ಗಣೇಶ ಹಬ್ಬ – ಈದ್‍ ಮಿಲಾದ್‍ಗೆ ಮುನ್ನ ನಾಗರೀಕ ಸೌಹಾರ್ಧತೆ ಸಭೆ – ಅಭಿಪ್ರಾಯ ಸಲಹೆಗೆ ಕಿವಿಯಾದ ಜಿಲ್ಲಾ ವರಿಷ್ಠರು

ಸುದ್ದಿ360, ದಾವಣಗೆರೆ ಸೆ.6: ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆ ನಡೆಯಿತು. ಸಭೆಯಲ್ಲಿ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬವನ್ನು ಎಲ್ಲಾ ನಾಗರಿಕರು ಸೌಹಾರ್ಧಯುತವಾಗಿ ಆಚರಿಸಲು ತಿಳಿಸಲಾಯಿತು.   ಸಭೆಯಲ್ಲಿ ವಿವಿಧ ಕೋಮಿನ ಮುಖಂಡರುಗಳು ಹಾಗು ಮಹಾನಗರ ಪಾಲಿಕೆಯ ಸದಸ್ಯರುಗಳು ಗಣೇಶ ಹಬ್ಬ ಹಾಗು ಈದ್ … Read more

ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕೃಷ್ಣ-ರಾಧೆಯರ ಕಲರವ – ಪದ್ಮಾವತಿ ಡಿ ವೆರ್ಣೇಕರ್ ಇವರಿಗೆ ಪ್ರತಿಭಾ ಅಕಾಡೆಮಿಯಿಂದ ಬೆಸ್ಟ್ ಟೀಚರ್ ಪ್ರಶಸ್ತಿ

ಸುದ್ದಿ360, ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಶಾಲೆಯ ತುಂಬೆಲ್ಲಾ ಕೃಷ್ಣ- ರಾಧೆಯ ಅಲಂಕಾರದೊಂದಿಗೆ ಆಗಮಿಸಿದ್ದ ಚಿಣ್ಣರ ಕಲರವ ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು. ಮಕ್ಕಳು ಶ್ರೀಕೃಷ್ಣನ ನುಡಿಗಳು, ಭಗವದ್ಗೀತಾ ಪಠಣ, ಹಾಡು ಮತ್ತು   ನೃತ್ಯಗಳನ್ನು  ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಂತರದಲ್ಲಿ ಕಟ್ಟಿದ್ದ  ಬೆಣ್ಣೆಯ ಮಡಕೆಯನ್ನು ಒಡೆದು ಬೆಣ್ಣೆ ಕದಿಯುವ ರೂಪಕವನ್ನು ನೃತ್ಯದ ಮೂಲಕ ನಡೆಸಿಕೊಟ್ಟ  ಕೃಷ್ಣ ಮತ್ತು ರಾಧೆ ವೇಶಾಧಾರಿ … Read more

ಜಿಎಂಐಟಿ – ಎಂಬಿಎ ವಿಭಾಗದ “ದಿಶಾ ಫೋರಂ” ಸಮಾರೋಪ ಮತ್ತು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಸುದ್ದಿ360, ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ 2023 ನೇ ಸಾಲಿನ ಎಂ ಬಿ ಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ವಿಭಾಗದ ದಿಶಾ ಪೊರಂ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಬಹಳ ಅದ್ದೂರಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಉಡುಗೆ ತೊಡುಗೆ ಗಳಲ್ಲಿ ಮಿಂಚುತ್ತಾ  ಲವಲವಿಕೆಯಿಂದ ಪಾಲ್ಗೊಂಡಿದ್ದು ಹರ್ಷವನ್ನುಂಟು ಮಾಡಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಟೆಕ್ಯೂಡ್ ಲ್ಯಾಬ್ಸ ಸಂಸ್ಥಾಪಕ ಮತ್ತು ವ್ಯವಸ್ಥಾಪಕ … Read more

ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ- ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ

ಸುದ್ದಿ360, ದಾವಣಗೆರೆ, ಸೆ.9: ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.9 ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮಂಗಳವಾರ ರಾತ್ರಿಯ ಊಟಕ್ಕೆ ಮಾಡಲಾದ ಅನ್ನ ಸರಿಯಾಗಿ ಬೇಯಿಸದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿರುತ್ತದೆ. ಈ ವಿದ್ಯಾರ್ಥಿಗಳನ್ನು ತಕ್ಷಣ … Read more

