ಪ್ರಧಾನಿಗಳೇ ರೈತರ ಸಂಕಷ್ಟ ಗಮನಿಸಿ: ದಾವಣಗೆರೆಯಲ್ಲಿ ರೈತರ ಕೂಗು

ಸುದ್ದಿ360 ದಾವಣಗೆರೆ, ಜೂ.20: ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ, ಕನಿಷ್ಠ ಬೆಂಬಲ ಬೆಲೆಯಿಂದ ಮಾರುಕಟ್ಟೆಯಲ್ಲಿ ಅನುಭವಿಸಿರುವ ನಷ್ಟಗಳ ವಿವರವನ್ನು ರಾಜ್ಯ ಪ್ರವಾಸದಲ್ಲಿರುವ ಪ್ರದಾನಿ ಮೋದಿಯವರ ಗಮನ ಸೆಳೆಯುವ ಉದ್ದೇಶದಿಂದ ರೈತರು ಇಂದು ರೈತ  ಉತ್ಪನ್ನಗಳೊಂದಿಗೆ ಮೆರವಣಿಗೆ ನಡೆಸಿ  ಉಪವಿಭಾಗಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸುತ್ತಿರುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್‍ ತಿಳಿಸಿದರು. ನಗರದಲ್ಲಿ ಸೋಮವಾರ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಕೃಷಿ ಉತ್ಪನ್ನಗಳನ್ನು ತಳ್ಳುವ … Read more

ಯೋಗಾಭ್ಯಾಸದಲ್ಲಿ ಹರಿಹರ ಶಾಸಕ ಎಸ್‍ ರಾಮಪ್ಪ

ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.

ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ

ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ವಚನ ಸಾಹಿತ್ಯ ಪರಿಷತ್, ರಾಜ್ಯ ಸಮಾನ ಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡಾ ಸೇವಾ ಒಕ್ಕೂಟ, ತೆಲಿಗಿ ಸ್ಫೂರ್ತಿ ಪ್ರಕಾಶನ, ಯೋಗಾನಂದ ಯೋಗಕೇಂದ್ರ, ಬಜ್ಜಿ … Read more

ಕಾಲೇಜಿನ ಆದಿನಗಳು ವ್ಯಕ್ತಿಯ ಬಾಳಿನ ಸುವರ್ಣ ಕಾಲ: ಎಸ್‍ಪಿ ರಿಷ್ಯಂತ್‍

ಗೋಲ್ಡನ್‍ ಮೆಮೋರೀಸ್‍ಗೆ ಮರುಜೀವ ನೀಡಿದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಗೋಲ್ಡನ್‍ ಗ್ರೂಪ್‍ ಸುದ್ದಿ360 ದಾವಣಗೆರೆ, ಜೂ.19: ಕಾಲೇಜು ದಿನಗಳ ನೆನಪುಗಳು ವ್ಯಕ್ತಿಯ ಜೀವನದಲ್ಲಿ ಸದಾ ಹಚ್ಚ ಹಸಿರಾಗಿರುತ್ತವೆ. ಇವು ಜೀವನದ ಕಡೆಯವರೆಗೂ ನೆನಪಿನಲ್ಲಿ ಇರುವಂತವುಗಳಾಗಿದ್ದು, ಸುವರ್ಣ ಕಾಲವಿದ್ದಂತೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ 1989-90ನೇ ಸಾಲಿನ ವಿದ್ಯಾರ್ಥಿಗಳ ಗೋಲ್ಡನ್ ಮೆಮೋರಿಸ್ ಗ್ರೂಪ್ ವತಿಯಿಂದ ನಗರದ ಎಸ್.ಎಸ್. ಬಡಾವಣೆಯಲ್ಲಿನ ಆಫೀಸರ್ಸ್‌ ಕ್ಲಬ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ … Read more

ಸರ್‌ಎಂವಿ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ಪಿಯುಸಿ ಪರೀಕ್ಷೆಯಲ್ಲಿ ನಗರದ ಸರ್‌ಎಂವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜಿಯಾ ಎಂ. ಜೈನ್ 589 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಎಂ.ಎಸ್. ಶ್ರೇಷ್ಠ 587 ಹಾಗೂ ಜಿ. ಕಾರ್ತಿಕ 587 ಅಂಕ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉತ್ತಮ್ ಹಂಸರಾಜ್ ಹಾಗೂ ಕುಮಾರಿ ಎಂ.ಎಸ್. ಸೃಷ್ಟಿ 590 ಅಂಕ ಗಳಿಸಿ ಕಾಲೇಜಿಗೆ ಪ್ರಥಮ … Read more

