಬಿಜೆಪಿ ಯುವ ಮುಖಂಡ ಶ್ರೀನಿವಾಸ್,  ನಾಗರಾಜ್ ಬ್ರಷ್ ಮ್ಯಾನ್, … Read more

ಹರಿಹರ ಅಭಿವೃದ್ಧಿಗಾಗಿ ಅನುದಾನ ನೀಡಲು ಬಿಎಸ್ ಪಿ ಆಗ್ರಹ

ಸುದ್ದಿ360, ದಾವಣಗೆರೆ, ಜು.14: ಹರಿಹರ ತಾಲ್ಲೂಕಿನ ಅಭಿವೃದ್ಧಿಯ ವಿಚಾರವಾಗಿ ಉಸ್ತುವಾರಿ ಸಚಿವರಿಗೆ ಮನವಿ ಕೊಡಲು ಹೋದಾಗ ಸೂಕ್ತ ಸ್ಪಂದನೆ ವ್ಯಕ್ತಪಡಿಸದೇ ಹೋದದ್ದು ಖಂಡನೀಯ. ಇಂತಹ ಸಚಿವರನ್ನು ಬದಲಿಸಬೇಕು. ಅಲ್ಲದೇ ಹರಿಹರ ತಾಲೂಕಿನ ಅಭಿವೃದ್ಧಿಗೆ ತಕ್ಷಣವೇ ಸ್ಪಂದಿಸುವ ಮೂಲಕ ಅನುದಾನ ಬಿಡುಗಡೆ ಮಾಡುವಂತೆ ಬಿ ಎಸ್ ಪಿ ಪಕ್ಷ ದ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಒಂದು ವಾರದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ … Read more

ಜು.15ಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೃಹತ್ ಸಮ್ಮೇಳನ

ಸುದ್ದಿ360, ದಾವಣಗೆರೆ, ಜು.14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೃಹತ್ ಸಮ್ಮೇಳನವನ್ನು ಜು.15ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕೂಟದ ರಾಜಾಧ್ಯಕ್ಷ ಆರ್.ಚಂದ್ರಶೇಖರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ಸಾರಿಗೆ ಸಂಸ್ಥೆಗಳ ಅಭಿವೃದ್ಧಿ ಹಾಗೂ ನೌಕರರ ಹಿತಚಿಂತನಾ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ, … Read more

ಕಾಂಗ್ರೆಸ್ನಿಂದ ಕ್ಷುಲ್ಲಕ ರಾಜಕಾರಣ: ಮೇಯರ್ ಜಯಮ್ಮ ಗೋಪಿನಾಯ್ಕ ಹೇಳಿಕೆ

ಸುದ್ದಿ360, ದಾವಣಗೆರೆ, ಜು.14: ಕಾಂಗ್ರೆಸ್ ನವರು ಕ್ಷುಲ್ಲಕ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ. ನಾನು ಕಛೇರಿಗೆ ಬರುತ್ತೇನೊ ಇಲ್ಲವೊ ಎಂಬುದನ್ನು ತಿಳಿಯಲು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಲಿ, ಇಲ್ಲವೇ ನಾನು ಕಛೇರಿಗೆ ಬಂದು ಹೋಗುವುದನ್ನು ಗಮನಿಸಲು ಯಾರಾನ್ನಾದರು ನೇಮಕ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದವರ ಆರೋಪಕ್ಕೆ ಮಹನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಕಟುವಾಗಿ ಪ್ರತಿಕ್ರಿಯಿಸಿದರು. ಪಾಲಿಕೆ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಸದಸ್ಯರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಸಾಮಾನ್ಯ ಕುಟುಂಬದ ದಲಿತ ಮಹಿಳೆಯೊಬ್ಬಳು ಮೇಯರ್ ಸ್ಥಾನ … Read more

ವಿಭಿನ್ನ ಸಾಮರ್ಥ್ಯದ ಬಾಲಕಿ ಮೊಗದಲ್ಲಿ ಮಂದಹಾಸಕ್ಕೆ ಕಾರಣರಾದ  ಐಜಿಪಿ

ಸುದ್ದಿ360, ದಾವಣಗೆರೆ, ಜು.14: ಪೊಲೀಸ್ ಇಲಾಖೆ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ವಿಭಿನ್ನ ಸಾಮರ್ಥ್ಯವುಳ್ಳ ಬಾಲಕಿ ಕು. ಸಾಧನ ಎಂ.ಪಾಟೀಲ್  ಆಸೆ ಇಂದು ಈಡೇರಿದೆ. ಅವಳ ಮೊಗದಲ್ಲಿ ಮಂದಹಾಸ ಮೂಡಿದೆ. ವಿಭಿನ್ನ ಸಾಮರ್ಥ್ಯವುಳ್ಳ ಬಾಲಕಿ ಕು. ಸಾಧನ ಆಸೆ/ಕೋರಿಕೆಯ ಮೇರೆಗೆ ಖಾಕಿ ಉಡುಪಿನಲ್ಲಿ ಇಂದು ಮಾನ್ಯ ಪೊಲಿಸ್ ಮಹಾ ನಿರೀಕ್ಷಕರವರು, ಪೂರ್ವ ವಲಯ, ದಾವಣಗೆರೆ ಕಛೇರಿಯಲ್ಲಿ ಡಾ. ಕೆ. ತ್ಯಾಗರಾಜನ್ ಐಪಿಎಸ್ ರವರೊಂದಿಗೆ ಪಕ್ಕದಲ್ಲಿ ಕೂತು ಬಾಲಕಿಗೆ ಫೋಟೋ ತೆಗೆಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು. ಖಾಕಿ ಉಡುಪಿನಲ್ಲಿ ಐಜಿಪಿ … Read more

ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ

ಸುದ್ದಿ360 ದಾವಣಗೆರೆ, ಜು.13:ಮುಂಬರುವ ದಿನಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಎಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾದರೂ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎ ಬಸವರಾಜ್ ಹೇಳಿದರು. ಬುಧವಾರ ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹೊನ್ನಾಳಿ-ನ್ಯಾಮತಿ ತಾಲ್ಲೂಕುಗಳ ಮಳೆ ಹಾನಿ ಕುರಿತು ವಿವಿಧ ಇಲಾಖೆಗಳ ವರದಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವ್ಯಾವ ಭಾಗದಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿದೆಯೋ ಆ ಪ್ರದೇಶಗಳ ನದಿ ಭಾಗದಲ್ಲಿ … Read more

ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಸುದ್ದಿ360 ದಾವಣಗೆರೆ, ಜು.13: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ನಿಜಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು. … Read more

ಕುರಿ, ಮೇಕೆ ಸಾಕಾಣಿಕೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ, ಜು.13: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವಯೋಮಿತಿಯ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದು. ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಪಶುಪಾಲನಾ … Read more

error: Content is protected !!