ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ: ಡಾ. ನಾಗರಾಜ್

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ 2022 ದಾವಣಗೆರೆ ಜೂ.14 : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅವರು ಹೇಳಿದರು. ಮಂಗಳವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು … Read more

2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಲು ಎಂ.ಸಿ.ವೇಣುಗೋಪಾಲ್ ಕರೆ

ದಾವಣಗೆರೆ, ಜೂ.14: ದೇಶ ಎತ್ತ ಸಾಗುತ್ತಿದೆ ಎಂದು ಯೋಚನೆ ಮಾಡಬೇಕಾದ ಸ್ಥಿತಿ ಇಂದು ಬಂದೊದಗಿದೆ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರ ರಕ್ಷಣೆ, ಎಲ್ಲರೂ ನೆಮ್ಮದಿಯಿಂದ ಬಾಳುವ, ಯುವ ಜನರಿಗೆ ಉದ್ಯೋಗ ಒದಗಿಸುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಕರೆ ನೀಡಿದರು. ನಗರದ ಬಾಪೂಜಿ ಎಂಬಿಎ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ನವಸಂಕಲ್ಪ ಚಿಂತನಾ ಶಿಬಿರದ ಉದ್ಘಾಟಸಿ ಮಾತನಾಡಿ, ಕಾಂಗ್ರೆಸ್‌ಗೆ ಅಧಿಕಾರ ಮುಖ್ಯವಲ್ಲ. ದೇಶದ ಮತ್ತು ಕರ್ನಾಟಕದ ಜನತೆಯ ರಕ್ಷಣೆ ಅತೀ … Read more

ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ

ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಎಂಥವರಿಗೂ ಕಣ್ಣಿಗೆ ಕಾಣಿಸುವಂತಿದೆ. ಒಂದೊಮ್ಮೆ ಅವರು ತಪ್ಪು ಮಾಡಿಲ್ಲ, ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದಾದರೆ ತನಿಖೆಗೆ ಸಹಕರಿಸಬೇಕಿತ್ತು. ಕೋರ್ಟ್‌ಗೆ ಹಾಜರಾಗಿ ಅಲ್ಲಿ ಬರುವ ತೀರ್ಪನ್ನು … Read more

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜೂ.14 : ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು ದಾವಣಗೆರೆ ತಾಲ್ಲೂಕಿನ ಹಳೆ ಬಿಸಲೇರಿ ಗ್ರಾಮದಲ್ಲಿ ದಾನಿಗಳಾದ ಶ್ರೀಮತಿ ಗೌರಮ್ಮ ಕುಂದೂರು ವೀರಭದ್ರಪ್ಪ ಟ್ರಸ್ಟ್ ಹಾಗೂ ಕುಂದೂರು ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರುಗಳು ನಿರ್ಮಿಸಿರುವ ನೂತನ ಶಾಲಾ ಕಟ್ಟಡದ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿ … Read more

ದಾವಣಗೆರೆಯ ನಿಂಚನ ಶಾಲೆಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ, ಜೂ.13:  ನಗರದ ನಿಟ್ಟುವಳ್ಳಿಯ ನಿಂಚನ ಪಬ್ಲಿಕ್ ಶಾಲೆಯಲ್ಲಿ ಜೂ.14ರಂದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆ ಉಪಾಧ್ಯಕ್ಷೆ ಎಂ.ಎಸ್. ರೂಪಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ  ಅವರು, ದಾವಣಗೆರೆ ರಕ್ತ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಜಿಲ್ಲಾಕಾರಿ ಮಹಾಂತೇಶ ಬೀಳಗಿ ಉದ್ಘಾಟಿಸುವರು. ಎಸ್ಪಿ ಸಿ.ಬಿ. ರಿಷ್ಯಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೇಯರ್ ಜಯಮ್ಮ ಗೋಪಿನಾಯ್ಕ್, ಇನ್ಸ್‌ಪೆಕ್ಟರ್ ತ್ಯಾಗರಾಜ್, ಪಾಲಿಕೆ ಸದಸ್ಯರಾದ ವೀರೇಶ್, ಗಣೇಶ್, ಉಮಾ ಪ್ರಕಾಶ್ ಪಾಲ್ಗೊಳ್ಳುವರು ಎಂದರು. … Read more

ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ ವಲಯದ ಹಳೇ ಬಿಸಲೇರಿಯ ಕುಂದೂರು ಮುರಿಗೆಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸುವರು. ತದ ನಂತರ ಮಧ್ಯಾಹ್ನ 3 ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಇಲಾಖಾ … Read more

ಜೂ.24ಕ್ಕೆ ಬೆಳ್ಳಿತೆರೆಯ ಮೇಲೆ ‘ತ್ರಿವಿಕ್ರಮ’