ಮಾಗನೂರು ಬಸಪ್ಪ ಕಾಲೇಜಿಗೆ ಶೇ.96 ಫಲಿತಾಂಶ – ಜಿ.ಡಿ. ರಕ್ಷಿತ ಟಾಪರ್

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾಗನೂರು ಬಸಪ್ಪ ಕಾಲೇಜು ವಿದ್ಯಾರ್ಥಿಗಳನ್ನು ನಿರ್ದೇಶಕ ಡಾ.ಜಿ.ಎನ್.ಎಚ್. ಕುಮಾರ್, ಪ್ರಾಚಾರ್ಯ ಡಾ.ಎಸ್. ಪ್ರಸಾದ್ ಬಂಗೇರಾ ಅಭಿನಂದಿಸಿದರು. ಸುದ್ದಿ360 ದಾವಣಗೆರೆ, ಜೂನ್ 18: ನಗರದ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ಪಡೆದಿದ್ದು, ಜಿ.ಡಿ. ರಕ್ಷಿತ 592 ಅಂಕ ಪಡೆದು ರಾಜ್ಯಕ್ಕೆ 6ನೇ ರ್ಯಾಂಕ್ ಹಾಗೂ ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಪ್ರಸಕ್ತ ಸಾಲಿನಲ್ಲಿ 216 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, … Read more

ಸೈನ್ಸ್ ಅಕಾಡೆಮಿಗೆ ಉತ್ತಮ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಎಚ್.ಡಿ. ಸುಪ್ರೀತಾ 591 ಅಂಕ (ಶೇ.98.5) ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೀತಮ್ ವಿ. ದಿವಾಕರ 587(ಶೇ.97.83), ಜೆ. ಸಹನಾ 584(ಶೇ.97.33), ಕೆ.ಜೆ. ತೇಜಸ್ವಿನಿ 584(ಶೇ.97.33) ಹಾಗೂ ಸಿ.ಎ. ಯಶೋಧಾ 584(ಶೇ.97.33) ಅಂಕ ಪಡೆದು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಹಂಚಿಕೊAಡಿದ್ದಾರೆ. … Read more

ಸಿದ್ಧಗಂಗಾ ಕಾಲೇಜಿಗೆ ಉತ್ತಮ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ದಾವಣಗೆರೆಯ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಎಲ್. ವಿನಾಯಕ 593 ಅಂಕ ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂ.ಡಿ. ಚಿನ್ಮಯ್ 591, ಎಸ್.ಆರ್. ರಕ್ಷಿತಾ 589, ದಿವ್ಯಶ್ರೀ 589, ಸೋನು ನಿಂಗರೆಡ್ಡಿ 588, ರಾಘವೇಂದ್ರ 587, ವಿ. ಕಿರಣ್ ಗಿ 586, ಮಂಜುನಾಥ ಸ್ವಾಮಿ 586, ಎನ್.ಯು. ಪೂಜಾ 585 , ಟಿ.ಎ. ಶಾಹಿದ್ … Read more

ಪಿಯುಸಿ ಫಲಿತಾಂಶ: ದಾವಣಗೆರೆಗೆ 19ನೇ ಸ್ಥಾನ – ಕಾವ್ಯ ಎಂ.ಜಿ. ಜಿಲ್ಲೆಗೆ ಟಾಪರ್

ಸುದ್ದಿ360 ದಾವಣಗೆರೆ, ಜೂ.18: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಎಂದಿನAತೆ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಅತಿ ಕಡಿಮೆ ಫಲಿತಾಂಶ ಲಭ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಶೇ.62.72 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಜಿಲ್ಲೆ ರಾಜ್ಯ ಮಟ್ಟದಲ್ಲಿ 19ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 19,725 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 11,568 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದ 6302ರಲ್ಲಿ 2473 ವಿದ್ಯಾರ್ಥಿಗಳು(ಶೇ.39.24) ತೇರ್ಗಡೆಯಾಗಿದ್ದು, ವಾಣಿಜ್ಯ … Read more

ಜೂ.21, ದಾವಣಗೆರೆ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ

ಸುದ್ದಿ360 ನವದೆಹಲಿ, ಜೂನ್ 18: ಜಿಲ್ಲಾ ಆಡಳಿತದಿಂದ ಜೂನ್ 21 ರಂದು ನಡೆಯುವ 8 ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು ಜಿಲ್ಲೆಯ 3 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಮಾಡುವ ಮೂಲಕ ಯೋಗಾಭ್ಯಾಸವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಅವರು ಜೂನ್.17 ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಔಪಚಾರಿಕವಾಗಿ ಪತ್ರಕರ್ತರೊಂದಿಗೆ ಮಾತನಾಡಿದರು. ಯೋಗ ದಿನಾಚರಣೆಯನ್ನು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತೀಯ ಪುರಾತತ್ವ ಇಲಾಖೆ, ಸ್ಮಾರ್ಟ್ ಸಿಟಿ ಲಿಮಿಟೆಡ್, … Read more

error: Content is protected !!