ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more

ದೇಹ ಮನಸ್ಸನ್ನು ಸದೃಢಗೊಳಿಸುವ ಆಟ-ಪಾಠಗಳಲ್ಲಿ ಕಿಕ್ ಕಂಡುಕೊಳ್ಳಿ

ವಿದ್ಯಾರ್ಥಿಗಳಿಗೆ ರೆಡ್‌ಕ್ರಾಸ್ ಜಿಲ್ಲಾ ಚೇರ್ಮನ್ ಡಾ.ಎ.ಎಂ. ಶಿವಕುಮಾರ್ ಕಿವಿಮಾತು ಸುದ್ದಿ360, ದಾವಣಗೆರೆ, ಜು.9: ಯುವ ಪೀಳಿಗೆ ಹೊಗೆ ಉಗುಳುವುದರಲ್ಲಿ, ಮದ್ಯ ಸೇವನೆಯಲ್ಲಿ ಕಿಕ್ ಕಂಡುಕೊಳ್ಳುತ್ತಿದೆ. ಅದರ ಬದಲು, ದೇಹ ಮತ್ತು ಮನಸನ್ನು ಸ್ಥಿಮಿತದಲ್ಲಿಡುವ ವಿವಿಧ ಆಟಗಳಲ್ಲಿ, ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವುದರಲ್ಲಿ ಹಾಗೂ ಉತ್ತಮ ಆಹಾರ ಸೇವಿಸುವುದರಲ್ಲಿ ಕಿಕ್ ಕಂಡುಕೊಂಡರೆ ಜೀವನ ಉತ್ತಮವಾಗುವುದರ ಜೊತೆಗೆ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ರೆಡ್‌ಕ್ರಾಸ್ ಜಿಲ್ಲಾ ಚೇರ್ಮನ್ ಡಾ.ಎ.ಎಂ. ಶಿವಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಡಿಆರ್‌ಎಂ ವಿಜ್ಞಾನ … Read more

ಶ್ರೀಶೈಲಕ್ಕೆ ಅ.10ರಿಂದ 80 ದಿನಗಳ ಧಾರ್ಮಿಕ, ಸಾಮಾಜಿಕ, ಜನಜಾಗೃತಿ ಪಾದಯಾತ್ರೆ

ಸುದ್ದಿ360, ದಾವಣಗೆರೆ, ಜು.08: ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣಮಹೋತ್ಸವದ ಅಂಗವಾಗಿ, ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಇದೇ ಬರುವ ಅ.10ರಿಂದ 2023ರ ಜ.15ರವರೆಗೆ 80 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಜನಜಾಗೃತಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಶ್ರೀಶೈಲ ಜಗದ್ಗುರು ಶ್ರೀ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು. ನಗರದ ಪಿಬಿ ರಸ್ತೆಯಲ್ಲಿರುವ ಶ್ರೀಶೈಲ ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಶುಕ್ರವಾರ … Read more

ಎಸ್ ಸಿ, ಎಸ್ ಟಿ ಮೀಸಲಾತಿಗಾಗಿ ಶ್ರೀಗಳ ಹೋರಾಟ ಬೆಂಬಲಿಸಿ ಜು.11ಕ್ಕೆ ಪ್ರತಿಭಟನೆ

ಸುದ್ದಿ360, ದಾವಣಗೆರೆ, ಜು.08: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಕಳೆದ 150 ದಿನಗಳಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿಗಾಗಿ ನಡೆಸುತ್ತಿರುವ  ಹೋರಾಟ ಬೆಂಬಲಿಸಿ ಜು.11ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾದಿಕಾರಿ ಕಚೇರಿ ಎದುರು  ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸ್ವಾಭಿಮಾನಿ ಎಸ್‌ಸಿ-ಎಸ್‌ಟಿ ಸಂಘಟನೆಗಳ ಒಕ್ಕೂಟದ ಸಂಚಾಲಕ ಹೊದಿಗೆರೆ ರಮೇಶ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ. ನಾಗಮೋಹನ್ ದಾಸ್ ವರದಿಯಂತೆ ಜನಸಂಖ್ಯೆ ಆಧಾರದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ … Read more