ನಾಯಕ ವಿಕ್ರಮ್, ನಾಯಕಿ ಆಕಾಂಕ್ಷಾ ಶರ್ಮಾ ಡ್ಯಾನ್ಸ್ ಗೆ ಯುವಪಡೆ ಫಿದಾ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ಮೊದಲ ಚಿತ್ರ ದಾವಣಗೆರೆ, ಜೂ.13: ದಾವಣಗೆರೆ ಜನ ನಮ್ಮ ತಂದೆಯನ್ನು ಅತ್ಯಂತ ಪ್ರೀತಿಯಿಂದ ಆಧರಿಸಿದ್ದಾರೆ. ಅಣ್ಣನಿಗೂ ಅದೇ ಪ್ರೀತಿ ಸಿಕ್ಕಿದೆ. ಇದೇ 24ರಂದು ನಗರದ ಅಶೋಕ ಚಿತ್ರಮಂದಿರದಲ್ಲಿ ನನ್ನ ಮೊದಲ ಚಿತ್ರ ‘ತ್ರಿವಿಕ್ರಮ’ ಬಿಡುಗಡೆಯಾಗಲಿದೆ.  ಬೆಣ್ಣೆ ನಗರಿ ಜನ ನನಗೂ ಅಷ್ಟೇ ಪ್ರೀತಿ ಕೊಟ್ಟು ಬೆಂಬಲಿಸುತ್ತಾರೆ ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ವಿಶ್ವಾಸ ವ್ಯಕ್ತಪಡಿಸಿದರು. … Read more

ಕೇಂದ್ರ ಸರಕಾರದಿಂದ ದ್ವೇಷದ ರಾಜಕೀಯ

ದಾವಣಗೆರೆ, ಜೂ.13:  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಾ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಕೇಂದ್ರ ಸರಕಾರ, ನೆಹರು ಕುಟುಂಬದ ವಿರುದ್ಧ ಇ.ಡಿ, ಐಟಿ ದಾಳಿ ಮಾಡಿಸುವ ಮೂಲಕ ಕೀಳು ಮಟ್ಟದ ರಾಜಕೀಯ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ನೆಹರು ಕುಟುಂಬದ ವಿರುದ್ಧ ಹಗೆ ಸಾಧಿಸುತ್ತಿರುವ ಕೇಂದ್ರ ಸರಕಾರ, … Read more

ಎಸ್.ಎಸ್. ಕಪ್ ಕ್ರಿಕೆಟ್ ಬಹುಮಾನ ವಿತರಣೆ

ದಾವಣಗೆರೆ, ಜೂ.12: ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ  ಡಾ.ಶಾಮನೂರು ಶಿವಶಂಕರಪ್ಪನವರ 92ನೇ ಜನ್ಮದಿನದ ಅಂಗವಾಗಿ 20ನೇ ಬಾರಿಗೆ ಆಫಿಷಿಯಲ್ ಮತ್ತು ಎಸ್.ಎಸ್ ಕಪ್ ಕ್ರಿಕೆಟ್ ಪಂದ್ಯಾವಳಿ ಅದ್ದೂರಿಯಾಗಿ ನಡೆಸಲಾಯಿತು .         ಈ ಪಂದ್ಯಾವಳಿಯ ಬಹುಮಾನ ವಿತರಣೆ ಸಮಾರಂಭವನ್ನು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಮತ್ತು  ಉಪಾಧ್ಯಕ್ಷರಾದ  ಶಿವಗಂಗಾ ಶ್ರೀನಿವಾಸ್ ಹಾಗೂ ಪಂದ್ಯಾವಳಿಯ ವ್ಯವಸ್ಥಾಪಕರಾದ ಜಯಪ್ರಕಾಶ್ ಗೌಡ  ಅವರು ಬಹುಮಾನ ವಿತರಣೆ ಮಾಡಿದರು. ಪಂದ್ಯಾವಳಿಯಲ್ಲಿ  … Read more

ದಾವಣಗೆರೆಯಲ್ಲಿ ಜೂ.12ರ ರಾತ್ರಿ ೧೦ಗಂಟೆವರೆಗೆ ನಿಷೇಧಾಜ್ಞೆ

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ: ಎಸ್‌ಪಿ ದಾವಣಗೆರೆ, ಜೂ.11: ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ (ಜೂ.12) ರಾತ್ರಿ 10 ಗಂಟೆವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಕ್ಷನ್ ೧೪೪ ಜಾರಿಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರವಾದಿ ಮೊಹಮ್ಮದರ ವಿರುದ್ಧ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ದೇಶಾದ್ಯಂತ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ … Read more

error: Content is protected !!