ಮಕ್ಕಳಲ್ಲಿ ಶಿಸ್ತು- ಸಂಸ್ಕಾರಕ್ಕೆ ಶಿಕ್ಷಕರ ಪಾತ್ರ ದೊಡ್ಡದು: ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ಅಭಿಮತ

ಸುದ್ದಿ360, ದಾವಣಗೆರೆ: ಮಕ್ಕಳಲ್ಲಿ ಶಿಸ್ತು ಮತ್ತು ಸಂಸ್ಕಾರವನ್ನ ಹೇಳಿಕೊಡುವಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗದಿಂದ ಶಿಕ್ಷಕರ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ತಾಯಿಯೇ ಮೊದಲ ಗುರು ಹಾಗೂ ಶಿಕ್ಷಕರೇ ಎರಡನೇ ಗುರು ಎಂದು ತಿಳಿಸಿದರು. ಮಕ್ಕಳು ಉತ್ತಮ ಶಿಕ್ಷಣದೊಂದಿಗೆ ಭಾರತಾಂಬೆಯ ಹೆಮ್ಮೆಯ ಮಕ್ಕಳಾಗಿ ಹೊರಹೊಮ್ಮುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಕ.ರಾ.ಮ.ಸಾ.ಪ. ದಾವಣಗೆರೆ ದಕ್ಷಿಣ … Read more

ದಾವಣಗೆರೆ – ಆ.30 ರಂದು ವಾಕ್ ಇನ್ ಇಂಟರ್‍ವೀವ್

ಸುದ್ದಿ360 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಇಂಟರ್‍ವೀವ್ ಅನ್ನು ಆಯೋಜಿಸಲಾಗಿದೆ. ವಾಕ್ ಇನ್ ಇಂಟರ್‍ವೀವ್‍ನಲ್ಲಿ ದಾವಣಗೆರೆಯ ಎಲ್ & ಟಿ ಫೈನಾನ್ಸಿಯಲ್ ಸರ್ವೀಸಸ್ ಇವರು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಮೈಕ್ರೋ ಲೋನ್ ಆಫೀಸರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ … Read more

ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ : ಬಸವರಾಜ ಬೊಮ್ಮಾಯಿ

ಭ್ರಷ್ಟಾಚಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು ಹಳಿ ತಪ್ಪಿದ ಆಡಳಿತ ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ … Read more

ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ

ಸುದ್ದಿ360 ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ  ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ವೇದಿಕೆ ಹಾಗೂ ನೇರಪ್ರಸಾರದ ಸಿದ್ದತೆ ಸೇರಿದಂತೆ ಆಗಮಿಸುವ ಫಲಾನುಭವಿಗಳಿಗೆ ಊಟೋಪಚಾರದ ಬಗ್ಗೆ ಕೈಗೊಂಡಿರುವ ಸಿದ್ದತೆಯನ್ನು ಜಿಲ್ಲಾಧಿಕಾರಿ ಡಾ. ವೆಂಕಟೇಶ್ … Read more

ಆ.30: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರವರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

gruhalakshmi-karnataka-suddi360

ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಆ.30ರ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ರವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಾ. ಶಾಮನೂರು ಶಿವಶಂಕರಪ್ಪನವರು, ಡಿ.ಜಿ ಶಾಂತನಗೌಡ್ರು, ಶಿವಗಂಗಾ ಬಸವರಾಜ್, ಬಿ.ದೇವೇಂದ್ರಪ್ಪ, ಕೆ.ಎಸ್ ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, … Read more

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ 9 ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ ಪ್ರಕಟ

davangere varadigarara kuta madhyama prashasti

ಸುದ್ದಿ360 ದಾವಣಗೆರೆ : ದಾವಣಗೆರೆ ಜಿಲ್ಲಾ ವರದಿಗಾರರ ಕೂಟವು ಪ್ರತಿವರ್ಷದಂತೆ ಈ ಬಾರಿಯೂ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, 9 ಜನ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಇದೇ ಆ.27ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿರುವ ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾಧ್ಯಮ ಪ್ರಶಸ್ತಿ ನೀಡುವ ಸಲುವಾಗಿ ರಚಿಸಲಾಗಿದ್ದ ಸಮಿತಿ ಸೋಮವಾರ ನಡೆದ ಸಭೆಯಲ್ಲಿ ಒಂಭತ್ತು ಜನ ಪತ್ರಕರ್ತರನ್ನು ಆಯ್ಕೆ ಮಾಡಿದೆ. ಕನ್ನಡ ಭಾರತಿ ಸಂಪಾದಕ ಮಲ್ಲಿಕಾರ್ಜುನ ಕಬ್ಬೂರ್, … Read more

error: Content is protected !!