ದಾವಣಗೆರೆ ಮಹಾನಗರ ಪಾಲಿಕೆ ಆಡಳಿತ ವೈಫಲ್ಯ – ಪಾಲಿಕೆಗೆ ಬೀಗ ಜಡಿಯಲು ಮುಂದಾದ ಕಾಂಗ್ರೆಸ್

ಸುದ್ದಿ360, ದಾವಣಗೆರೆ, ಜು.08: ಮಹಾನಗರ ಪಾಲಿಕೆ ಆಡಳಿತ ನಡೆಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ, ಬಿಜೆಪಿ ನಗರದ ಕುಂದುಕೊರತೆಗಳನ್ನು ನಿವಾರಿಸುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ  ಎಂದು ಆರೋಪಿಸಿ  ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆಗಿಳಿದರು. ಬಿಜೆಪಿಯ ಆಡಳಿತದಿಂದ ರೋಸಿ ಹೋಗಿದ್ದ ಕಾಗ್ರೆಸ್ ಕಾರ್ಯಕರ್ತರು ಈ ವೇಳೆ ಪಾಲಿಕೆ  ಮುಖ್ಯದ್ವಾರಕ್ಕೆ ಬೀಗ ಜಡಿಯಲು ಮುಂದಾಗಿ, ಪೊಲೀಸರು ಇದನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರಪಾಲಿಕೆ ವಿಪಕ್ಷ ನಾಯಕ ಜಿ.ಎಸ್. ಗಡಿಗುಡಾಳ್ ಮಂಜುನಾಥ್, ನಗರದಾದ್ಯಂತ ಸಮಸ್ಯೆಗಳು ಉಲ್ಬಣಗೊಂಡಿವೆ. 5 ತಿಂಗಳಾದರೂ ಸಾಮಾನ್ಯಸಭೆ … Read more

ಜಿಎಂಐಟಿ:  750 ವಿದ್ಯಾರ್ಥಿಗಳಿಗೆ ಜಾಬ್ ಆಫರ್ – ಜು.15 ರಂದು ‘ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ’

ಮಧ್ಯ ಕರ್ನಾಟಕ ಭಾಗದ ಜಿಎಂಐಟಿಯಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸುದ್ದಿ360, ದಾವಣಗೆರೆ, ಜು.07: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 750 ಜಾಬ್ ಆಫರ್ಸ್ ಸ್ವೀಕರಿಸಿದ್ದಾರೆ. ಇದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸ್ವೀಕರಿಸಿದ ಎಂಜಿನಿಯರಿಂಗ್ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ. ವಿವಿಧ ಪ್ರತಿಷ್ಠಿತ ಕಂಪನಿಗಳಾದ ವಿಪ್ರೋ, ಇನ್ಫೋಸಿಸ್, ಕ್ಯಾಪ್ಜೆಮಿನಿ, ಟಿಸಿಎಸ್,    ಎನ್ ಟಿಟಿ ಡೇಟಾ, ಹೆಚ್ ಸಿ … Read more

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ

ಸುಸುದ್ದಿ360, ದಾವಣಗೆರೆ, ಜು.08: ಕೇಂದ್ರ ಸರ್ಕಾರವು ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯಿಂದ ನಗರದ ಗಾಂಧಿ ವೃತ್ತದ ಬಳಿ ಗುರುವಾರ ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಆಗ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐ (ಸಿ) ಜಿಲ್ಲಾ ಸಂಘಟನಾ ಸಮಿತಿಯ ಕಾರ್ಯದರ್ಶಿ ಕಾಂ. ಕೈದಾಳೆ ಮಂಜುನಾಥ್ ರವರು ಮಾತನಾಡುತ್ತಾ “ಕೇಂದ್ರ ಸರ್ಕಾರ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆಯನ್ನು … Read more

ಮಾದಕ ವಸ್ತು ಸೇವಿಸುವವರ ಮೇಲೂ ಕ್ರಮ, ಹುಷಾರ್ . . .

ಸುದ್ದಿ360, ದಾವಣಗೆರೆ, ಜು.07: ಮಾದಕ ವಸ್ತು ನಿಯಂತ್ರಿಸುವ ನಿಟ್ಟಿನಲ್ಲಿ ಮಾದಕ ಸೇವಿಸುವವರ ಮೇಲೆಯೂ ಕಠಿಣ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ  ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೌಕರರು, ವಿದ್ಯಾರ್ಥಿಗಳು ಆಗಿರುತ್ತಾರೆ ಎಂಬ ಕಾರಣದಿಂದ  ಮಾದಕ ದ್ರವ್ಯ ಸೇವಿಸುವವರ ಮೇಲೆ ಮೃದು ಧೋರಣೆಯನ್ನು ಹೊಂದಲಾಗಿತ್ತು. … Read more

ಸಣ್ಣ ವಿಚಾರವೆಂದು ನಿರ್ಲಕ್ಷಿಸದೆ ಸೂಕ್ತ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಸುದ್ದಿ360, ದಾವಣಗೆರೆ, ಜು.07: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ನಿರ್ವಹಣೆ ನಡೆಯುತ್ತಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ  ಎಂದು  ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಎರಡೂ ಜಿಲ್ಲೆಗಳ ಕಾರ್ಯ ನಿರ್ವಹಣೆಯನ್ನು ಪ್ರಶಂಸಿಸಿದರು. ಇದು  ಔಪಚಾರಿಕ ಭೇಟಿಯಾಗಿದ್ದು, ಇಂದಿನ ಸಭೆಯಲ್ಲಿ ಕೆಲವು ಸಲಹೆ ಸೂಚನೆಗಳನ್ನು ನೀಡಲಾಗಿದ್ದು, ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಗುರುತಿಸಿ ರಿವಾರ್ಡ್ ನೀಡುವ ಮೂಲಕ ಕರ್ತವ್ಯದಕ್ಷತೆ ಹೆಚ್ಚುವಂತೆ ಮೋಟಿವೇಟ್ ಮಾಡುವ ನಿಟ್ಟಿನಲ್ಲಿ ಇಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. … Read more

ಜು. 9,10ರಂದು ಧರ್ಮ ಸಮಾರಂಭ ಹಾಗೂ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ

ಸುದ್ದಿ360 ದಾವಣಗೆರೆ.ಜು.07:  ಶ್ರೀ ಮದ್ ರಂಭಾಪುರಿ ಜಗದ್ಗುರುಗಳ ಹಾಗೂ ಶ್ರೀ ಹಿಮವತ್ಕೇದಾರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪರಂಪರೆ ಪುನರ್‌ಮನನ ಧರ್ಮ ಸಮಾರಂಭ ಹಾಗೂ ಶ್ರೀ ಕೇದಾರ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಮಾರಂಭ ಜು.9 ಮತ್ತು 10ರಂದು ನಗರದ ಪಿಬಿ ರಸ್ತೆಯ ತ್ರಿಶೂಲ್ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪೂಜಾ ಸಮಿತಿ ಸದಸ್ಯರು, ಧೂಡ ಅಧ್ಯಕ್ಷರೂ ಆದ ಕೆ.ಎಂ. ಸುರೇಶ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಧುನಿಕತೆಯ ಇಂದಿನ ದಿನಮಾನಗಳಲ್ಲಿ ಕೂಡು ಕುಟುಂಬದ ಪರಿಕಲ್ಪನೆ ಮರೆಯಾಗಿದ್ದು, ಪತಿ, ಪತ್ನಿ … Read more

error: Content is protected !!